Posted by vidyamaana on 2024-07-05 17:20:19 |
ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.
ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.
ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.
ಮೃತರು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
Posted by Vidyamaana on 2024-04-02 21:52:50 |
ಮಂಗಳೂರು: ವಕೀಲರ ಸಂಘ ನನ್ನ ಮನೆ. ನನ್ನ ಮನೆಯವರು ನನ್ನ ಮೇಲಿಟ್ಟಿರುವ ನಿರೀಕ್ಷೆಗಳು, ವಿಶ್ವಾಸದ ಬಗ್ಗೆ ನನಗೆ ಅರಿವಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.
ಮಂಗಳವಾರ ಮಂಗಳೂರು ಬಾರ್ ಅಸೋಸಿಯೇಷನ್ ಗೆ ಭೇಟಿ ನೀಡಿದ ಅವರು, ವಕೀಲರ ಜೊತೆ ಸಂವಾದ ನಡೆಸಿದರು.
ಸುಮಾರು 29 ವರ್ಷಗಳಿಂದ ಸಾಮಾಜಿಕ ಕೆಲಸಗಳಲ್ಲಿ ಸಕ್ರೀಯನಾಗಿದ್ದೇನೆ. ಆದ್ದರಿಂದ ಜಿಲ್ಲೆಯ ಬೇಡಿಕೆಗಳು, ಇಲ್ಲಿನ ವಿಫುಲ ಅವಕಾಶಗಳನ್ನು ಬಳಸಿಕೊಳ್ಳುವ ಸಾಧ್ಯತೆಗಳ ಬಗ್ಗೆ ನನಗೆ ಅರಿವಿದೆ
Posted by Vidyamaana on 2024-05-24 11:06:49 |
ಕನ್ಯಾನ : ಸಂಶಯಾಸ್ಪದವಾಗಿ ಮೃತಪಟ್ಟ ವ್ಯಕ್ತಿಯೊಬ್ಬರ ಶವ ದಫನ ಮಾಡಿದ ಬಳಿಕ, ಸಾವಿನಲ್ಲಿ ಸಂಶಯವಿದೆ ಎಂದು ಮೃತ ವ್ಯಕ್ತಿಯ ಸಹೋದರ ಮಂಜೇಶ್ವರ ಠಾಣೆಗೆ ದೂರು ನೀಡಿದ್ದು, ನ್ಯಾಯಾಲಯದ ಆದೇಶದಂತೆ ಕನ್ಯಾನ ಬಂಡಿತ್ತಡ್ಕ ಮಸೀದಿ ಆವರಣದಲ್ಲಿ ದಫನ ಮಾಡಿದ್ದ ಶವವನ್ನು 18 ದಿನಗಳ ಬಳಿಕ ಮೇಲೆತ್ತಿ ಮರಣೋತ್ತರ ಪರೀಕ್ಷೆಯನ್ನು ಗುರುವಾರ ನಡೆಸಲಾಯಿತು.
ಕೇರಳದ ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್ (44) ಅವರ ದೇಹವನ್ನು ಕನ್ಯಾನದ ಬಂಡಿತ್ತಡ್ಕದಲ್ಲಿರುವ ರಹ್ಮಾನಿಯಾ ಜುಮಾ ಮಸೀದಿ ಆವರಣದಲ್ಲಿ ದಫನ ಮಾಡಲಾಗಿತ್ತು. ಆ ಶವವನ್ನು ಬಂಟ್ವಾಳ ತಹಶೀಲ್ದಾರ್ ಡಿ.ಅರ್ಚನಾ ಭಟ್, ಮಂಜೇಶ್ವರ ಸಿಪಿಐ ರಾಜೀವ್ ಕುಮಾರ್ ಕೆ., ಕೇರಳ ಆರೋಗ್ಯ ಇಲಾಖೆಯ ಡಾ.ಹರಿಕೃಷ್ಣ ಕಾಸರಗೋಡು, ಯೆನೆಪೋಯ ವಿಧಿವಿಜ್ಞಾನ ವಿಭಾಗ ಮುಖ್ಯಸ್ಥ ಡಾ.ಕಿಶೋರ್ ಕುಮಾರ್ ಬಿ., ವಿಟ್ಲ ಪೊಲೀಸರ ಸಮ್ಮುಖದಲ್ಲಿ ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ದೇಹದ ಅಂಗಾಗಳ ಮಾದರಿಯನ್ನು ವಿಧಿವಿಜ್ಞಾನ ತಂಡ ಪಡೆದುಕೊಂಡಿದ್ದು, ತನಿಖೆಗಾಗಿ ಯೆನೆಪೋಯ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಅಧಿಕಾರಿಗಳ ಸೂಚನೆಯಂತೆ ಬಂದಿದ್ದು, ವರದಿಯನ್ನು ಕೇರಳದ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ವಿಧಿವಿಜ್ಞಾನ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
Posted by Vidyamaana on 2023-11-17 12:35:00 |
ಬೆಂಗಳೂರು: ಇಲ್ಲಿನ ಖಾಸಗಿ ಹೊಟೇಲ್ನಲ್ಲಿ ಗುರುವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವಿ.ಸೋಮಣ್ಣ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.ಮೂವರು ನಾಯಕರು ಒಂದೇ ವೇದಿಕೆ ಹಂಚಿಕೊಂಡಿರುವುದು ವಿಧಾನಸಭಾ ಚುನಾವಣೆಯ ಬಳಿಕ ಇದೇ ಮೊದಲು.
ವಿ.ಸೋಮಣ್ಣ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅದಾದ ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಸೋಮಣ್ಣ ಬಿಜೆಪಿಯಿಂದ ಸ್ವಲ್ಪ ಅಂತರ ಕಾಯ್ದುಕೊಂಡಿದ್ದರು. ಬಿಜೆಪಿ ರಾಜ್ಯಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ, ಬಿ.ವೈ.ವಿಜಯೇಂದ್ರ ಆಯ್ಕೆಯಿಂದ ಅಸಮಾಧಾನಗೊಂಡಿದ್ದರು. ಹೀಗಾಗಿ ಅವರು ಮತ್ತೆ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಸೋಮಣ್ಣನ ಮೇಲೆ ನನಗೆ ದ್ವೇಷ ಇಲ್ಲ: ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ, "ಸೋಮಣ್ಣ ಮತ್ತು ಬೊಮ್ಮಾಯಿ ಅವರನ್ನು ಹೊಗಳಿದರು. ನಾನು ಸೋಮಣ್ಣ, ಬೊಮ್ಮಾಯಿ ಒಂದೇ ಪಕ್ಷದಲ್ಲಿ ಇದ್ದೆವು. ಆಗ ಬಹಳ ಪ್ರೀತಿ, ವಿಶ್ವಾಸ ಇತ್ತು. ಈಗಲೂ ಬೊಮ್ಮಾಯಿಯವರ ಜತೆ ಅದೇ ಪ್ರೀತಿ ಇದೆ. ವೈಯಕ್ತಿಕವಾಗಿ ಬೊಮ್ಮಾಯಿಯವರ ತಂದೆ ನನಗೆ ಬಹಳ ಸಹಾಯ ಮಾಡಿದ್ದಾರೆ. ಇವರಿಗೆ ನನ್ನ ಮೇಲೆ ಆಂತರಿಕ ಪ್ರೀತಿ ಇದೆ. ಸೋಮಣ್ಣ ವರುಣಾದಲ್ಲಿ ನನ್ನ ವಿರುದ್ಧ ಸ್ಪರ್ಧೆ ಮಾಡಿದ್ದ. ಆದರೂ ಸೋಮಣ್ಣನಿಗೂ ನನ್ನ ಮೇಲೆ ಪ್ರೀತಿ ಇದೆ. ಪಾಪ ಹೈಕಮಾಂಡ್ ಹೇಳಿದ್ರು ಅಂತ ನನ್ನ ವಿರುದ್ಧ ನಿಂತ್ಕೊಂಡಿದ್ದ" ಎಂದರು.
ಸಿದ್ದರಾಮಯ್ಯ ಅತ್ಯಂತ ಆತ್ಮೀಯರು: ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದ ವಿ.ಸೋಮಣ್ಣ, "ಆಡಳಿತ, ವಿಪಕ್ಷ ಅನ್ನೋದು ಇಲ್ಲ. ಕರ್ನಾಟಕದಲ್ಲಿ ಬೇರೆ ರಾಜ್ಯಗಳಿಗಿಂತ ರಾಜಕೀಯದಲ್ಲಿ ಉತ್ತಮ ಬಾಂಧವ್ಯ ಇದೆ. ನನಗೆ ಸಿದ್ದರಾಮಯ್ಯ ಮತ್ತು ಬೊಮ್ಮಾಯಿಯವರು ಅತ್ಯಂತ ಆತ್ಮೀಯರು.ಜನತಾ ಪಕ್ಷದಲ್ಲಿ ಇದ್ದವರು ನಾವು. ಈಗ ಎಲ್ಲೇ ಇದ್ರೂ ನಮ್ಮದೇ ನೀತಿ ತತ್ವದಡಿ ಸಣ್ಣ ಅಪಚಾರವೂ ಇಲ್ಲದೇ ಬದುಕುತ್ತಿದ್ದೀವಿ" ಎಂದು ತಿಳಿಸಿದರು.
ಕಾಂಗ್ರೆಸ್ ಸೇರುವ ಅವಶ್ಯಕತೆ ಈಗಿಲ್ಲ: "ಪಕ್ಷಕ್ಕೆ ನನ್ನದೂ ದುಡಿಮೆ, ಶ್ರಮ ಇದೆ. ನನಗೆ ಡಬಲ್ ಗೇಮ್ ಮಾಡೋದು ಗೊತ್ತಿಲ್ಲ. ಅಭಿಪ್ರಾಯವನ್ನು ಮುಂದೆ ತಿಳಿಸುತ್ತೇನೆ. ನಾನು ಲೋಕಸಭಾ ಟಿಕೆಟ್ ಆಕಾಂಕ್ಷಿ ಅಲ್ಲ. ಆದರೆ ಕಾಂಗ್ರೆಸ್ ಸೇರುವ ಅವಶ್ಯಕತೆ ನನಗೆ ಈಗಿಲ್ಲ" ಎಂದು ಸ್ಪಷ್ಟಪಡಿಸಿದರು.
Posted by Vidyamaana on 2023-03-31 23:23:12 |
ಸುಳ್ಯ, ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಯುವತಿ ಮನೆಯವರ ವಿರೋಧವಿದ್ದ ಕಾರಣ ಯುವತಿಯೊಂದಿಗೆ ಮನೆ ಬಿಟ್ಟು ಹೋಗಿ ಮಂಗಳೂರಿನಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ವಿವಾಹವಾದ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ.
ಗುತ್ತಿಗಾರಿನ ಬಾಕಿಲದ ಆನಂದ ಎಂಬರ ಪುತ್ರ ಜಗದೀಶ್ ಮತ್ತು ದೇವಚಳ್ಳ ಗ್ರಾಮದ ಅಡ್ಡನಪಾರೆ ನಿವಾಸಿ ಜನಾರ್ದನ ಅವರ ಪುತ್ರಿ ಪ್ರತಿಮಾ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತಿದ್ದರೆನ್ನಲಾಗಿದೆ. ಆದರೆ ಮದುವೆಗೆ ಯುವತಿ ಮನೆಯವರ ವಿರೋಧವಿತ್ತೆನ್ನಲಾಗಿದೆ. ಆದ್ದರಿಂದ ಮನೆ ಬಿಟ್ಟು ತೆರಳಿದ ವಧು ಮತ್ತು ವರ ಮಂಗಳೂರಿನಲ್ಲಿ ಮದುವೆಯಾಗಿದ್ದಾರೆ.ಇನ್ನು ಇತ್ತ ಯುವತಿಯ ತಾಯಿ ಸುಬ್ರಹ್ಮಣ್ಯ ಠಾಣೆಯಲ್ಲಿ ಮಗಳು ಕಾಣೆಯಾಗಿರುವ ದೂರು ದಾಖಲಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯನ್ನು ಸಂಪರ್ಕಿಸಿರುವ ವಧೂವರರು ತಾವು ಮದುವೆ ಆಗಿರುವ ಮಾಹಿತಿ ನೀಡಿದ್ದಾರೆ.
Posted by Vidyamaana on 2023-07-10 16:41:37 |
ಚಿಕ್ಕಮಗಳೂರು: ಜಿನುಗು ಮಳೆಯ ನಡುವೆಯೇ ಕಾಫಿನಾಡಿನ ಪ್ರವಾಸಿ ತಾಣಗಳತ್ತ ಪ್ರತಿನಿತ್ಯವೂ ಸಾಗರೋಪಾದಿಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಪ್ರವಾಸಿಗರು ರಸ್ತೆಗಳ ಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡು ಹುಚ್ಚಾಟ ಮೆರೆಯುತ್ತಿದ್ದಾರೆ.
ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರಿಗೆ ಹೇಳೋರಿಲ್ಲ-ಕೇಳೋರಿಲ್ಲ ಎಂಬಂತಾಗಿದ್ದು, ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಪ್ರವಾಸಿಗರು ಮುಂದಾಗಿದ್ದಾರೆ. ಈ ಭಾಗದಲ್ಲಿ ಮೊದಲೇ ಕಿರಿದಾದ ರಸ್ತೆಗಳು ಇದ್ದು, ವಾಹನ ಸವಾರರಿಗೆ ಇಕ್ಕಟ್ಟು ಆದಂತಾಗಿದೆ. ಇಂತಹದ್ದರಲ್ಲೂ ಕೆಲವರು ರಸ್ತೆ ಮಧ್ಯೆಯೆ ಕಾರ್ಗಳನ್ನು ನಿಲ್ಲಿಸಿ ಪುಂಡಾಟ ಮೆರೆಯುವ ಮೂಲಕ ಇನ್ನುಳಿದ ವಾಹನ ಸವಾರರಿಗೂ ಕಿರಿಕಿರಿ ಆಗುವಂತೆ ಮಾಡುತ್ತಿದ್ದಾರೆ. ದಟ್ಟ ಮಂಜು ಕವಿದ ದಾರಿಯಲ್ಲಿ ವಾಹನ ಪಾರ್ಕಿಂಗ್ ಮಾಡಿ ಡ್ಯಾನ್ಸ್ ಮಾಡುವ ಭರದಲ್ಲಿ ಇನ್ನುಳಿದ ವಾಹನಗಳಿಗೂ ಅಡ್ಡಲಾಗಿ ನಿಲ್ಲುತ್ತಿದ್ದಾರೆ.
ಇದರಿಂದ ಅಪಾಘಾತ, ಟ್ರಾಫಿಕ್ ಜಾಮ್ಗೂ ಆಹ್ವಾನ ನೀಡಿದಂತಾಗಿದೆ. ಅಷ್ಟೇ ಅಲ್ಲದೆ ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಕೂಡ ಕೆಲವು ಪ್ರವಾಸಿಗರು ಮುಂದಾಗುತ್ತಿದ್ದಾರೆ. ಈ ಹುಚ್ಚಾಟದಿಂದ ಬೇಸತ್ತ ಸ್ಥಳೀಯರು ಜಲಪಾತಗಳ ಬಳಿ ಪೊಲೀಸರು ಬೀಟ್ ಹಾಕುವಂತೆ ಮನವಿ ಮಾಡಿದ್ದಾರೆ.
Posted by Vidyamaana on 2024-03-29 20:05:15 |
ಕಾರವಾರ, ಮಾರ್ಚ್ 28: ಲೋಕಸಭೆ ಚುನಾವಣೆಗೆ (Lok Sabha Election) ಉತ್ತರ ಕನ್ನಡ (Uttara Kann
non
a) ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಗಿಟ್ಟಿಸಿಕೊಂಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿಗೆ (Vishweshwar Hegde Kageri) ಇದೀಗ ಸಂಕಷ್ಟ ಎದುರಾಗಿದೆ. ಚುನಾವಣೆ ದೃಷ್ಟಿಯಿಂದ ಶಾಸಕರು, ಸಂಸದರ ಬೆಂಬಲ ಪಡೆಯಲು ಮುಂದಾದರೆ ಅವರೆಲ್ಲ ಕಾಗೇರಿಗೆ ಸಂಪರ್ಕಕ್ಕೇ ಸಿಗುತ್ತಿಲ್ಲ ಎನ್ನಲಾಗಿದೆ. ಶಾಸಕ, ಸಂಸದರ ಮನವೋಲಿಸುವುದೇ ಬಿಜೆಪಿ ಅಭ್ಯರ್ಥಿ ಕಾಗೇರಿಗೆ ದೊಡ್ಡ ಸವಾಲಾಗಿದೆ. ಯಾರು ದೂರವಾಣಿ ಕರೆ ಸ್ವೀಕರಿಸುತ್ತಿಲ್ಲ. ಹಾಗೆಂದು ಮನೆಗೆ ಹೋದರೆ ಗೇಟನ್ನೇ ತೆರೆಯುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.ಮತ್ತೊಂದೆಡೆ, ಕಾಗೇರಿಯವರ ಸದ್ಯದ ಪರಿಸ್ಥಿತಿ ನೋಡಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ನಮ್ಮದೇ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಡಿಕೊಳ್ಳುತ್ತಿದ್ದಾರೆ.ಹಾಲಿ ಸಂಸದ ಸಂಸದ ಅನಂತಕುಮಾರ್ ಹೆಗಡೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರಿಗೂ ಸಿಗದಂತೆ ಇದ್ದಾರೆ. ಟಿಕೆಟ್ ತಪ್ಪುವ ಸುಳಿವು ಸಿಕ್ಕಿದ ಕೂಡಲೇ ಅವರು ಮೌನಕ್ಕೆ ಶರಣಾಗಿದ್ದರು. ಟಿಕೆಟ್ ಘೋಷಣೆಯಾಗುವುದಕ್ಕೂ ಮೂರ್ನಾಲ್ಕು ದಿನಗಳ ಮೊದಲಿನಿಂದಲೇ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಇಷ್ಟೇ ಅಲ್ಲದೆ, ಕಾರ್ಯಕರ್ತರ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಮನೆಗೆ ಯಾರೆ ಬಂದರೂ ಒಳಕ್ಕೆ ಬಿಡದಂತೆ ಸಂಸದ ಹೆಗಡೆ ಸೆಕ್ಯೂರಿಟಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.ಇದೀಗ ಸಂಸದರ ಮೌನ ಹಾಗೂ ಸಂಪರ್ಕಕ್ಕೆ ಸಿಗದಿರುವುದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ತಲೆ ನೋವಾಗಿ ಪರಿಣಮಿಸಿದೆ.
ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ್ದ ಕಾಗೇರಿ, ನಾನು ಮತ್ತು ಅನಂತಕುಮಾರ್ ಹೆಗಡೆ ಜೋಡೆತ್ತುಗಳಂತೆ ಕೆಲಸ ಮಾಡಲಿದ್ದೇವೆ. ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದಿದ್ದರು. ಆದರೆ, ಕಾಗೇರಿ ಭೇಟಿಗೂ ಅವಕಾಶ ನೀಡದೇ, ಕರೆಯೂ ಸ್ವೀಕರಿಸದೇ ಹೆಗಡೆ ಸಂಪೂರ್ಣ ಮೌನವಾಗಿದ್ದಾರೆ.
ಹೆಗಡೆ ಮನೆ ಗೇಟ್ ಬಳಿ ಅರ್ಧ ಗಂಟೆ ಕಾದ ಕಾಗೇರಿ
ಈ ಮಧ್ಯೆ, ಸಂಸದ ಅನಂತಕುಮಾರ್ ಹೆಗಡೆ ಮನೆ ಬಳಿ ಹೋಗಿ ಕಾಗೇರಿ ಅರ್ಧ ಗಂಟೆ ಕಾದರೂ ಸೌಜನ್ಯಕ್ಕೂ ಗೇಟ್ ತೆರೆಸಿ ಅವರ ಬಳಿ ಮಾತನಾಡಿಲ್ಲ ಎಂಬುದು ಗೊತ್ತಾಗಿದೆ. ಅನಂತಕುಮಾರ್ ಹೆಗಡೆ ಸಹಕಾರ ಇಲ್ಲದೆ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಭಾರಿ ಕಷ್ಟ ಎಂದೂ ಹೇಳಲಾಗುತ್ತಿದೆ. ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕೂಡ ಹೆಗಡೆ ಇದೇ ರೀತಿ ಮೌನವಾಗಿದ್ದಕ್ಕೆ ಕಾಗೇರಿ ಸೋಲನುಭವಿಸಬೇಕಾಗಿ ಬಂದಿತ್ತು. ಇದೀಗ ಮತ್ತೆ ಹೆಗಡೆ ಮೌನವಾಗಿರುವುದು ಕಾಗೇರಿ ಆತಂಕಕ್ಕೆ ಕಾರಣವಾಗಿದೆ.