Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10
ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.
Posted by Vidyamaana on 2023-05-01 17:25:03 |
ಪುತ್ತೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಕುಮಾರ್ ರೈ ಅವರು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಬಾರಿ ಪುತ್ತೂರಿನಲ್ಲಿ ಗೆಲುವಿನ ವಿಶ್ವಾಸದಲ್ಲಿರುವ ಕಾಂಗ್ರೆಸ್ ಪಕ್ಷ ಅದಕ್ಕೆ ಸರಿಯಾಗಿ ತಮ್ಮೊಳಗಿರುವ ಬಣರಾಜಕೀಯವನ್ನು ಮರೆತು ಒಗ್ಗಟ್ಟಿನಿಂದ ಪ್ರಚಾರ ನಡೆಸ್ತಿದ್ದಾರೆ.
Posted by Vidyamaana on 2024-04-23 21:56:48 |
ಪುತ್ತೂರು : ಮಹಿಳೆಯರ ಪ್ರಗತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರ್ನಾಟಕಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ 5 ಗ್ಯಾರಂಟಿಗಳು ಮಹಿಳೆಯರಿಗೆ ಶಕ್ತಿ ತುಂಬಿದೆ. ಪ್ರಚಾರದ ಸಂದರ್ಭದಲ್ಲಿ ಪ್ರತಿ ಮನೆ ಮನೆಗಳ ಮಹಿಳೆಯರಲ್ಲಿ ಖುಷಿ ಕಾಣಿಸುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಹೇಳಿದ್ದಾರೆ.
Posted by Vidyamaana on 2023-05-24 12:47:41 |
ಬೆಳ್ತಂಗಡಿ: ಖಡಕ್ ರಾಜಕಾರಣಿ ಎಂದೇ ಖ್ಯಾತಿ ಪಡೆದ ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರರನ್ನು ರಾಜಕೀಯದಲ್ಲಿ ಸಕ್ರೀಯವಾಗಿಸಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸುಕರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಭ್ರಷ್ಟಾಚಾರ ರಹಿತ ಆಡಳಿತ ಹಾಗೂ ಖಡಕ್ ವ್ಯಕ್ತಿತ್ವದಿಂದ ಜನಾನುರಾಗಿಯಾಗಿದ್ದ ವಸಂತ್ ಬಂಗೇರರನ್ನು ಎಂ.ಎಲ್.ಸಿ. ಮಾಡಿ, ಸಚಿವರನ್ನಾಗಿ ಆಯ್ಕೆ ಮಾಡಬೇಕು ಎನ್ನುವುದು ಸಿಎಂ ಇಂಗಿತ. ಈ ಮೂಲಕ ಕರಾವಳಿ ರಾಜಕೀಯವನ್ನು ಮತ್ತೆ ಸಕ್ರೀಯಗೊಳಿಸುವುದು ಚಾಣಕ್ಯ ಸಿದ್ದರಾಮಯ್ಯರ ತಂತ್ರ ಎಂದು ಹೇಳಲಾಗಿದೆ.
Posted by Vidyamaana on 2023-07-14 15:26:38 |
ಬೆಳ್ತಂಗಡಿ: ಈ ಬಾರಿಯ ವಿಧಾನ ಸಭಾ ಚುನಾವಣೆ ಸೋಲು ಗೆಲುವಿನ ವಿಮರ್ಶೆಗಾಗಿ ಸೇರಿದ್ದ ವೀಕ್ಷಕರ ಮುಂದೆಯೇ ರಕ್ಷಿತ್ ಶಿವರಾಂ ಸೋಲಿಗೆ ಬ್ಲಾಕ್ ಕಾಂಗ್ರೆಸ್ ನೇರ ಕಾರಣ ಎಂದು ಆತ್ಮೀಯ ಬಳಗವೊಂದು ಸಭೆಯಲ್ಲಿ ಗಲಭೆ ಎಬ್ಬಿಸಿ ಗಲಾಟೆ ನಡೆದ ಘಟನೆ ಜು.14 ರಂದು ಸಂಜೆ ನಡೆದಿದೆ.
ಬೆಳ್ತಂಗಡಿ ಮೂರು ಮಾರ್ಗದ ಬಳಿ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಇಬ್ರಾಹಿಂ, ಸಹಿತ ಅಶ್ವಿನ್ ರೈ ಬಂಟ್ವಾಳ್ ವೀಕ್ಷಕರಾಗಿ ಸೇರಿದ್ದರು.
ಸಭೆ ಆರಂಭವಾಗುತ್ತಲೆ ರಾಜೇಶ್ ಭಟ್ ಸವಣಾಲು ಮತ್ತು ಪ್ರವೀಣ್ ಫೆರ್ನಾಂಡೀಸ್, ಸಚಿನ್ ನೂಜೋಡಿ ಸಹಿತ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೋಲಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್ ,ರಂಜನ್ ಗೌಡ ಹಾಗೂ ಗಂಗಾಧರ್ ಗೌಡ ಕಾರಣ ಅವರನ್ನು ಪಕ್ಷದಿಂದ ಉಚ್ಚಾನೆ ಮಾಡಬೇಕೆಂದು ಬಿಗಿ ಪಟ್ಟು ಹಿಡಿದು ಗಲಾಟೆ ನಡೆಸಿದರು.
ವಿಧಾನ ಪರಿಸತ್ ಸದಸ್ಯ ಕೆ.ಹರೀಶ್ ಕುಮಾರ್ ಪುತ್ರ ಅಭಿನಂದನ್ ಹರೀಶ್ ಹಾಗೂ ಸ್ವಯಂ ಘೋಷಿತ ನಾಯಕನೆನಿಸಿಕೊಂಡ ಮೋಹನ್ ಗೌಡ ಕಲ್ಮಂಜ ಕಾರ್ಯಕರ್ತರ ಬಳಿ ಏಕವಚನದಲ್ಲಿ ಮಾತಾನಾಡಿದ್ದು ಈ ವೇಳೆ ಅಭಿನಂದನ್ ಹರೀಶ್ ಕುಮಾರ್ ಉಂದು ಎನ್ನಾ ಅಫೀಸ್, ಉಂದು ಎನ್ನ ಚೇರ್ ,ಉಂದು ಎಂಕ್ಲೆನಾ ಪಾರ್ಟಿ , ಉಂದು ಎಂಕ್ಲೆನಾ ಸೋಫಾ ಅಂತ ಹೇಳಿ ನೀವು ಒಳಗೆ ಬರಬೇಡಿ ಎಂದು ಬೊಬ್ಬೆ ಹಾಕಿದ್ದಾನೆ. ಈ ನಡುವೆ ಮಾತಿಗೆ ಮಾತು ಬೆಳೆದು ಒಬ್ಬರಿಗೊಬ್ಬರು ಹೊಡೆದಾಡಿಕೊಳ್ಳುವವರೆಗೆ ಗಲಾಟೆ ತಲುಪಿತು. ರೌಡಿಸಂ ಮಾಡಿದ ಮೋಹನ್ ಗೌಡ ಕಲ್ಮಂಜ ನಿಗೆ ಗಣೇಶ್ ಕಾಣಿಯೂರು ಕಪಾಲಕ್ಕೆ ಭಾರಿಸಿ ಅಲ್ಲಿಂದ ಓಡಿಸಿದ್ದಾನೆ.
ತಕ್ಷಣ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಘಟನೆಯನ್ನು ಶಾಂತಗೊಳಿಸಿದರು. .
Posted by Vidyamaana on 2023-02-22 17:21:42 |
ಮಂಗಳೂರು, ಫೆ.22; ನಗರದ ರಥಬೀದಿಯ ಹೂವಿನ ಮಾರುಕಟ್ಟೆಯ ಎದುರಿನ ಅನಂತೇಶ್ ಕಟ್ಟಡದ ಒಂದನೇ ಮಹಡಿಯಲ್ಲಿ ಶಿಲ್ಪಾಸ್ ಹೆಲ್ತ್ ಕೇರ್ ಉದ್ಘಾಟನಾ ಸಮಾರಂಭ ಬುಧವಾರ ನೆರವೇರಿತು . ಮಾಸ್ಟರ್ ಸಮನ್ವಯ್ ಉರುಬೈಲು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ್ ಪಿ. ಯಸ್ ದೀಪ ಬೆಳಗಿಸಿ ಶುಭ ಕೋರಿದರು.
ಮಂಗಳೂರು ಮಹಾ ನಗರ ಪಾಲಿಕೆ ಯ ಉಪ ಮೇಯರ್ ಪೂರ್ಣಿಮಾ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, C. A . ಜಗನ್ನಾಥ್ ಕಾಮತ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಶುಭ ಕೋರಿದರು.
ಸಮಾರಂಭದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕರಾದ ಡಾ ಯು. ಪಿ. ಶಿವಾನಂದ, ಶೋಭಾ ಶಿವಾನಂದ, ಕಮಲ ಮುಡೂರು, ಸುಬ್ರಾಯ ಶೆಣೈ, ಶಾಂತಿ ಶೆಣೈ, ವಿಶ್ವೇಶ್ವರಯ್ಯ ಟೆಕ್ನಿಕಲ್ ಯುನಿವರ್ಸಿಟಿಯ ಗವರ್ನಿಂಗ್ ಕೌನ್ಸಿಲ್ ಸದಸ್ಯ ಡಾ. ಉಜ್ವಲ್ ಉರುಬೈಲು, ಸುಜಿತ್ ರೈ ಪಾಲ್ತಾಡು, ಶಿಲ್ಪಾಸ್ ಹೆಲ್ತ್ ಕೇರ್ ನಲ್ಲಿ ಮುಂದಿನ ದಿನಗಳಲ್ಲಿ ಲಭ್ಯರಿರುವ ಎ. ಜೆ.ಆಸ್ಪತ್ರೆಯ ನ್ಯೂರೋಲೋಜಿಸ್ಟ್ ಡಾ. ಪ್ರದ್ಯುಮ್ನ ಭಂಡಾರಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ದ ಕಾರ್ಯಕಾರಿ ಸಮಿತಿ ಸದಸ್ಯ ಪಿ. ಬಿ. ಹರೀಶ್ ರೈ, ದ.ಕ .ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕೋಶಾಧಿಕಾರಿ ಪುಷ್ಪರಾಜ್ ಬಿ. ಎನ್ ಮೊದಲಾದವರು ಉಪಸ್ಥಿತರಿದ್ದರು. ಶಿಲ್ಪಾಸ್ ಹೆಲ್ತ್ ಕೇರ್ ನ ಡಾ. ಶಿಲ್ಪಾ ಶೆಣೈ ಸ್ವಾಗತಿಸಿ ವಂದಿಸಿದರು, ಶ್ರೇಯಸ್ ಊರುಬೈಲು ಸಹಕರಿಸಿದರು, ಭಾಸ್ಕರ್ ರೈ ಕಟ್ಟ ನಿರೂಪಿಸಿದರು.
Posted by Vidyamaana on 2024-05-08 17:47:42 |
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.