ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


VIDEO: ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಬಾಲಕ ಮೃತ್ಯು

Posted by Vidyamaana on 2024-05-06 20:08:01 |

Share: | | | | |


VIDEO: ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಬಾಲಕ ಮೃತ್ಯು

Cricket Video: ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಬಡಿದು ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ಪುಣೆಯಲ್ಲಿ ನಡೆದಿರುವ ಈ ದಾರುಣ ಘಟನೆಯ ವಿಡಿಯೋ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕನೋರ್ವ ಮೃತಪಟ್ಟಿರುವ ದಾರುಣ ಘಟನೆ ಪುಣೆಯಲ್ಲಿ ನಡೆದಿದೆ.ಸ್ನೇಹಿತರೊಂದಿಗೆ ಕ್ರಿಕೆಟ್ (Cricket) ಆಡಲು ಹೋಗಿದ್ದ 11 ವರ್ಷದ ಶೌರ್ಯ ಮೃತಪಟ್ಟ ದುರ್ದೈವಿ. ಪುಣೆಯ ಲೋಹಗಾಂವ್‌ನಲ್ಲಿರುವ ಜಗದ್ಗುರು ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಶೌರ್ಯ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಬ್ಯಾಟ್ಸ್​ಮನ್ ಬಾರಿಸಿದ ಚೆಂಡು ನೇರವಾಗಿ ಬೌಲಿಂಗ್ ಮಾಡುತ್ತಿದ್ದ ಶೌರ್ಯ ಅವರ ಖಾಸಗಿ ಭಾಗಕ್ಕೆ ಬಲವಾಗಿ ಬಡಿದಿದೆ.

ಚೆಂಡು ಬಡಿದ ರಭಸದಿಂದ ನಿತ್ರಾಣಗೊಂಡಿದ್ದ ಬಾಲಕ ಹೆಜ್ಜೆಯಿಡುತ್ತಲೇ ಕುಸಿದು ಬಿದ್ದಿದ್ದಾನೆ. ಈ ವೇಳೆ ಸ್ನೇಹಿತರು ಉಪಚರಿಸಿ ಎಚ್ಚರಿಸಲು ಪ್ರಯತ್ನಿಸಿದ್ದಾರೆ. ಆದರೆ ಶೌರ್ಯ ಕಡೆಯಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ.


ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

Posted by Vidyamaana on 2024-03-31 11:00:28 |

Share: | | | | |


ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು :ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ಮಾ 31ರಂದು ನೆಲಪ್ಪಾಲಿನ ಬೂತ್ ಸಂಖ್ಯೆ 63 ರಲ್ಲಿ ಚಾಲನೆ ನೀಡಲಾಯಿತು , ಈ ಸಂಧರ್ಭದಲ್ಲಿ ಎಪ್ರಿಲ್ 2ರಂದು ನಡೆಯುವ ಕಾರ್ಯಕರ್ತರ ಸಮಾವೇಶದ ಮಾಹಿತಿ ನೀಡಲಾಯಿತು .

ಮಂಗಳೂರಿಗೆ ಆಗಮಿಸಿದ ಸಿ ಎಂ ಸಿದ್ದರಾಮಯ್ಯ

Posted by Vidyamaana on 2023-08-01 06:14:32 |

Share: | | | | |


ಮಂಗಳೂರಿಗೆ ಆಗಮಿಸಿದ ಸಿ ಎಂ ಸಿದ್ದರಾಮಯ್ಯ

ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.


ಈ ಸಂದರ್ಭದಲ್ಲಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು.


ಇದೇ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕೂಡಾ ಆಗಮಿಸಿದ್ದಾರೆ.


ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ವಸಂತ ಬಂಗೇರ,ಜಿಲ್ಲಾಧಿಕಾರಿ ಮುಲ್ಫ್ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಯುಕುಮಾರ್, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು

ಪತ್ನಿಯನ್ನು ಕೊಂದು ಮೂರು ದಿನ ಹೆಣದ ಜೊತೆಗಿದ್ದ ಪಾಪಿ

Posted by Vidyamaana on 2024-03-03 21:28:56 |

Share: | | | | |


ಪತ್ನಿಯನ್ನು ಕೊಂದು ಮೂರು ದಿನ ಹೆಣದ ಜೊತೆಗಿದ್ದ ಪಾಪಿ

ಗಾಜಿಯಾಬಾದ್ : ಮೊದಲ ಹೆಂಡತಿಗೆ ಹಣ(first wife) ನೀಡುವ ವಿಚಾರವಾಗಿ ಎರಡನೇ ಹೆಂಡತಿಯ(Second Wife) ಜೊತೆ ನಡೆದ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು , ಕೊಲೆಗಡುಕ ಪತಿ ಮೂರು ದಿನಗಳ ಕಾಲ ಪತ್ನಿ ಶವದೊಂದಿಗೆ ಕಳೆದ ಘಟನೆ ಗಾಜಿಯಾಬಾದ್‌ನಲ್ಲಿ ಬೆಳಕಿಗೆ ಬಂದಿದೆ.ಫೆ.27ರಂದು ಭರತ್‌ (55) ಎಂಬ ವ್ಯಕ್ತಿ ಪತ್ನಿ ಸುನಿತಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದು , ಬಳಿಕ ಶವವನ್ನು ಮಂಚದ ಮೇಲೆ ಮಲಗಿಸಿದ್ದಾನೆ.ಮಾರ್ಚ್‌ 1 ರಂದು ಮನೆಯನ್ನು ಲಾಕ್‌ ಮಾಡಿ ಕೆಲಸಕ್ಕೆ ತೆರಳಿದ್ದು ಮನೆಯಿಂದ ದುರ್ನಾತ ಬರುತ್ತಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಮಾ.2 ರಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಸ್ಥಳಕ್ಕೆ ಆಗಮಿಸಿದ ಗಾಜಿಯಾಬಾದ್‌ ಪೊಲೀಸರು ಭರತ್ ವಿಚಾರಣೆ ನಡೆಸಿದಾಗ ಹೆಂಡತಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಮೂರರಿಂದ ನಾಲ್ಕು ದಿನಗಳ ಕಾಲ ಸಿಂಗಲ್ ಬೆಡ್‌ರೂಂ ಮನೆಯಲ್ಲಿ ಶವದ ಜೊತೆ ಭರತ್‌ ಸಮಯ ಕಳೆದಿದ್ದು ವರದಿಯಾಗಿದೆ.

18ನೇ ಲೋಕಸಭೆಯ ಮೊದಲ ಅಧಿವೇಶನ - ದೇಶದ ಅಭಿವೃದ್ದಿಯೇ ನಮ್ಮ ಮೊದಲ ಆದ್ಯತೆ: ಪ್ರಧಾನಿ ನರೇಂದ್ರ ಮೋದಿ

Posted by Vidyamaana on 2024-06-24 11:19:26 |

Share: | | | | |


18ನೇ ಲೋಕಸಭೆಯ ಮೊದಲ ಅಧಿವೇಶನ - ದೇಶದ ಅಭಿವೃದ್ದಿಯೇ ನಮ್ಮ ಮೊದಲ ಆದ್ಯತೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದ ಜನರು ಪ್ರತಿಪಕ್ಷಗಳಿಂದ ಉತ್ತಮ ಕ್ರಮಗಳನ್ನು ನಿರೀಕ್ಷಿಸುತ್ತಾರೆ. ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಿಕೊಳ್ಳಲು ಪ್ರತಿಪಕ್ಷಗಳು ದೇಶದ ಸಾಮಾನ್ಯ ನಾಗರಿಕರ ನಿರೀಕ್ಷೆಗಳಿಗೆ ಅನುಗುಣವಾಗಿ ಬದುಕುತ್ತವೆ ಎಂದು ನಾನು ಭಾವಿಸುತ್ತೇನೆ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದೇ ವೇಳೆ ಅವರು ಜನರು ನಾಟಕ, ಅಶಾಂತಿಯನ್ನು ಬಯಸುವುದಿಲ್ಲ. ಜನರಿಗೆ ವಸ್ತು ಬೇಕು, ಘೋಷಣೆಗಳಲ್ಲ. ದೇಶಕ್ಕೆ ಉತ್ತಮ ವಿರೋಧ ಪಕ್ಷ, ಜವಾಬ್ದಾರಿಯುತ ವಿರೋಧ ಪಕ್ಷದ ಅಗತ್ಯವಿದೆ ಮತ್ತು ಈ 18 ನೇ ಲೋಕಸಭೆಯಲ್ಲಿ ಗೆದ್ದ ಸಂಸದರು ಸಾಮಾನ್ಯ ಜನರ ಈ ನಿರೀಕ್ಷೆಗಳನ್ನು ಪೂರೈಸಲು ಪ್ರಯತ್ನಿಸುತ್ತಾರೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

ರಾಜ್ಯದಲ್ಲಿ ನಡೆಯುತ್ತಿದೆ ಭಾರತೀಯ ಸೇನಾ ದಿನಾಚರಣೆ : ಬೆಂಗಳೂರಿನಲ್ಲಿ ನಡೆಯಲಿದೆ ಪಥ ಸಂಚಲನ

Posted by Vidyamaana on 2023-01-19 03:44:43 |

Share: | | | | |


ರಾಜ್ಯದಲ್ಲಿ ನಡೆಯುತ್ತಿದೆ ಭಾರತೀಯ ಸೇನಾ ದಿನಾಚರಣೆ : ಬೆಂಗಳೂರಿನಲ್ಲಿ ನಡೆಯಲಿದೆ ಪಥ ಸಂಚಲನ

ಭಾರತದ ಗೌರವದ ಪ್ರತೀಕ ಭಾರತೀಯ ಸೇನೆ. ವಿಶ್ವದ ಬಲಿಷ್ಠ ಸೈನ್ಯಗಳ ಪೈಕಿ ಭಾರತವೂ ಅಗ್ರಪಂಕ್ತಿಯಲ್ಲಿ ಗುರುತಿಸಿಕೊಂಡಿದೆ. ಆದ್ದರಿಂದ ಸೇನಾ ದಿನಾಚರಣೆ ಎಂದರೆ ಎಲ್ಲರಿಗೂ ಪುಳಕ. ಈ ವರ್ಷ ಬೆಂಗಳೂರಿನಲ್ಲಿ ಭಾರತೀಯ ಸೇನಾ ದಿನ ಆಯೋಜನೆಗೊಳ್ಳುತ್ತಿದೆ ಎನ್ನುವುದೇ ಹೆಮ್ಮೆಯ ವಿಷಯ.

     ಪ್ರತೀ ವರ್ಷವೂ ಜನವರಿ 15ರಂದು ಆಯೋಜನೆಗೊಳ್ಳುವ ಭಾರತೀಯ ಸೇನಾ ದಿನಾಚರಣೆ ಈ ವರ್ಷ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜನೆಗೊಳ್ಳಲಿದೆ. ವಿಶೇಷವಾಗಿ, ಈ ವರ್ಷ ಭಾರತೀಯ ಸೇನಾ ದಿನಾಚರಣೆಯ 75ನೇ ವರ್ಷಾಚರಣೆ ರಾಷ್ಟ್ರ ರಾಜಧಾನಿ ದಿಲ್ಲಿಯಿಂದ ಹೊರಗಡೆ ನಡೆಯುತ್ತಿದೆ.

       ಕರ್ನಾಟಕ ಮತ್ತು ಕೇರಳ ಉಪ ಪ್ರಾಂತದ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಆಗಿರುವ ಮೇಜರ್ ಜನರಲ್ ರವಿ ಮುರುಗನ್ ಅವರು ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ (ಎಂಇಜಿ) ಕೇಂದ್ರ ಬೆಂಗಳೂರಿನಲ್ಲಿ ಮಾತನಾಡುತ್ತಾ, ಈ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದಿದ್ದಾರೆ. ಎಂಇಜಿ ಕೇಂದ್ರ ಸೇನಾ ದಿನಾಚರಣೆಯ ಪರೇಡಿನ ಸ್ಥಳವಾಗಿರಲಿದ್ದು, ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯಾಚರಿಸಲಿದೆ ಎನ್ನುತ್ತಾರವರು.

      ಪಥ ಸಂಚಲನದಲ್ಲಿ ಒಟ್ಟು ಎಂಟು ವಿಭಾಗಗಳಿರಲಿದ್ದು, ಅವುಗಳಲ್ಲಿ ಒಂದು ಆರ್ಮಿ ಸರ್ವಿಸ್ ಕಾರ್ಪ್ಸ್ನ ಅಶ್ವದಳವೂ ಸೇರಿದೆ. ಅದರೊಡನೆ, ಐದು ರೆಜಿಮೆಂಟುಗಳ ಬ್ರಾಸ್ ಬ್ಯಾಂಡ್ಗಳ ಸಮ್ಮಿಲಿತವಾದ ಮಿಲಿಟರಿ ಬ್ಯಾಂಡ್ ಸಹ ಕಾರ್ಯಾಚರಿಸಲಿದೆ. ಈ ಎಂಟರಲ್ಲಿ ಪ್ರತಿಯೊಂದು ವಿಭಾಗವೂ ಬೇರೆ ಬೇರೆ ರೆಜಿಮೆಂಟ್ಗಳನ್ನು ಪ್ರತಿನಿಧಿಸಲಿದೆ. ಪ್ರತಿಯೊಂದು ರೆಜಿಮೆಂಟಿಗೂ ಅದರದೇ ಆದ ಸುಪ್ರಸಿದ್ಧ ಇತಿಹಾಸ ಮತ್ತು ಪರಂಪರೆಗಳಿವೆ. ಸೇನಾ ದಿನದ ಪಥಸಂಚಲನಕ್ಕೆ ಬೆಂಬಲವಾಗಿ, ಆರ್ಮಿ ಏವಿಯೇಷನ್ನ ಧ್ರುವ್ ಹಾಗೂ ರುದ್ರ ಹೆಲಿಕಾಪ್ಟರ್ಗಳು ಫ್ಲೈ ಬೈ ಹಾರಾಟ ಪ್ರದರ್ಶಿಸಲಿವೆ.


ಸೇನಾ ದಿನಾಚರಣೆಯ ಬಗ್ಗೆ ಒಂದಿಷ್ಟು...

       ಜನವರಿ 15, 1949ರಂದು ಫೀಲ್ಡ್ ಮಾರ್ಷಲ್ ಕೊಡಂದೇರ ಎಂ. ಕಾರ್ಯಪ್ಪ ಅವರು ಕೊನೆಯ ಬ್ರಿಟಿಷ್ ಜನರಲ್ ಫ್ರಾನ್ಸಿಸ್ ಬುಚರ್ ಅವರಿಂದ ಸೇನಾ ಮಹಾದಂಡನಾಯಕರಾಗಿ ಅಧಿಕಾರ ಸ್ವೀಕರಿಸಿದರು. ಈ ಭಡ್ತಿಯ ಬಳಿಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪಅವರು ಭಾರತೀಯ ಸೇನೆಯ ಪ್ರಥಮ ಕಮಾಂಡರ್ ಇನ್ ಚೀಫ್ ಆಗಿ ನೇಮಕಗೊಂಡರು. ಈ ದಿನವನ್ನು ಸ್ಮರಿಸಲು ಪ್ರತಿವರ್ಷ ಜನವರಿ 15ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ.

ಪಥ ಸಂಚಲನ, ಪದಕ ಪ್ರದಾನ, ಮಿಲಿಟರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ದಿನ ಹೊಸದಿಲ್ಲಿ ಮತ್ತು ಇತರ ಆರ್ಮಿ ಕಮಾಂಡ್ ಮುಖ್ಯ ಕಚೇರಿಗಳಲ್ಲಿ ನಡೆಯುತ್ತವೆ.

1947ರಲ್ಲಿ ಭಾರತ ಸಾರ್ವಭೌಮತ್ವವನ್ನು ಪಡೆದುಕೊಂಡಿತು. ಬಹುತೇಕ ಎರಡು ಶತಮಾನಗಳ ಬ್ರಿಟಿಷ್ ಆಡಳಿತದಿಂದ ಭಾರತ ಮುಕ್ತವಾಯಿತು. ಆ ಸಂದರ್ಭದಲ್ಲಿ ದೇಶ ವಿಭಜನೆ ನಡೆದು, ಪಾಕಿಸ್ತಾನದಿಂದ ಸಾಕಷ್ಟು ನಿರಾಶ್ರಿತರು ಭಾರತಕ್ಕೆ ಬರುತ್ತಿದ್ದರು. ಆಗ ದೇಶಾದ್ಯಂತ ಅಸ್ಥಿರತೆ ಎದುರಾಗಿತ್ತು.

ಆಡಳಿತ ಅಸ್ಥಿರತೆಯ ಕಾರಣದಿಂದ ಪರಿಸ್ಥಿತಿಯನ್ನು ನಿಯಂತ್ರಿಸಲು, ಶಾಂತಿ ಸ್ಥಾಪಿಸಲು ಸೇನೆ ಮಧ್ಯ ಪ್ರವೇಶಿಸಬೇಕಾಗಿತ್ತು. ಈ ಸಂದರ್ಭದಲ್ಲಿ ಕೆ.ಎಂ. ಕಾರ್ಯಪ್ಪನವರನ್ನು ಸೇನಾ ಮುಖ್ಯಸ್ಥರಾಗಿ ನೇಮಿಸಲಾಯಿತು.


ಕಾರ್ಯಪ್ಪನವರು 1899ರಲ್ಲಿ ಕರ್ನಾಟಕದ ಕೊಡಗಿನಲ್ಲಿ ಜನಿಸಿದರು. ಅವರ ತಂದೆ ಮಾದಪ್ಪಕಂದಾಯ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. ಸ್ಯಾಮ್ ಮಾಣಿಕ್ ಶಾ ಅವರೊಡನೆ ಐದು ಸ್ಟಾರ್ಗಳ ಫೀಲ್ಡ್ ಮಾರ್ಷಲ್ ಹುದ್ದೆಗೆ ನೇಮಕಗೊಂಡರು. ಅವರು ಭಾರತದ ಪ್ರಥಮ ಸೇನಾ ಮಹಾದಂಡನಾಯಕರಾಗಿ ನೇಮಕಗೊಳ್ಳುವ ಮತ್ತು ಫೈವ್ ಸ್ಟಾರ್ ಜನರಲ್ ಆಗಿರುವುದನ್ನು ಹೊರತುಪಡಿಸಿ, ಅವರು ಭಾರತೀಯ ಸೇನೆ ಆರಂಭಗೊಂಡ ಅವಧಿಯಲ್ಲಿ ಸೇರ್ಪಡೆಗೊಂಡಿದ್ದವರಲ್ಲಿ ಒಬ್ಬರಾಗಿದ್ದರು.


ಫೀಲ್ಡ್ ಮಾರ್ಷಲ್ ಕಾರ್ಯಪ್ಪ

ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರು ಪದವಿ ಗಳಿಸಿದ ಬಳಿಕ ಡಿಸೆಂಬರ್ 1, 1919ರಂದು ತಾತ್ಕಾಲಿಕ ಸೇನಾ ಸೇರ್ಪಡೆ ಪಡೆದುಕೊಂಡರು. ಅವರನ್ನು ಸೇನೆಗೆ ಸೆಪ್ಟಂಬರ್ 9, 1922ರಂದು, ಜುಲೈ 17, 1920ರಿಂದ ಜಾರಿಗೆ ಬರುವಂತೆ ಶಾಶ್ವತ ಸೇರ್ಪಡೆಗೊಳಿಸಲಾಯಿತು. ಇದನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪಅವರು ತನ್ನೊಡನೆ ಜುಲೈ 16, 1920ರಂದು ಪದವಿ ಪಡೆದ ಬ್ರಿಟಿಷ್ ಅಧಿಕಾರಿಗಳಿಂದ ಕೆಳಗಿನ ರ್ಯಾಂಕಿಂಗ್ ಪಡೆಯುವಂತೆ ಮಾಡುವ ಉದ್ದೇಶದಿಂದ ಮಾಡಲಾಗಿತ್ತು. ಮೇ 1920ರಲ್ಲಿ ಕಾರ್ಯಪ್ಪನವರನ್ನು 2/125 ನೇಪಿಯರ್ ರೈಫಲ್ಸ್ ಗೆ ವರ್ಗಾಯಿಸಲಾಯಿತು. ಆ ಪಡೆಯನ್ನು ಮೆಸಪೊಟಾಮಿಯಾಗೆ (ಇಂದಿನ ಇರಾಕ್) ಸ್ಥಳಾಂತರಿಸಲಾಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರು ಭಾರತಕ್ಕೆ ಬಂದ ಬಳಿಕ ಜೂನ್ 1922ರಲ್ಲಿ 7ನೇ ಪ್ರಿನ್ಸ್ ಆಫ್ ವೇಲ್ಸ್ ಡೋಗ್ರಾ ರೆಜಿಮೆಂಟಿಗೆ ನೇಮಿಸಲಾಯಿತು. ಜೂನ್ 1923ರಲ್ಲಿ ಅವರು 1/7 ರಜಪೂತ್ ರೆಜಿಮೆಂಟಿಗೆ ನೇಮಕಗೊಂಡರು. ಅದು ಅವರ ಶಾಶ್ವತ ರೆಜಿಮೆಂಟ್ ಆಯಿತು.

1925ರಲ್ಲಿ ಕಾರ್ಯಪ್ಪನವರು ಯುರೋಪ್, ಅಮೆರಿಕ, ಜಪಾನ್, ಚೀನಾ ಹಾಗೂ ಇತರ ದೇಶಗಳ ಪ್ರವಾಸ ನಡೆಸಿದರು. ಅವರು ಈ ಪ್ರವಾಸದಲ್ಲಿ ಹಲವು ದೇಶಗಳ ಸೈನಿಕರು ಮತ್ತು ನಾಗರಿಕರನ್ನು ಭೇಟಿ ಮಾಡಿದ್ದು, ಅವರಿಗೆ ಹೊಸ ಜ್ಞಾನ ನೀಡಿತ್ತು. ಅವರು ಫತೇಗರ್ನಲ್ಲಿ ಕಾರ್ಯ ನಿರ್ವಹಿಸುವಾಗ ಓರ್ವ ಬ್ರಿಟಿಷ್ ಅಧಿಕಾರಿಯ ಪತ್ನಿ ಅವರಿಗೆ ‘ಕಿಪ್ಪರ್’ ಎಂಬ ಅಡ್ಡ ಹೆಸರು ನೀಡಿದರು. 1927ರಲ್ಲಿ ಅವರು ಕ್ಯಾಪ್ಟನ್ ಆಗಿ ಪದೋನ್ನತಿ ಪಡೆದರೂ, ಅದನ್ನು ಸಾರ್ವಜನಿಕವಾಗಿ 1931ರ ತನಕ ಪ್ರಕಟಿಸಿರಲಿಲ್ಲ.

1947ರಲ್ಲಿ ಕಾರ್ಯಪ್ಪ ಯುನೈಟೆಡ್ ಕಿಂಗ್ಡಮ್ನ ಇಂಪೀರಿಯಲ್ ಡಿಫೆನ್ಸ್ ಕಾಲೇಜ್ನಲ್ಲಿ ತರಬೇತಿಗೆ ದಾಖಲಾದ ಪ್ರಥಮ ಭಾರತೀಯ ಎನಿಸಿಕೊಂಡರು. ಭಾರತ ಸ್ವತಂತ್ರಗೊಂಡ ಬಳಿಕ, ಕಾರ್ಯಪ್ಪನವರನ್ನು ಮೇಜರ್ ಜನರಲ್ ರ್ಯಾಂಕ್ನೊಂದಿಗೆ ಡೆಪ್ಯುಟಿ ಚೀಫ್ ಆಫ್ ಜನರಲ್ ಸ್ಟಾಫ್ ಆಗಿ ನೇಮಿಸಲಾಯಿತು. ಪಾಕಿಸ್ತಾನದೊಡನೆ ಯುದ್ಧ ಆರಂಭವಾದ ಬಳಿಕ, ಅವರನ್ನು ಈಸ್ಟರ್ನ್ ಆರ್ಮಿ ಕಮಾಂಡರ್ ಹಾಗೂ ಜನರಲ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್, ವೆಸ್ಟರ್ನ್ ಕಮಾಂಡ್ ಆಗಿ ಭಡ್ತಿಗೊಳಿಸಲಾಯಿತು.

1947ರ ಭಾರತ ಪಾಕ್ ಯುದ್ಧದಲ್ಲಿ ಕಾರ್ಯಪ್ಪನವರು ಭಾರತದ ಪಶ್ಚಿಮ ಪಡೆಗಳನ್ನು ಮುನ್ನಡೆಸಿದರು. ಬಳಿಕ ಅವರನ್ನು ಸೇನಾ ಮುಖ್ಯಸ್ಥರಾಗಿ ನೇಮಿಸಲಾಯಿತು. ಅವರು ಕಾರ್ಗಿಲ್ ಪ್ರಾಂತವನ್ನು ಮರುವಶಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅದೊಂದು ಮಹತ್ತರ ಸಾಧನೆಯಾಗಿತ್ತು.

ಕಾರ್ಯಪ್ಪನವರು ಕಮಾಂಡರ್ ಇನ್ ಚೀಫ್ ಹುದ್ದೆಯಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿ, ಜನವರಿ 14, 1953ರಂದು ನಿವೃತ್ತರಾದರು. ಅವರು ನಿವೃತ್ತಿ ಪಡೆಯುವ ಮುನ್ನ, ಅವರ ಮೊದಲ ರೆಜಿಮೆಂಟ್ ಆಗಿದ್ದ ರಜಪೂತ್ ರೆಜಿಮೆಂಟಲ್ ಕೇಂದ್ರಕ್ಕೆ ಬೀಳ್ಕೊಡುಗೆ ಭೇಟಿ ನೀಡಿದರು. ಅವರು ನಿವೃತ್ತರಾದ ಬಳಿಕ 1956ರ ತನಕ ಆಸ್ಟ್ರೇಲಿಯಾ ಹಾಗೂ ನ್ಯೂಝಿಲ್ಯಾಂಡ್ ಗಳಲ್ಲಿ ಭಾರತೀಯ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದರು.


ವೈಯಕ್ತಿಕ ಜೀವನ

ಮಾರ್ಚ್ 1937ರಲ್ಲಿ ಕಾರ್ಯಪ್ಪನವರು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರ ಮಗಳಾದ ಮುತ್ತು ಮಾಚಯ್ಯನವರನ್ನು ವಿವಾಹವಾದರು. ಅವರಿಗೆ ಒಬ್ಬ ಮಗ ಮತ್ತು ಒಬ್ಬಳು ಮಗಳಿದ್ದು, ಅವರ ಮಗ ಏರ್ ಮಾರ್ಷಲ್ ಕೆ.ಸಿ. ನಂದಾ ಕಾರ್ಯಪ್ಪಸಹ ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯಾಗಿದ್ದರು.

ಅವರಿಗೆ ಗೌರವಾರ್ಥವಾಗಿ ‘ಆರ್ಡರ್ ಆಫ್ ದ ಕಮಾಂಡರ್ ಇನ್ ಚೀಫ್ ಆಫ್ ದ ಲೀಜನ್ ಆಫ್ ಮೆರಿಟ್’ ನೀಡಲಾಯಿತು. 1993ನೇ ಇಸವಿಯಲ್ಲಿ, ತನ್ನ 94ನೇ ವಯಸ್ಸಿನಲ್ಲಿ ಕಾರ್ಯಪ್ಪನವರು ಬೆಂಗಳೂರಿನಲ್ಲಿ ವಿಧಿವಶರಾದರು. ಶಿಸ್ತಿನ ವ್ಯಕ್ತಿಯಾಗಿದ್ದ ಅವರ ಕೊಡುಗೆಗಳನ್ನು ಸೇನಾ ದಿನಾಚರಣೆಯ ಮೂಲಕ ನೆನಪಿಸಿ, ಗೌರವಿಸಲಾಗುತ್ತದೆ. ಅವರು ತನ್ನ ದೇಶಭಕ್ತಿಯ ಕಾರ್ಯಗಳಿಂದ ತಲೆಮಾರುಗಳ ಕಾಲ ಆದರ್ಶವಾಗಿ ಉಳಿದಿದ್ದಾರೆ.



Leave a Comment: