Posted by vidyamaana on 2024-07-05 10:22:02 |
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದರು.
2016 ರ ಕರ್ನಾಟಕ ಕೇಡರ್ ನ IPS ಅಧಿಕಾರಿ ಯತೀಶ್ ಎನ್ ಈ ಹಿಂದೆ ಮಂಡ್ಯ ಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Posted by Vidyamaana on 2023-12-23 21:33:16 |
ನವದೆಹಲಿ:ಸಂಸತ್ ಭವನದಲ್ಲಿ ಸ್ಮೋಕ್ ಬಾಂಬ್ ದಾಳಿ ನಡೆಸಿದ ಆರೋಪಿ ಮನೋರಂಜನ್ ಬಗ್ಗೆ ಒಂದೊಂದಾಗಿ ಸ್ಪೋಟಕ ಮಾಹಿತಿ ಹೊರ ಬೀಳುತ್ತಿದೆ.ಅವನು ಮೈಸೂರಿನಲ್ಲಿ ಬಾಡಿಗೆಗೆ ಎರಡು ರೂಮ್ ಮಾಡಿಕೊಂಡಿದ್ದ ವಿಚಾರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.ರೂಮ್ ಮಾಡಿಕೊಳ್ಳಲು ಹಣ ಹೇಗೆ ಹೊಂದಿಸುತ್ತಿದ್ದ ಎಂಬುದೇ ಪೊಲೀಸರಿಗೆ ಅಚ್ಚರಿಯಾಗಿದೆ.ಮನೆಯವರು ಹೇಳುವಂತೆ ಆತನಿಗೆ ನಾವು ಹೆಚ್ಚು ಹಣ ಕೊಡುತ್ತಿರಲಿಲ್ಲ.ದೆಹಲಿಗೆ ಹೋಗಲು, ಮೈಸೂರಿನಲ್ಲಿ ಎರಡು ರೂಮ್ ಬಾಡಿಗೆ ಪಡೆಯಲು ಹಣ ಹೇಗೆ ಹೊಂದಿಸಿದ ಎಂದು ಮನೆಯವರೇ ಅಚ್ಚರಿ ವ್ಯಕ್ತಪಡಿಸಿದ್ದಾರೆ.ಮನೋರಂಜನ್ ಮೈಸೂರಿನಲ್ಲಿ ಎರಡು ರೂಮ್ ಮಾಡಿಕೊಳ್ಳುವ ಅಗತ್ಯ ಏನಿತ್ತು? ಸಾಕಷ್ಟು ಸಮಯ ಹಿಂದಿನಿಂದಲೇ ಸಂಸತ್ ಭವನದ ಮೇಲೆ ದಾಳಿಗೆ ಸಂಚು ಹೂಡಲಾಗಿತ್ತೇ ಎಂಬ ಅನುಮಾನ ಇದೀಗ ವ್ಯಕ್ತವಾಗಿದ್ದು ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮೈಸೂರಿನಲ್ಲಿ ಬಾಡಿಗೆ ರೂಮನ್ನು ಪಡೆದ ಬಗ್ಗೆ ಆತನ ಸ್ನೇಹಿತರೇ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರೆ.
Posted by Vidyamaana on 2024-04-13 13:24:48 |
ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಧರ್ಭದಲ್ಲಿ ಅಂಗಡಿ, ಸಂತೆ ಇತ್ಯಾದಿಗಳನ್ನು ವ್ಯವಸ್ಥಿತವಾಗಿ ಆಯೋಜಿಸುವುದು, ಸುಡುಮದ್ದು ಪ್ರದರ್ಶನ ಮತ್ತು ರಥೋತ್ಸವವನ್ನು ನಿಶ್ಚಿತ ಸಮಯದಲ್ಲಿ ನಡೆಸುವಂತೆ ಶ್ರೀ ಮಹಾಲಿಂಗೇಶ್ವರ ದೇವರ ಭಕ್ತಾದಿಗಳು ಏ.೧೨ರಂದು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ರಥೋತ್ಸವದ ದಿನ ಶ್ರೀ ದೇವರು ರಥಾರೋಹಣದ ವೀಕ್ಷಣೆಗೆ ಭಕ್ತಾದಿಗಳಿಗೆ ಅನುಕೂಲವಾಗುವಂತೆ ರಥಬೀದಿಯಿಂದ ಕನಿಷ್ಠ ೭೫-೮೦ಮೀಟರ್ ದೂರದಲ್ಲಿ ವ್ಯಾಪಾರ ಮಳಿಗೆಗಳನ್ನು ಅಳವಡಿಸುವುದು. ಸುಡುಮದ್ದು ಪ್ರದರ್ಶನವನ್ನು ಸಾಕಷ್ಟು ದೂರದ ಸುರಕ್ಷಿತ ಪ್ರದೇಶದಲ್ಲಿ ವ್ಯವಸ್ಥೆಗೊಳಿಸುವುದು, ರಥೋತ್ಸವವನ್ನು ಮುಹೂರ್ತ ಸಮಯ ಮೀರದಂತೆ ಹಾಗೂ ವಿಳಂಭವಾಗದಂತೆ ಸಮಯ ನಿಗದಿಪಡಿಸುವುದು.
Posted by Vidyamaana on 2023-05-19 09:12:57 |
ಪುತ್ತೂರು: ಬಿಜೆಪಿ ನಾಯಕರಿಬ್ಬರ ಅವಹೇಳನಕಾರಿ ಬ್ಯಾನರ್ ವಿಚಾರದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಹಿಂದು ಯುವಕರ ಆರೋಗ್ಯವನ್ನು ವಿಚಾರಿಸಲು ಮತ್ತು ಘಟನೆಯ ಕುರಿತಾಗಿ ಮಾಹಿತಿಯನ್ನು ಪಡೆದುಕೊಳ್ಳಲು ಮಾಜಿ ಕೇಂದ್ರ ಸಚಿವ, ವಿಜಯಪುರ ನಗರ ಕ್ಷೇತ್ರದ ಶಾಸಕ ಮತ್ತು ತನ್ನ ನೇರ ನುಡಿಗಳಿಂದಲೇ ಜನಪ್ರಿಯರಾಗಿರುವ ಹಿಂದು ಫೈರ್ ಬ್ರ್ಯಾಂಡ್ ಲೀಡರ್ ಬಸವನ ಗೌಡ ಪಾಟೀಲ ಯತ್ನಾಳ ಅವರು ಇಂದು ಪುತ್ತೂರಿಗೆ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಯತ್ನಾಳ ಅವರು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಇಬ್ಬರು ಹಿಂದು ಯುವಕರ ಆರೋಗ್ಯವನ್ನು ವಿಚಾರಿಸಿದರು ಈ ಸಂದರ್ಭದಲ್ಲಿ ಅವರ ಜೊತೆಗಿದ್ದ ಅರುಣ್ ಕುಮಾರ್ ಪುತ್ತಿಲ ಮತ್ತು ಇತರರ ಒಟ್ಟಾರೆ ಘಟನೆಯ ಮಾಹಿತಿಯನ್ನು ಯತ್ನಾಳ ಅವರಿಗೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕೆಲವರು ಸ್ಥಳೀಯ ಬಿಜೆಪಿ ನಾಯಕರ ವರ್ತನೆಯ ಬಗ್ಗೆಯೂ ಯತ್ನಾಳ ಅವರಿಗೆ ದೂರು ನೀಡಿದ್ದು ವಿಶೇಷವಾಗಿತ್ತು. ಮಾತ್ರವಲ್ಲದೇ ಇಲ್ಲಿನ ಮಾಜಿ ಶಾಸಕರು ಬಿಜೆಪಿಯವರೇ ಆಗಿದ್ದರೂ ಇದುವೆರೆಗೂ ಆಸ್ಪತ್ರೆಗೆ ಬಂದಿಲ್ಲ ಎಂದು ಹಿಂದು ಕಾರ್ಯಕರ್ತರು ದೂರಿದರು.
ಪೊಲೀಸರ ಏಟಿನಿಂದಾಗಿ ಯುವಕರಿಗೆ ಆಗಿರುವ ಗಾಯಗಳನ್ನು ಸ್ವತಃ ಪುತ್ತಿಲ ಅವರೇ ಯತ್ನಾಳ ಅವರಿಗೆ ವಿವರಿಸಿ ಇನ್ನು ಮುಂದೆ ಈ ಯುವಕರ ಭವಿಷ್ಯದ ಗತಿಯೇನು ಎಂದು ಮರುಗಿದರು. ‘ಇವರು ಯಾವುದೇ ರಾಲಕೀಯ ಪಕ್ಷದಲ್ಲಿ ಇರದವರು, ಇವರೆಲ್ಲಾ ಕೇವಲ ಹಿಂದುತ್ವಕ್ಕಾಗಿ ಕೆಲಸ ಮಾಡ್ತಿದ್ದವರು – ಇವತ್ತು ಅಂತವರನ್ನೇ ಗುರಿಯಾಗಿಸಿ ದೌರ್ಜನ್ಯ ನಡೆಸಲಾಗಿದೆ’ ಎಂದು ಶ್ರೀಕೃಷ್ಣ ಉಪಾಧ್ಯಾಯ ಅವರು ವಿವರಿಸಿದರು.
‘ಮೊನ್ನೆಯ ಚುನಾವಣೆಯಲ್ಲಿ ಬಿಜೆಪಿಗೆ ಕೆಲಸ ಮಾಡಿದ್ದಾರೆ, ಆದರೆ ಇವರು ನಮ್ಮ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ಒಂದೇ ಕಾರಣಕ್ಕಾಗಿ ಹೀಗೆ ಮಾಡಿದ್ದಾರೆ. ನಮ್ಮ ಮನವಿ ಇಷ್ಟೇ ಇವರಿಗೆ ನ್ಯಾಯ ಸಿಗ್ಬೇಕು, ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿಗಳ ಪರಿಹಾರ ಕೊಡಿಸ್ಬೇಕು ಮತ್ತು ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು, ಹಾಗೆ ನೀವು ಪ್ರಯತ್ನಿಸ್ಬೇಕು..’ ಎಂದು ಪುತ್ತಿಲ ಅವರು ಗದ್ಗದಿತರಾಗಿ ಯತ್ನಾಳ ಅವರಲ್ಲಿ ಕೈಮುಗಿದು ಪ್ರಾರ್ಥಿಸಿಕೊಂಡರು.
ಗಾಯಾಳು ಯುವಕ ತನ್ನ ಮೇಲಾದ ದೌರ್ಜನ್ಯದ ಕುರಿತಾಗಿ ಯತ್ನಾಳ ಅವರಿಗೆ ವಿವರಿಸಿದರು. ‘ನಮಗೆ ಮೇಲಿನಿಂದ ಪ್ರೆಶರ್ ಇದೆ..ಕಾಲ್ ಬರ್ತಾ ಇದೆ..’ ಅಂತ ಪೊಲೀಸರು ಮಾತಾಡಿಕೊಳ್ತಿದ್ರು ಎಂಬ ವಿಚಾರವನ್ನು ಯತ್ನಾಳ ಅವರ ಗಮನಕ್ಕೆ ಗಾಯಾಳು ಯುವಕ ತಂದಿದ್ದಾರೆ.
ಪುತ್ತಿಲ ಮತ್ತು ಹಿಂದು ಕಾರ್ಯಕರ್ತರು ಮತ್ತು ಸಂತ್ರಸ್ತ ಯುವಕನ ಮಾತುಗಳನ್ನು ಮೌನವಾಗಿಯೇ ಕೇಳಿಸ್ಕೊಂಡ ಯತ್ನಾಳ ಅವರು ಬಳಿಕ ಈ ಪ್ರಕರಣದಲ್ಲಿ ನೊಂದವರಿಗೆ ನ್ಯಾಯ ದೊರಕಿಸಿಕೊಡಲು ತನ್ನಿಂದಾಗುವ ಪ್ರಯತ್ನಗಳನ್ನು ಮಾಡುತ್ತೇನೆ ಎಂದು ತಲೆಯಾಡಿಸಿ ಉತ್ತರಿಸಿ ಭರವಸೆ ತುಂಬಿದ್ದಾರೆ.
ಒಟ್ಟಿನಲ್ಲಿ ಪುತ್ತೂರಿನಲ್ಲಿ ಹಿಂದು ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದು ಇನ್ನು ಯಾವ ಮಗ್ಗುಲು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.
Posted by Vidyamaana on 2024-05-06 16:07:30 |
ಬೆಂಗಳೂರು: ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಅವರ ವಿರುದ್ಧವಾಗಿ ದಾಖಲಾಗಿರುವ ಈ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.
ಉಭಯ ನಾಯಕರು ಸೆಷನ್ಸ್ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ ಹೆಸರು ಬಳವುದನ್ನು ನಿರ್ಬಂಧಿಸುವವಂತೆ ಕೋರಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು
Posted by Vidyamaana on 2024-06-13 17:16:18 |
ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಇದೀಗ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಬೆಂಗಳೂರಿನ ಒಂದನೇ ತ್ವರಿತಗತಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಾಗಿತ್ತು.
Posted by Vidyamaana on 2023-04-25 16:39:04 |
ಪುತ್ತೂರು: ನವವಿವಾಹಿತೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಕೆದಿಲದಲ್ಲಿ ನಡೆದಿದೆ.
ಕೆಮ್ಮಿಂಜೆ ನಿವಾಸಿ ಪ್ರಶಾಂತ್ ಎಂಬವರ ಪತ್ನಿ ಹರ್ಷಿತಾ (28)ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.
ಕಳೆದ 2 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.