ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುವಾಗ ಕುತ್ತಿಗೆ ಸಿಲುಕಿ ವಿದ್ಯಾರ್ಥಿ ಶ್ರೀಷಾ ಮೃತ್ಯು

Posted by Vidyamaana on 2023-07-16 15:26:15 |

Share: | | | | |


ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುವಾಗ ಕುತ್ತಿಗೆ ಸಿಲುಕಿ ವಿದ್ಯಾರ್ಥಿ ಶ್ರೀಷಾ  ಮೃತ್ಯು

ಬೆಳ್ತಂಗಡಿ : ರಜೆ ಇದ್ದ ಕಾರಣ ಮನೆಯಲ್ಲಿ ಸಾರಿಯಲ್ಲಿ ಮಾಡಿದ್ದ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆ ದಿಡುಪೆಯಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮೊದಲ ಮಗ 8 ನೇ ತರಗತಿ ವಿದ್ಯಾರ್ಥಿ ಶ್ರೀಷಾ (14)  ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಬಿದ್ದಿದ್ದು ತಂಗಿ ನೋಡಿ ತಂದೆಗೆ ಮಾಹಿತಿ ನೀಡಿದ್ದು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಜುಲೈ 16 ರಂದು ಸಂಜೆ ನಡೆದಿದೆ.

ಬಾಲಕನ ಶವ ಶವಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

BREAKING : ನಟ ದರ್ಶನ್ ಫಾರ್ಮ್ ಹೌಸ್ ಮ್ಯಾನೇಜ‌ರ್ ವಿಷ ಸೇವಿಸಿ ಆತ್ಮಹತ್ಯೆ

Posted by Vidyamaana on 2024-06-18 12:03:08 |

Share: | | | | |


BREAKING : ನಟ ದರ್ಶನ್ ಫಾರ್ಮ್ ಹೌಸ್ ಮ್ಯಾನೇಜ‌ರ್ ವಿಷ ಸೇವಿಸಿ ಆತ್ಮಹತ್ಯೆ

ಬೆಂಗಳೂರು  : ಕಾಣೆಯಾಗಿದ್ದ ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ ಎಂಬಾತನ ಶವ ಪತ್ತೆಯಾಗಿದ್ದು,‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ (35) ವಿಷ ಸೇವಿಸಿ ಏಪ್ರಿಲ್‌ 17 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ.

ಪಿಡಿಓ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಪಂಚಾಯತ್ ರಾಜ್ ಇಲಾಖೆ- ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭ

Posted by Vidyamaana on 2024-03-18 16:52:23 |

Share: | | | | |


ಪಿಡಿಓ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಪಂಚಾಯತ್ ರಾಜ್ ಇಲಾಖೆ- ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭ

ಪುತ್ತೂರು  ಕರ್ನಾಟಕ ಸರಕಾರವು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) 150 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಮತ್ತು ಆನ್ಲೈನ್ ಮೂಲಕ ಲಿಖಿತ ಪರೀಕ್ಷಾ ತರಬೇತಿಯನ್ನು ಪ್ರಾರಂಭಿಸಲಿದ್ದು 18/03/2024 ಸೋಮವಾರದಿಂದ ಪ್ರವೇಶಾತಿ ಪ್ರಾರಂಭಗೊಳ್ಳಲಿದೆ.


ತರಬೇತಿ ಅವಧಿ ಎರಡುವರೆ ತಿಂಗಳು. ಕಳೆದ ಎರಡುವರೆ ವರ್ಷದಿಂದ ಪೊಲೀಸ್ ,ಅರಣ್ಯ ಇಲಾಖೆ, ಬ್ಯಾಂಕಿಂಗ್, ಕೆ.ಎಂ.ಎಫ್ ,ಶಿಕ್ಷಕರ ನೇಮಕಾತಿ ಸೇರಿದಂತೆ 116 ಎಷ್ಟು ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಸರಕಾರಿ ಹುದ್ದೆಗಳನ್ನು ಏರಿರುತ್ತಾರೆ. ಕರ್ನಾಟಕ ಸರಕಾರವು ಇತ್ತೀಚೆಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿರುವ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳಿಗೂ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭವಾಗಿದ್ದು, ಸದ್ಯ ಕರೆದಿರುವ ಪಿಡಿಓ ಹುದ್ದೆಗಳಿಗೆ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ.


ನೇರ ತರಗತಿಗಳು – ಬೆಳಗ್ಗೆ 9:30 ರಿಂದ ಮಧ್ಯಾಹ್ನ 1:00 ರವರೆಗೆ (ವಾರದ 5 ದಿನ) ಆನ್ಲೈನ್ ತರಗತಿಗಳು – ರಾತ್ರಿ 7:00 ರಿಂದ 8:00 ರವರೆಗೆ (ವಾರದ ಎಲ್ಲಾ ದಿನ) ಉದ್ಯೋಗಸ್ಥರಿಗೆ, ವಿದ್ಯಾರ್ಥಿಗಳಿಗೆ , ಗೃಹಿಣಿಯರಿಗಾಗಿ ಅನುಕೂಲವಾಗುವಂತೆ ನಡೆಯುತ್ತವೆ.


ಪಿಡಿಓ ನೇಮಕಾತಿಯ ಅರ್ಹತೆಗಳು :-

ವಿದ್ಯಾರ್ಹತೆ : ಯಾವುದೇ ಪದವಿ

ವೇತನ : 70,000 ವರೆಗೆ

ಹುದ್ದೆಗಳು :150

ವಯಸ್ಸಿನ ಮಿತಿ :18 ರಿಂದ 40 (ಸಾಮಾನ್ಯ 35 , ಒ.ಬಿ.ಸಿ 38 , SC,ST 40)

ನೇಮಕಾತಿ ಪ್ರಕ್ರಿಯೆ : ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ

ಅರ್ಜಿ ಪ್ರಾರಂಭ ದಿನಾಂಕ : 15/04/2024 ರಿಂದ 15/05/2024

ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು: ಫೋಟೋ ,ಅಂಕಪಟ್ಟಿ ,ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ,ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ.


ತರಬೇತಿಗಾಗಿ ಪ್ರವೇಶಾತಿ ಪಡೆಯಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ :

ವಿದ್ಯಾಮಾತಾ ಅಕಾಡೆಮಿ – ಹಿಂದೂಸ್ತಾನ್ ಕಾಂಪ್ಲೆಕ್ಸ್,1 ನೇ ಮಹಡಿ ,ಎ.ಪಿ.ಎಂ.ಸಿ ರಸ್ತೆ ಪುತ್ತೂರು.

9620468869/ 9148935808

ಸುಳ್ಯ ಶಾಖೆ : TAPCMS ಬಿಲ್ಡಿಂಗ್ ,ಕಾರ್ ಸ್ಟ್ರೀಟ್

9448527606

ಸೌದಿ ಜೈಲಿನಲ್ಲಿ ಕಡಬ ಯುವಕ ; ಬಿಡುಗಡೆ ಕೋರಿ ವಿದೇಶಾಂಗ ಸಚಿವರಿಗೆ ಕಟೀಲ್ ಪತ್ರ

Posted by Vidyamaana on 2023-08-20 09:06:42 |

Share: | | | | |


ಸೌದಿ ಜೈಲಿನಲ್ಲಿ ಕಡಬ ಯುವಕ ; ಬಿಡುಗಡೆ ಕೋರಿ ವಿದೇಶಾಂಗ ಸಚಿವರಿಗೆ ಕಟೀಲ್ ಪತ್ರ

ಮಂಗಳೂರು: ನಕಲಿ ಬ್ಯಾಂಕ್​ ಖಾತೆ ತೆರೆದು ಅಕ್ರಮ ಹಣ ವ್ಯವಹಾರ ಮಾಡಿರುವ ಪ್ರಕರಣದಡಿ ಜಿಲ್ಲೆಯ ಕಡಬದ ಐತೂರು ಗ್ರಾಮದ ಚಂದ್ರಶೇಖರ ಎಂ.ಕೆ. ಎಂಬ ಯುವಕನನ್ನು ಸೌದಿ ಅರೇಬಿಯಾದ ರಿಯಾದ್​ನಲ್ಲಿ ಬಂಧಿಸಲಾಗಿದೆ. ಹ್ಯಾಕರ್​ಗಳು ನಕಲಿ ಖಾತೆ ಸೃಷ್ಟಿಸಿ ವಂಚಿಸಿದ್ದು, ನಿರಪರಾಧಿ ಯುವಕನ ಬಿಡುಗಡೆಗೆ ಪ್ರಯತ್ನಿಸುವಂತೆ ಒತ್ತಾಯಿಸಿ ವಿದೇಶಾಂಗ ಸಚಿವ ಡಾ.ಎಸ್.​ ಜೈಶಂಕರ್​ ಅವರಿ​ಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಪತ್ರ ಬರೆದಿದ್ದಾರೆ.


ವಿದೇಶಾಂಗ ಸಚಿವವರಿಗೆ ನಳಿನ್ ಕಟೀಲ್ ಪತ್ರ ; 


ಪತ್ರದ ವಿವರ:ನನ್ನ ಸಂಸದೀಯ ಕ್ಷೇತ್ರದ ನಿವಾಸಿ 33 ವರ್ಷದ ಚಂದ್ರಶೇಖರ್​​ ಮುಜೂರ್ ಕೆಂಚಪ್ಪ ಎಂಬವರು 2022ರಿಂದ ಸೌದಿ ಅರೇಬಿಯಾದ AL FANAR ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಸದ್ಯ ಅವರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಖರೀದಿಸಿದಾಗ ಅನಿರೀಕ್ಷಿತ ಘಟನೆಗಳ ಸರಣಿಗೆ ಒಳಗಾಗಿ ಬಂಧಿಸಲ್ಪಟ್ಟಿದ್ದಾರೆ. ನನಗೆ ಬಂದಿರುವ ಮಾಹಿತಿಯ ಪ್ರಕಾರ, ಚಂದ್ರಶೇಖರ ಅವರ ಬಯೋಮೆಟ್ರಿಕ್ ಡೇಟಾ, ಹೆಬ್ಬೆರಳ ಗುರುತನ್ನು ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಖರೀದಿಸುವ ಪ್ರಕ್ರಿಯೆ ವೇಳೆ ಎರಡು ಬಾರಿ ಸೆರೆಹಿಡಿಯಲಾಗಿದೆ. ತದನಂತರ ಅವರಿಗೆ ಅರೇಬಿಕ್ ಭಾಷೆಯಲ್ಲಿ ಸಂದೇಶವೊಂದು ಬಂದಿದೆ. ಭಾಷೆ ತಿಳಿಯದೇ ಅವರು ಅದನ್ನು ಕ್ಲಿಕ್ ಮಾಡಿದ್ದಾರೆ. ಬಳಿಕ ಅವರಿಗೆ ತಮ್ಮ ಸಿಮ್ ಕಾರ್ಡ್ ವಿವರ ನೀಡುವಂತೆ ಕರೆ ಬಂದಿದೆ. ಕರೆ ಮಾಡಿದವರೊಂದಿಗೆ ಅವರ OTP ಹಂಚಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಯ ಬಳಿಕ ಅವರು ಬ್ಯಾಂಕಿಂಗ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಚಂದ್ರಶೇಖರ್​​ ವೈಯಕ್ತಿಕ ಮಾಹಿತಿ ದುರ್ಬಳಕೆ ಮಾಡಿಕೊಂಡಿರುವ ಹ್ಯಾಕರ್‌ಗಳು ಅವರ ಹೆಸರಿನಲ್ಲಿ ವಂಚನೆಯ ಬ್ಯಾಂಕ್ ಖಾತೆ ತೆರೆದಿದ್ದಾರೆ. ಸ್ಥಳೀಯ ಮಹಿಳೆಯ ಖಾತೆಯಿಂದ ಅನಧಿಕೃತವಾಗಿ ಹಣ ವರ್ಗಾಯಿಸಿಕೊಂಡಿದ್ದಾರೆ. ಹಣವನ್ನು ತ್ವರಿತವಾಗಿ ವಿದೇಶಕ್ಕೆ ರವಾನಿಸಲಾಗಿದೆ. ಇದರ ಪರಿಣಾಮ, ಚಂದ್ರಶೇಖರ ಅವರನ್ನು ಹಣ ವರ್ಗಾವಣೆ ಪ್ರಕರಣದಲ್ಲಿ ಪೊಲೀಸ್​ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಸ್ತುತ ರಿಯಾದ್​ನ ಲಾಬನ್ ಉಪನಗರ ಠಾಣೆ ಪೊಲೀಸರ ವಶದಲ್ಲಿದ್ದಾರೆ. ಪೊಲೀಸ್ ಕಸ್ಟಡಿಯಿಂದ ಚಂದ್ರಶೇಖರ ಮುಜೂರ್ ಅವರ ಬಿಡುಗಡೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಪತ್ರದ ಮೂಲಕ ಆಗ್ರಹಿಸಿದ್ದಾರೆ.


ಸಹೋದರಿ ಹೇಳಿಕೆ;


ಚಂದ್ರಶೇಖರ್ ಅವರ ಸಹೋದರಿ ಪುನೀತ ಮಾತನಾಡಿ, " ಅಲ್ಫಾನರ್ ಸೆರಾಮಿಕ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಚಂದ್ರಶೇಖರ್, ಹ್ಯಾಕರ್​ಗಳ ವಂಚನೆಯ ಸುಳಿಗೆ ಸಿಲುಕಿ 2022ರ ನವೆಂಬರ್​ನಿಂದ ರಿಯಾದ್​ನ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಕಳೆದ ವರ್ಷ ಮೊಬೈಲ್ ಹಾಗೂ ಸಿಮ್ ಖರೀದಿಗೆ ರಿಯಾದ್​ನ ಅಂಗಡಿಗೆ ಹೋಗಿದ್ದಾರೆ. ಅಲ್ಲಿ ಎರಡು ಬಾರಿ ಅವರ ತಂಬ್ ಪಡೆಯಲಾಗಿತು. ವಾರದ ಬಳಿಕ ಅವರಿಗೆ ಅರೇಬಿಕ್ ಭಾಷೆಯಲ್ಲೊಂದು ಸಂದೇಶ ಬಂದಿದೆ. ಅದನ್ನು ಕ್ಲಿಕ್ ಮಾಡಿದ್ದು, ಎರಡು ದಿನಗಳ ಬಳಿಕ ದೂರವಾಣಿ ಕರೆ ಬಂದಿದೆ. ಸಿಮ್ ಮಾಹಿತಿ ಕೇಳಿ ಒಟಿಪಿ ಸಂಖ್ಯೆ ಪಡೆದಿದ್ದಾರೆ. ಆದರೆ, ವಾರದ ಬಳಿಕ ಏನೂ ಮಾಹಿತಿ ನೀಡದೆ ಅವರನ್ನು ರಿಯಾದ್ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಮಗೆ ರಿಯಾದ್​ನಲ್ಲಿರುವ ಕೊಡಗು ಮೂಲದ ಅರುಣ್ ಎಂಬವರು ವಿಚಾರ ತಿಳಿಸಿದ್ದಾರೆ.


ಬಳಿಕ ಚಂದ್ರಶೇಖರ್​ಗೆ ತಿಳಿಯದೆ ರಿಯಾದ್​ನಲ್ಲಿ ಬ್ಯಾಂಕ್ ಖಾತೆ ತೆರೆದಿರುವುದು ಗೊತ್ತಾಗಿದೆ. ಖಾತೆಗೆ ರಿಯಾದ್​ನ ಮಹಿಳೆಯೊಬ್ಬರಿಂದ 22 ಸಾವಿರ ರಿಯಲ್ ಹಣ ಜಮೆಯಾಗಿದ್ದು, ಅದು ಇನ್ನಾವುದೋ ದೇಶಕ್ಕೆ ವರ್ಗಾವಣೆಯಾಗಿದೆ. ಆಕೆ ನೀಡಿರುವ ದೂರಿನಂತೆ ಚಂದ್ರಶೇಖರ್‌ ಅವರನ್ನು ಬಂಧಿಸಲಾಗಿದೆ. ಜೈಲುಪಾಲಾದ ಚಂದ್ರಶೇಖರ್​ ಬಿಡುಗಡೆಗೆ ರಿಯಾದ್ ವಕೀಲರ ಮೂಲಕ ಪ್ರಯತ್ನಪಟ್ಟರೂ 10 ಲಕ್ಷ ರೂ. ಖರ್ಚಾಗಿದೆಯೇ ವಿನಃ ಬೇರಾವುದೇ ಫಲಿತಾಂಶ ದೊರಕಿಲ್ಲ" ಎಂದು ಅವರು ಹೇಳಿದ್ದಾರೆ

ಚರಣ್‌ರಾಜ್ ರೈ ಹತ್ಯೆ ಪ್ರಕರಣ:ಆರೋಪಿಗಳಿಗೆ ಆಶ್ರಯ ಆರೋಪಿ ಪ್ರಜ್ವಲ್‌ಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು

Posted by Vidyamaana on 2023-08-05 01:43:38 |

Share: | | | | |


ಚರಣ್‌ರಾಜ್ ರೈ ಹತ್ಯೆ ಪ್ರಕರಣ:ಆರೋಪಿಗಳಿಗೆ ಆಶ್ರಯ ಆರೋಪಿ ಪ್ರಜ್ವಲ್‌ಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು

ಪುತ್ತೂರು:ವರ್ಷದ ಹಿಂದೆ ಪೆರ್ಲಂಪಾಡಿಯಲ್ಲಿ ನಡೆದ ಚರಣ್‌ ರಾಜ್ ರೈ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪಿ ಪ್ರಜ್ವಲ್ ರವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಜೂನ್ 04 2022 ರಂದು, ಚರಣ್‌ ರಾಜ್‌ರವರ ಮಾವ ಕಿಟ್ಟಣ್ಣ ರೈ ಎಂಬವರು ಪೆರ್ಲಂಪಾಡಿ ಎಂಬಲ್ಲಿ ಮೆಡಿಕಲ್ ಶಾಪ್ ಪ್ರಾರಂಭಿಸುವವರಿದ್ದ ಹಿನ್ನೆಲೆಯಲ್ಲಿ ಪೂರ್ವ ತಯಾರಿ ಕೆಲಸಕ್ಕೆಸಹಾಯ ಮಾಡಲು ಚರಣ್‌ರಾಜ್ ಸ್ನೇಹಿತ ನವೀನ್ ಕುಮಾರ್ ಕಾರಿನಲ್ಲಿ ಪೆರ್ಲರಿಪಾಡಿಗೆ ತೆರಳಿ ಮೆಡಿಕಲ್ ಶಾಪ್ ಬಳಿ ಕೆಲಸದಲ್ಲಿ ತೊಡಗಿದ್ದರು.ಈ ವೇಳೆ ಚರಣ್‌ ರಾಜ್ ರೈರವರು ಹೊರಗಡೆ ಬಂದು ಕಾರಿನ ಬಳಿ ಮೊಬೈಲ್ ಫೋನಲ್ಲಿ ಮಾತನಾಡುತ್ತಿದ್ದಾಗ ದುಷ್ಕರ್ಮಿಗಳು ಅವರಿಗೆ ಹಲ್ಲೆ ಮಾಡಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ 7ನೇ ಆರೋಪಿಯನ್ನಾಗಿ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿತ್ತು.ಆ ಬಳಿಕ ಪ್ರಜ್ವಲ್‌ ರವರು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ ಅವರು ಆರೋಪಿ ಪ್ರಜ್ವಲ್‌ಗೆ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದ್ದಾರೆ.ಆರೋಪಿ ಪರ ವಕೀಲರಾದ ರಾಜಶೇಖರ ಎಸ್ ಮತ್ತು ಮಹೇಶ್ ಕಜೆ ಅವರು ವಾದಿಸಿದ್ದರು.

ರಾಜ್ಯ ಬಿಜೆಪಿ ಡೀಲ್ ಗಳೆಲ್ಲವೂ ಕೋಟಿ ಲೆಕ್ಕದಲ್ಲಿ ಕಾಂಗ್ರೆಸ್ ವಾಗ್ದಾಳಿ

Posted by Vidyamaana on 2023-09-13 18:03:09 |

Share: | | | | |


ರಾಜ್ಯ ಬಿಜೆಪಿ ಡೀಲ್ ಗಳೆಲ್ಲವೂ ಕೋಟಿ ಲೆಕ್ಕದಲ್ಲಿ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಹಿಂದೂ ಪರ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರು ಉದ್ಯಮಿ ಗೋವಿಂದ್ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡುವ ವಿವಿಚಾರದಲ್ಲಿ ವಂಚನೆ ಎಸಗಿರುವ ಪ್ರಕರಣದಲ್ಲಿ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪಗಳ ಸುರಿಮಳೆಗೈದಿದೆ.



ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ”ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಸಿಎಂ ಹುದ್ದೆಗೆ 2,500 ಕೋಟಿ,ಮಂತ್ರಿಗಿರಿಗೆ 70 – 80 ಕೋಟಿ,MLA ಟಿಕೆಟ್ ಗೆ 7 ಕೋಟಿ!!. ಇದೆಲ್ಲವೂ ಬಿಜೆಪಿಯವರಿಂದಲೇ ಬಯಲಾದ ಸತ್ಯಗಳು.ಯತ್ನಾಳ್ ಆಣೆಗೂ ಇದನ್ನು ನಾವು ಹೇಳಿದ್ದಲ್ಲ!. ಈ ಮಾರಾಟದ ಆಟದಲ್ಲಿ “ವಿರೋಧ ಪಕ್ಷದ ನಾಯಕ”ನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ ?” ಎಂದು ವ್ಯಂಗ್ಯವಾಗಿ ಬಿಜೆಪಿಯನ್ನು ಪ್ರಶ್ನಿಸಿದೆ.


”ಬಿಜೆಪಿ ಪಕ್ಷದಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಟಿಕೆಟ್ ವಂಚನೆಯ ಪ್ರಕರಣದಲ್ಲಿ ಬಿಜೆಪಿಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯೂ ಪ್ರಮುಖ ಆರೋಪಿ.ಈತನ ವಂಚನೆಯ ಬಗ್ಗೆ ಒಂದು ತಿಂಗಳ ಹಿಂದೆಯೇ ಪಕ್ಷಕ್ಕೆ ದೂರು ಬಂದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಏಕೆ ?”ಎಂದು ಪ್ರಶ್ನಿಸಿದೆ.


”ವಂಚಕರಿಗೆ, ಭ್ರಷ್ಟರಿಗೆ ಬಿಜೆಪಿ ತವರು ಮನೆಯಾಗಿದೆಯೇ? ಮಾಜಿ ಗೃಹಸಚಿವರು ಆರೋಪಿಯ ಪರ ವಕಾಲತ್ತು ವಹಿಸುತ್ತಿರುವುದರ ಹಿಂದೆ ಯಾವ ಸತ್ಯ ಅಡಗಿದೆ? ವಂಚನೆ ಆರೋಪಿಯೊಂದಿಗೆ ವೇದಿಕೆಯಲ್ಲಿ ಯಾವ ಘನಂದಾರಿ ಚರ್ಚೆ ಮಾಡಿದ್ದಿರಿ ಆರಗ ಜ್ಞಾನೇಂದ್ರ ಅವರೇ?ಕುಮಾರಕೃಪಾದಲ್ಲಿ ಡೀಲಿಂಗ್ ನಡೆಸಿದ ಸ್ಯಾಂಟ್ರೋ ರವಿ, ಚೈನ್ ಚೈತ್ರಾ ಜ್ಞಾನೇಂದ್ರರಿಗೆ ಪರಮಾಪ್ತರು.ವಂಚಕರಿಗೆ ಕುಮಾರಕೃಪಾ ಸಿಗಲು ಮಾಜಿ ಗೃಹ ಸಚಿವರ ಕೃಪೆ ಇತ್ತೇ? ಬಿಜೆಪಿ ಪಕ್ಷದ ಟಿಕೆಟ್ ಕೊಡಿಸುತ್ತೇನೆಂದು, ಬಿಜೆಪಿಯವರಿಗೇ ವಂಚಿಸಿದರೂ ವಂಚಕಿಯ ಪರ ನಿಂತಿರುವುದರ ಹಿಂದೆ ಯಾವ ಹಿತಾಸಕ್ತಿ ಅಡಗಿದೆ?” ಎಂದು ಸರಣಿ ಪ್ರಶ್ನೆಗಳನ್ನು ಕೇಳಿದೆ.



Leave a Comment: