ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಕಾಪು : ಆಲದ ಮರ ಬಿದ್ದು ಕಾರ್ಮಿಕ ಸಾವು ಇಬ್ಬರಿಗೆ ಗಾಯ

Posted by Vidyamaana on 2023-10-02 22:25:05 |

Share: | | | | |


ಕಾಪು : ಆಲದ ಮರ ಬಿದ್ದು ಕಾರ್ಮಿಕ ಸಾವು  ಇಬ್ಬರಿಗೆ ಗಾಯ

ಕಾಪು: ನಾಗಬನ ಮತ್ತು ಮನೆ ಮೇಲೆ ಅಪಾಯಕಾರಿಯಾಗಿ ವಾಲಿದ್ದ ಮರವನ್ನು ಕಡಿಯುತ್ತಿದ್ದ ವೇಳೆ ಮರ ಉರುಳಿ ಬಿದ್ದು ಜಾರ್ಖಂಡ್ ಮೂಲದ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ಆ.2ರ ಸೋಮವಾರ ಮಧ್ಯಾಹ್ನ ನಡೆದಿದೆ.



ಬಿಹಾರ – ಜಾರ್ಖಂಡ್ ಮೂಲದ ಸುಧೀರ್ ಪಾಂಜೆ ಮೃತ ಕೂಲಿ ಕಾರ್ಮಿಕನಾಗಿದ್ದು, ಗಾಯಾಳುಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.


ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ಖಾಸಗಿಯವರಿಗೆ ಸೇರಿದ ನಾಗಬನವೊಂದರ ಮೇಲೆ ವಾಲಿದ್ದ ಬೃಹತ್ ಗೋಳಿಮರವನ್ನು ಕಡಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.


ಬೃಹತ್ ಗೋಳಿ ಮರವನ್ನು ಕಡಿಯುತ್ತಿದ್ದ ವೇಳೆ ಅದು ಕಾರ್ಮಿಕರ ಮೇಲೆ ಉರುಳಿ ಬಿದ್ದಿತ್ತು. ಇದರಿಂದಾಗಿ ಮೂವರು ಕಾರ್ಮಿಕರು ಮರದಡಿಗೆ ಸಿಲುಕಿಕೊಂಡಿದ್ದು, ಓರ್ವ ಮರದಡಿ ಸಿಲುಕಿ ಮೃತಪಟ್ಟಿರುವುದಾಗಿ ವರದಿಯಾಗಿದೆ.  ಇಬ್ಬರನ್ನು ರಕ್ಷಿಸಿ, ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮರದಡಿ ಸಿಲುಕಿರುವ ಕಾರ್ಮಿಕನನ್ನು ತೆರವುಗೊಳಿಸುವ ಕಾರ್ಯ ಬರದಿಂದ ಸಾಗುತ್ತಿದೆ. ಕಾಪು ಪೊಲೀಸರು ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು ಸ್ಥಳೀಯರ ನೇತೃತ್ವದಲ್ಲಿ ಮರ ತೆರವು ಕಾರ್ಯ ಬರದಿಂದ ಸಾಗುತ್ತಿದೆ.



ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಎಸ್.ಐ. ಅಬ್ದುಲ್ ಖಾದರ್, ಕ್ರೈಂ ಎಸ್.ಐ. ಪುರುಷೋತ್ತಮ್ ಹಾಗೂ ಪೊಲೀಸ್ ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳೀಯರು ಮರ ತೆರವು ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

ಮಹಿಳೆಯ ಕುತ್ತಿಗೆ ಹಿಸುಕಿ ಹತ್ಯೆಗೈದು ವ್ಯಕ್ತಿ ಪರಾರಿ, ಕಾರಣ?

Posted by Vidyamaana on 2024-01-05 09:09:09 |

Share: | | | | |


ಮಹಿಳೆಯ ಕುತ್ತಿಗೆ ಹಿಸುಕಿ ಹತ್ಯೆಗೈದು ವ್ಯಕ್ತಿ ಪರಾರಿ, ಕಾರಣ?

ಬೆಂಗಳೂರು (ಜ.05): ಮನೆಯಲ್ಲಿ ಏಕಾಂಗಿಯಾಗಿದ್ದಾಗ ಹಾರ್ಡ್‌ವೇರ್ ಮಳಿಗೆ ಮಾಲಿಕರೊಬ್ಬರ ಪತ್ನಿಯನ್ನು ಕಿಡಿಗೇಡಿಯೊಬ್ಬ ಕುತ್ತಿಗೆ ಹಿಸುಕಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಪ್ರಭಾಕರ ರೆಡ್ಡಿ ಲೇಔಟ್‌ ನಿವಾಸಿ ನೀಲಂ (30) ಕೊಲೆಯಾದ ದುರ್ದೈವಿ. ಈ ಕೃತ್ಯದಲ್ಲಿ ಮೃತರ ಪರಿಚಿತನ ಕೈವಾಡದ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.ತಮ್ಮ ಪತಿ ಹಾಗೂ ಮಕ್ಕಳು ಹೊರಗೆ ಹೋದ ಬಳಿಕ ನೀಲಂ ಒಬ್ಬರೇ ಮನೆಯಲ್ಲಿದ್ದರು. ಆ ವೇಳೆ ಅವರ ಮನೆಯೊಳಗೆ ಪ್ರವೇಶಿಸಿರುವ ಕಿಡಿಗೇಡಿಯು ನೀಲಂ ಅವರನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಂದಿದ್ದಾನೆ. ಕೆಲ ಹೊತ್ತಿನ ಬಳಿಕ ಶಾಲೆಗೆ ಮುಗಿಸಿ ಮೃತರ ಕಿರಿಯ ಪುತ್ರ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.ಹದಿಮೂರು ವರ್ಷಗಳ ಹಿಂದೆ ಉದ್ಯೋಗ ಅರಸಿ ನಗರಕ್ಕೆ ಬಂದ ಉತ್ತರಪ್ರದೇಶ ಮೂಲದ ಪ್ರದ್ಯುಮ್ನ ಅವರು, ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳ ಜತೆ ಪ್ರಭಾಕರ ರೆಡ್ಡಿ ಲೇಔಟ್‌ನಲ್ಲಿ ನೆಲೆಸಿದ್ದರು. ಮನೆ ಸಮೀಪದಲ್ಲೇ ಹಾರ್ಡ್ ವೇರ್‌ ಮಳಿಗೆ ನಡೆಸುತ್ತಿದ್ದ ಪ್ರದ್ಯುಮ್ನ, ಪೇಂಟರ್‌ ಗುತ್ತಿಗೆದಾರರೂ ಆಗಿದ್ದಾರೆ. ಎಂದಿನಂತೆ ಬೆಳಗ್ಗೆ 9 ಗಂಟೆಗೆ ಅಂಗಡಿಗೆ ಬಾಗಿಲು ತೆರೆಯಲು ಅವರು ಮನೆಯಿಂದ ಹೊರಟರೆ, ಮಕ್ಕಳು ಶಾಲೆಗೆ ತೆರಳಿದ್ದರು. ಆಗ ನೀಲಂ ಮಾತ್ರ ಮನೆಯಲ್ಲಿದ್ದಾಗ ಬೆಳಗ್ಗೆ 11.30ಕ್ಕೆ ಬಂದ ಆರೋಪಿ ಹತ್ಯೆ ಎಸಗಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಶಾಲೆಗೆ ಮುಗಿಸಿ ಮಧ್ಯಾಹ್ನ12 ಗಂಟೆಗೆ ಮೃತರ ಕಿರಿಯ ಪುತ್ರ ಮನೆಗೆ ಮರಳಿದ್ದಾನೆ. ಆ ವೇಳೆ ಬಾಗಿಲು ತೆರೆದಿದ್ದ ಮನೆಯೊಳಗೆ ಪ್ರವೇಶಿಸಿ ಬಾಲಕ, ಕೋಣೆಯಲ್ಲಿ ಪ್ರಜ್ಞಾಹೀನವಾಗಿ ಬಿದ್ದಿದ್ದ ತಾಯಿಯನ್ನು ಎಚ್ಚರಗೊಳಿಸಲು ಯತ್ನಿಸಿ ವಿಫಲವಾಗಿದ್ದಾನೆ. ಆಗ ಜೋರಾಗಿ ಬಾಲಕ ಅಳಲು ಕೇಳಿ ಆಗಮಿಸಿದ ನೆರೆಹೊರೆಯವರು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಟೊಮೆಟೋ ಅಂಗಡಿಗೆ ಬೌನ್ಸರ್ ನೇಮಿಸಿದ್ದ ವ್ಯಾಪಾರಿ ಅಜಯ್ ಫೌಜಿ ಬಂಧನ

Posted by Vidyamaana on 2023-07-12 17:06:37 |

Share: | | | | |


ಟೊಮೆಟೋ ಅಂಗಡಿಗೆ ಬೌನ್ಸರ್ ನೇಮಿಸಿದ್ದ ವ್ಯಾಪಾರಿ ಅಜಯ್ ಫೌಜಿ ಬಂಧನ

ವಾರಾಣಸಿ: ಟೊಮೆಟೋಗಳನ್ನು ರಕ್ಷಿಸಿಕೊಳ್ಳಲು ಬೌನ್ಸರ್ ಗಳನ್ನು ನೇಮಿಸಿದ್ದ ವ್ಯಾಪಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಮಾಜವಾದಿ ಪಕ್ಷದ ಕಾರ್ಯಕರ್ತ ಅಜಯ್ ಫೌಜಿ ಎಂಬವರು ರವಿವಾರ ವಾರಣಾಸಿಯ ಲಂಕಾ ಪ್ರದೇಶದಲ್ಲಿ ತರಕಾರಿ ಮಾರಾಟಗಾರರ ಅಂಗಡಿಯೊಂದರಲ್ಲಿ ಎರಡು ಬೌನ್ಸರ್ ಗಳನ್ನು ನಿಯೋಜಿಸಿದ್ದರು. ಇದು ಟೊಮೆಟೊ ಬೆಲೆಯ ಬಗ್ಗೆ ಚೌಕಾಶಿ ಮಾಡುವಾಗ ಖರೀದಿದಾರರು ಆಕ್ರಮಣಕಾರಿ ವರ್ತನೆ ತೋರುವುದನ್ನು ತಡೆಯಲು ಕೈಗೊಂಡ ಕ್ರಮ ಎಂದು ಅವರು ಹೇಳಿದ್ದರು.

ಅಂಗಡಿ ಮಾಲೀಕ ರಾಜ್ ನಾರಾಯಣ್ ನನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿದ್ದು, ನಾಟಕೀಯ ಪ್ರತಿಭಟನೆ ನಡೆಸಿದ ಅಜಯ್ ಫೌಜಿ ಹಾಗೂ ಇಬ್ಬರು ಬೌನ್ಸರ್ ಗಳು ಪರಾರಿಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ನಾರಾಯಣ್ ಮತ್ತು ವಿಕಾಸ್ ನನ್ನು ಐಪಿಸಿ ಸೆಕ್ಷನ್ 153 ಗಲಭೆಗೆ ಪ್ರಚೋದನೆ, 291 (ತಪ್ಪು ಪುನರಾವರ್ತನೆ) ಹಾಗೂ 505 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸುರತ್ಕಲ್: ಆಯತಪ್ಪಿ ನದಿಗೆ ಬಿದ್ದ ಬಜ್ಪೆ ನಿವಾಸಿ ಶಾಕಿರ್ ಮೃತ್ಯು

Posted by Vidyamaana on 2023-11-21 07:18:37 |

Share: | | | | |


ಸುರತ್ಕಲ್: ಆಯತಪ್ಪಿ ನದಿಗೆ ಬಿದ್ದ ಬಜ್ಪೆ ನಿವಾಸಿ ಶಾಕಿರ್ ಮೃತ್ಯು

ಸುರತ್ಕಲ್: ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಸೋಮವಾರ ನಡೆದಿದೆ.



ಮೃತರನ್ನು ಮೂಲತಃ ಬಜ್ಪೆ ನಿವಾಸಿ ಪ್ರಸ್ತುತ ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟುವಿನಲ್ಲಿ ವಾಸವಾಗಿರುವ ಶಾಕಿರ್‌ (30) ಎಂದು ತಿಳಿದುಬಂದಿದೆ.


ಮೃತ ಶಾಕಿರ್‌ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದರು. ಈ ವೇಳೆ ಶಾಕಿರ್‌ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಬಳಿಕ ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.


ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ ಎಂದು ತಿಳಿದು ಬಂದಿದೆ.


ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ನಡೆಯುತ್ತಿದೆ ಭಾರತೀಯ ಸೇನಾ ದಿನಾಚರಣೆ : ಬೆಂಗಳೂರಿನಲ್ಲಿ ನಡೆಯಲಿದೆ ಪಥ ಸಂಚಲನ

Posted by Vidyamaana on 2023-01-19 03:44:43 |

Share: | | | | |


ರಾಜ್ಯದಲ್ಲಿ ನಡೆಯುತ್ತಿದೆ ಭಾರತೀಯ ಸೇನಾ ದಿನಾಚರಣೆ : ಬೆಂಗಳೂರಿನಲ್ಲಿ ನಡೆಯಲಿದೆ ಪಥ ಸಂಚಲನ

ಭಾರತದ ಗೌರವದ ಪ್ರತೀಕ ಭಾರತೀಯ ಸೇನೆ. ವಿಶ್ವದ ಬಲಿಷ್ಠ ಸೈನ್ಯಗಳ ಪೈಕಿ ಭಾರತವೂ ಅಗ್ರಪಂಕ್ತಿಯಲ್ಲಿ ಗುರುತಿಸಿಕೊಂಡಿದೆ. ಆದ್ದರಿಂದ ಸೇನಾ ದಿನಾಚರಣೆ ಎಂದರೆ ಎಲ್ಲರಿಗೂ ಪುಳಕ. ಈ ವರ್ಷ ಬೆಂಗಳೂರಿನಲ್ಲಿ ಭಾರತೀಯ ಸೇನಾ ದಿನ ಆಯೋಜನೆಗೊಳ್ಳುತ್ತಿದೆ ಎನ್ನುವುದೇ ಹೆಮ್ಮೆಯ ವಿಷಯ.

     ಪ್ರತೀ ವರ್ಷವೂ ಜನವರಿ 15ರಂದು ಆಯೋಜನೆಗೊಳ್ಳುವ ಭಾರತೀಯ ಸೇನಾ ದಿನಾಚರಣೆ ಈ ವರ್ಷ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜನೆಗೊಳ್ಳಲಿದೆ. ವಿಶೇಷವಾಗಿ, ಈ ವರ್ಷ ಭಾರತೀಯ ಸೇನಾ ದಿನಾಚರಣೆಯ 75ನೇ ವರ್ಷಾಚರಣೆ ರಾಷ್ಟ್ರ ರಾಜಧಾನಿ ದಿಲ್ಲಿಯಿಂದ ಹೊರಗಡೆ ನಡೆಯುತ್ತಿದೆ.

       ಕರ್ನಾಟಕ ಮತ್ತು ಕೇರಳ ಉಪ ಪ್ರಾಂತದ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಆಗಿರುವ ಮೇಜರ್ ಜನರಲ್ ರವಿ ಮುರುಗನ್ ಅವರು ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ (ಎಂಇಜಿ) ಕೇಂದ್ರ ಬೆಂಗಳೂರಿನಲ್ಲಿ ಮಾತನಾಡುತ್ತಾ, ಈ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದಿದ್ದಾರೆ. ಎಂಇಜಿ ಕೇಂದ್ರ ಸೇನಾ ದಿನಾಚರಣೆಯ ಪರೇಡಿನ ಸ್ಥಳವಾಗಿರಲಿದ್ದು, ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯಾಚರಿಸಲಿದೆ ಎನ್ನುತ್ತಾರವರು.

      ಪಥ ಸಂಚಲನದಲ್ಲಿ ಒಟ್ಟು ಎಂಟು ವಿಭಾಗಗಳಿರಲಿದ್ದು, ಅವುಗಳಲ್ಲಿ ಒಂದು ಆರ್ಮಿ ಸರ್ವಿಸ್ ಕಾರ್ಪ್ಸ್ನ ಅಶ್ವದಳವೂ ಸೇರಿದೆ. ಅದರೊಡನೆ, ಐದು ರೆಜಿಮೆಂಟುಗಳ ಬ್ರಾಸ್ ಬ್ಯಾಂಡ್ಗಳ ಸಮ್ಮಿಲಿತವಾದ ಮಿಲಿಟರಿ ಬ್ಯಾಂಡ್ ಸಹ ಕಾರ್ಯಾಚರಿಸಲಿದೆ. ಈ ಎಂಟರಲ್ಲಿ ಪ್ರತಿಯೊಂದು ವಿಭಾಗವೂ ಬೇರೆ ಬೇರೆ ರೆಜಿಮೆಂಟ್ಗಳನ್ನು ಪ್ರತಿನಿಧಿಸಲಿದೆ. ಪ್ರತಿಯೊಂದು ರೆಜಿಮೆಂಟಿಗೂ ಅದರದೇ ಆದ ಸುಪ್ರಸಿದ್ಧ ಇತಿಹಾಸ ಮತ್ತು ಪರಂಪರೆಗಳಿವೆ. ಸೇನಾ ದಿನದ ಪಥಸಂಚಲನಕ್ಕೆ ಬೆಂಬಲವಾಗಿ, ಆರ್ಮಿ ಏವಿಯೇಷನ್ನ ಧ್ರುವ್ ಹಾಗೂ ರುದ್ರ ಹೆಲಿಕಾಪ್ಟರ್ಗಳು ಫ್ಲೈ ಬೈ ಹಾರಾಟ ಪ್ರದರ್ಶಿಸಲಿವೆ.


ಸೇನಾ ದಿನಾಚರಣೆಯ ಬಗ್ಗೆ ಒಂದಿಷ್ಟು...

       ಜನವರಿ 15, 1949ರಂದು ಫೀಲ್ಡ್ ಮಾರ್ಷಲ್ ಕೊಡಂದೇರ ಎಂ. ಕಾರ್ಯಪ್ಪ ಅವರು ಕೊನೆಯ ಬ್ರಿಟಿಷ್ ಜನರಲ್ ಫ್ರಾನ್ಸಿಸ್ ಬುಚರ್ ಅವರಿಂದ ಸೇನಾ ಮಹಾದಂಡನಾಯಕರಾಗಿ ಅಧಿಕಾರ ಸ್ವೀಕರಿಸಿದರು. ಈ ಭಡ್ತಿಯ ಬಳಿಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪಅವರು ಭಾರತೀಯ ಸೇನೆಯ ಪ್ರಥಮ ಕಮಾಂಡರ್ ಇನ್ ಚೀಫ್ ಆಗಿ ನೇಮಕಗೊಂಡರು. ಈ ದಿನವನ್ನು ಸ್ಮರಿಸಲು ಪ್ರತಿವರ್ಷ ಜನವರಿ 15ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ.

ಪಥ ಸಂಚಲನ, ಪದಕ ಪ್ರದಾನ, ಮಿಲಿಟರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ದಿನ ಹೊಸದಿಲ್ಲಿ ಮತ್ತು ಇತರ ಆರ್ಮಿ ಕಮಾಂಡ್ ಮುಖ್ಯ ಕಚೇರಿಗಳಲ್ಲಿ ನಡೆಯುತ್ತವೆ.

1947ರಲ್ಲಿ ಭಾರತ ಸಾರ್ವಭೌಮತ್ವವನ್ನು ಪಡೆದುಕೊಂಡಿತು. ಬಹುತೇಕ ಎರಡು ಶತಮಾನಗಳ ಬ್ರಿಟಿಷ್ ಆಡಳಿತದಿಂದ ಭಾರತ ಮುಕ್ತವಾಯಿತು. ಆ ಸಂದರ್ಭದಲ್ಲಿ ದೇಶ ವಿಭಜನೆ ನಡೆದು, ಪಾಕಿಸ್ತಾನದಿಂದ ಸಾಕಷ್ಟು ನಿರಾಶ್ರಿತರು ಭಾರತಕ್ಕೆ ಬರುತ್ತಿದ್ದರು. ಆಗ ದೇಶಾದ್ಯಂತ ಅಸ್ಥಿರತೆ ಎದುರಾಗಿತ್ತು.

ಆಡಳಿತ ಅಸ್ಥಿರತೆಯ ಕಾರಣದಿಂದ ಪರಿಸ್ಥಿತಿಯನ್ನು ನಿಯಂತ್ರಿಸಲು, ಶಾಂತಿ ಸ್ಥಾಪಿಸಲು ಸೇನೆ ಮಧ್ಯ ಪ್ರವೇಶಿಸಬೇಕಾಗಿತ್ತು. ಈ ಸಂದರ್ಭದಲ್ಲಿ ಕೆ.ಎಂ. ಕಾರ್ಯಪ್ಪನವರನ್ನು ಸೇನಾ ಮುಖ್ಯಸ್ಥರಾಗಿ ನೇಮಿಸಲಾಯಿತು.


ಕಾರ್ಯಪ್ಪನವರು 1899ರಲ್ಲಿ ಕರ್ನಾಟಕದ ಕೊಡಗಿನಲ್ಲಿ ಜನಿಸಿದರು. ಅವರ ತಂದೆ ಮಾದಪ್ಪಕಂದಾಯ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. ಸ್ಯಾಮ್ ಮಾಣಿಕ್ ಶಾ ಅವರೊಡನೆ ಐದು ಸ್ಟಾರ್ಗಳ ಫೀಲ್ಡ್ ಮಾರ್ಷಲ್ ಹುದ್ದೆಗೆ ನೇಮಕಗೊಂಡರು. ಅವರು ಭಾರತದ ಪ್ರಥಮ ಸೇನಾ ಮಹಾದಂಡನಾಯಕರಾಗಿ ನೇಮಕಗೊಳ್ಳುವ ಮತ್ತು ಫೈವ್ ಸ್ಟಾರ್ ಜನರಲ್ ಆಗಿರುವುದನ್ನು ಹೊರತುಪಡಿಸಿ, ಅವರು ಭಾರತೀಯ ಸೇನೆ ಆರಂಭಗೊಂಡ ಅವಧಿಯಲ್ಲಿ ಸೇರ್ಪಡೆಗೊಂಡಿದ್ದವರಲ್ಲಿ ಒಬ್ಬರಾಗಿದ್ದರು.


ಫೀಲ್ಡ್ ಮಾರ್ಷಲ್ ಕಾರ್ಯಪ್ಪ

ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರು ಪದವಿ ಗಳಿಸಿದ ಬಳಿಕ ಡಿಸೆಂಬರ್ 1, 1919ರಂದು ತಾತ್ಕಾಲಿಕ ಸೇನಾ ಸೇರ್ಪಡೆ ಪಡೆದುಕೊಂಡರು. ಅವರನ್ನು ಸೇನೆಗೆ ಸೆಪ್ಟಂಬರ್ 9, 1922ರಂದು, ಜುಲೈ 17, 1920ರಿಂದ ಜಾರಿಗೆ ಬರುವಂತೆ ಶಾಶ್ವತ ಸೇರ್ಪಡೆಗೊಳಿಸಲಾಯಿತು. ಇದನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪಅವರು ತನ್ನೊಡನೆ ಜುಲೈ 16, 1920ರಂದು ಪದವಿ ಪಡೆದ ಬ್ರಿಟಿಷ್ ಅಧಿಕಾರಿಗಳಿಂದ ಕೆಳಗಿನ ರ್ಯಾಂಕಿಂಗ್ ಪಡೆಯುವಂತೆ ಮಾಡುವ ಉದ್ದೇಶದಿಂದ ಮಾಡಲಾಗಿತ್ತು. ಮೇ 1920ರಲ್ಲಿ ಕಾರ್ಯಪ್ಪನವರನ್ನು 2/125 ನೇಪಿಯರ್ ರೈಫಲ್ಸ್ ಗೆ ವರ್ಗಾಯಿಸಲಾಯಿತು. ಆ ಪಡೆಯನ್ನು ಮೆಸಪೊಟಾಮಿಯಾಗೆ (ಇಂದಿನ ಇರಾಕ್) ಸ್ಥಳಾಂತರಿಸಲಾಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರು ಭಾರತಕ್ಕೆ ಬಂದ ಬಳಿಕ ಜೂನ್ 1922ರಲ್ಲಿ 7ನೇ ಪ್ರಿನ್ಸ್ ಆಫ್ ವೇಲ್ಸ್ ಡೋಗ್ರಾ ರೆಜಿಮೆಂಟಿಗೆ ನೇಮಿಸಲಾಯಿತು. ಜೂನ್ 1923ರಲ್ಲಿ ಅವರು 1/7 ರಜಪೂತ್ ರೆಜಿಮೆಂಟಿಗೆ ನೇಮಕಗೊಂಡರು. ಅದು ಅವರ ಶಾಶ್ವತ ರೆಜಿಮೆಂಟ್ ಆಯಿತು.

1925ರಲ್ಲಿ ಕಾರ್ಯಪ್ಪನವರು ಯುರೋಪ್, ಅಮೆರಿಕ, ಜಪಾನ್, ಚೀನಾ ಹಾಗೂ ಇತರ ದೇಶಗಳ ಪ್ರವಾಸ ನಡೆಸಿದರು. ಅವರು ಈ ಪ್ರವಾಸದಲ್ಲಿ ಹಲವು ದೇಶಗಳ ಸೈನಿಕರು ಮತ್ತು ನಾಗರಿಕರನ್ನು ಭೇಟಿ ಮಾಡಿದ್ದು, ಅವರಿಗೆ ಹೊಸ ಜ್ಞಾನ ನೀಡಿತ್ತು. ಅವರು ಫತೇಗರ್ನಲ್ಲಿ ಕಾರ್ಯ ನಿರ್ವಹಿಸುವಾಗ ಓರ್ವ ಬ್ರಿಟಿಷ್ ಅಧಿಕಾರಿಯ ಪತ್ನಿ ಅವರಿಗೆ ‘ಕಿಪ್ಪರ್’ ಎಂಬ ಅಡ್ಡ ಹೆಸರು ನೀಡಿದರು. 1927ರಲ್ಲಿ ಅವರು ಕ್ಯಾಪ್ಟನ್ ಆಗಿ ಪದೋನ್ನತಿ ಪಡೆದರೂ, ಅದನ್ನು ಸಾರ್ವಜನಿಕವಾಗಿ 1931ರ ತನಕ ಪ್ರಕಟಿಸಿರಲಿಲ್ಲ.

1947ರಲ್ಲಿ ಕಾರ್ಯಪ್ಪ ಯುನೈಟೆಡ್ ಕಿಂಗ್ಡಮ್ನ ಇಂಪೀರಿಯಲ್ ಡಿಫೆನ್ಸ್ ಕಾಲೇಜ್ನಲ್ಲಿ ತರಬೇತಿಗೆ ದಾಖಲಾದ ಪ್ರಥಮ ಭಾರತೀಯ ಎನಿಸಿಕೊಂಡರು. ಭಾರತ ಸ್ವತಂತ್ರಗೊಂಡ ಬಳಿಕ, ಕಾರ್ಯಪ್ಪನವರನ್ನು ಮೇಜರ್ ಜನರಲ್ ರ್ಯಾಂಕ್ನೊಂದಿಗೆ ಡೆಪ್ಯುಟಿ ಚೀಫ್ ಆಫ್ ಜನರಲ್ ಸ್ಟಾಫ್ ಆಗಿ ನೇಮಿಸಲಾಯಿತು. ಪಾಕಿಸ್ತಾನದೊಡನೆ ಯುದ್ಧ ಆರಂಭವಾದ ಬಳಿಕ, ಅವರನ್ನು ಈಸ್ಟರ್ನ್ ಆರ್ಮಿ ಕಮಾಂಡರ್ ಹಾಗೂ ಜನರಲ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್, ವೆಸ್ಟರ್ನ್ ಕಮಾಂಡ್ ಆಗಿ ಭಡ್ತಿಗೊಳಿಸಲಾಯಿತು.

1947ರ ಭಾರತ ಪಾಕ್ ಯುದ್ಧದಲ್ಲಿ ಕಾರ್ಯಪ್ಪನವರು ಭಾರತದ ಪಶ್ಚಿಮ ಪಡೆಗಳನ್ನು ಮುನ್ನಡೆಸಿದರು. ಬಳಿಕ ಅವರನ್ನು ಸೇನಾ ಮುಖ್ಯಸ್ಥರಾಗಿ ನೇಮಿಸಲಾಯಿತು. ಅವರು ಕಾರ್ಗಿಲ್ ಪ್ರಾಂತವನ್ನು ಮರುವಶಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅದೊಂದು ಮಹತ್ತರ ಸಾಧನೆಯಾಗಿತ್ತು.

ಕಾರ್ಯಪ್ಪನವರು ಕಮಾಂಡರ್ ಇನ್ ಚೀಫ್ ಹುದ್ದೆಯಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿ, ಜನವರಿ 14, 1953ರಂದು ನಿವೃತ್ತರಾದರು. ಅವರು ನಿವೃತ್ತಿ ಪಡೆಯುವ ಮುನ್ನ, ಅವರ ಮೊದಲ ರೆಜಿಮೆಂಟ್ ಆಗಿದ್ದ ರಜಪೂತ್ ರೆಜಿಮೆಂಟಲ್ ಕೇಂದ್ರಕ್ಕೆ ಬೀಳ್ಕೊಡುಗೆ ಭೇಟಿ ನೀಡಿದರು. ಅವರು ನಿವೃತ್ತರಾದ ಬಳಿಕ 1956ರ ತನಕ ಆಸ್ಟ್ರೇಲಿಯಾ ಹಾಗೂ ನ್ಯೂಝಿಲ್ಯಾಂಡ್ ಗಳಲ್ಲಿ ಭಾರತೀಯ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದರು.


ವೈಯಕ್ತಿಕ ಜೀವನ

ಮಾರ್ಚ್ 1937ರಲ್ಲಿ ಕಾರ್ಯಪ್ಪನವರು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರ ಮಗಳಾದ ಮುತ್ತು ಮಾಚಯ್ಯನವರನ್ನು ವಿವಾಹವಾದರು. ಅವರಿಗೆ ಒಬ್ಬ ಮಗ ಮತ್ತು ಒಬ್ಬಳು ಮಗಳಿದ್ದು, ಅವರ ಮಗ ಏರ್ ಮಾರ್ಷಲ್ ಕೆ.ಸಿ. ನಂದಾ ಕಾರ್ಯಪ್ಪಸಹ ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯಾಗಿದ್ದರು.

ಅವರಿಗೆ ಗೌರವಾರ್ಥವಾಗಿ ‘ಆರ್ಡರ್ ಆಫ್ ದ ಕಮಾಂಡರ್ ಇನ್ ಚೀಫ್ ಆಫ್ ದ ಲೀಜನ್ ಆಫ್ ಮೆರಿಟ್’ ನೀಡಲಾಯಿತು. 1993ನೇ ಇಸವಿಯಲ್ಲಿ, ತನ್ನ 94ನೇ ವಯಸ್ಸಿನಲ್ಲಿ ಕಾರ್ಯಪ್ಪನವರು ಬೆಂಗಳೂರಿನಲ್ಲಿ ವಿಧಿವಶರಾದರು. ಶಿಸ್ತಿನ ವ್ಯಕ್ತಿಯಾಗಿದ್ದ ಅವರ ಕೊಡುಗೆಗಳನ್ನು ಸೇನಾ ದಿನಾಚರಣೆಯ ಮೂಲಕ ನೆನಪಿಸಿ, ಗೌರವಿಸಲಾಗುತ್ತದೆ. ಅವರು ತನ್ನ ದೇಶಭಕ್ತಿಯ ಕಾರ್ಯಗಳಿಂದ ತಲೆಮಾರುಗಳ ಕಾಲ ಆದರ್ಶವಾಗಿ ಉಳಿದಿದ್ದಾರೆ.

ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆಗೆ ಯತ್ನಾಳ್‌ ಸ್ಪಷ್ಟನೆ

Posted by Vidyamaana on 2024-04-11 05:17:14 |

Share: | | | | |


ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆಗೆ ಯತ್ನಾಳ್‌ ಸ್ಪಷ್ಟನೆ

ವಿಜಯಪುರ, ಏ.10: ಕೆಲದಿನಗಳ ಹಿಂದೆ ಸಚಿವ ದಿನೇಶ್​ ಗುಂಡೂರಾವ್ (Dinesh Gundu Rao) ಮನೆ ಅರ್ಧ ಪಾಕಿಸ್ತಾನವಾಗಿದೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್(Basanagouda Patil Yatnal)​ ಹೇಳಿದ್ದರು. ಈ ಹಿನ್ನಲೆ ಯತ್ನಾಳ್​ ವಿರುದ್ದ ದಿನೇಶ ಗುಂಡೂರಾವ್ ಪತ್ನಿ ಟಬು ಅವರು ದೂರು ನೀಡಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಶಾಸಕ ಯತ್ನಾಳ್​, ನಿಮ್ಮ ಮನೆ ಅಂದರೆ ಯಾವುದು? ಅವರ ಮನೆ ಹಿಂಗಿದೆ ಅಂತಾ ಯಾರಿಗೆ ಗೊತ್ತು, ಕಾಂಗ್ರೆಸ್ ಮನೆಯಲ್ಲಿ ಇರುವವರು ಅರ್ಧ ಪಾಕಿಸ್ತಾನ ಏಜೆಂಟರಿದ್ದಾರೆ. ಕಾಂಗ್ರೆಸ್ಸಿಗರು ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದನ್ನ ಸಮರ್ಥಿಸಿಕೊಂಡರು,



Leave a Comment: