ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಕೆಎಎಸ್ ಅಧಿಕಾರಿ ಪತ್ನಿ ಚೈತ್ರ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ತಿರುವು

Posted by Vidyamaana on 2024-05-11 22:28:01 |

Share: | | | | |


ಕೆಎಎಸ್ ಅಧಿಕಾರಿ ಪತ್ನಿ ಚೈತ್ರ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ತಿರುವು

ಬೆಂಗಳೂರು : ಮನೆಯ ಬೆಡ್ ರೂಂ ಅಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಕಳೆದ ಮೂರು ತಿಂಗಳ ಹಿಂದೆಯೇ ಮೃತ ಚೈತ್ರ ಗೌಡ ಡೆತ್ ನೋಟ್ ಬರೆದಿದ್ದರು ಎಂದು ತನಿಖೆಯ ವೇಳೆ ಗೊತ್ತಾಗಿದೆ.ಇಂದು ಬೆಳಿಗ್ಗೆ ಸಂಜಯ್ ನಗರದಲ್ಲಿ ಮನೆ ಒಂದರಲ್ಲಿ ಕೆಎಎಸ್ ಅಧಿಕಾರಿ ಪತ್ನಿ ಹಾಗೂ ವೃತ್ತಿಯಲ್ಲಿ ವಕೀಲೆಯಾಗಿರುವಂತಹ ರೈತರ ಗೌಡ ಅವರು ಮನೆಯ ಬೆಡ್ ರೂಮಿನಲ್ಲಿ ಫ್ಯಾನಿಗೆ ನೇಣು ಬಿಗಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಅವರ ಶವವನ್ನು ರವಾನಿಸಲಾಗಿತ್ತು ಇದೀಗ ಪೊಲೀಸರು ಅವರ ಮನೆಯನ್ನು ಪರಿಶೀಲ ನಡೆಸಿದಾಗ ಈ ಒಂದು ಡೆತ್ ನೋಟ್ ಪ್ರತಿ ಪತ್ತೆಯಾಗಿದೆ.

ಕಾರ್ಕಳ:ಪ್ರಥಮ ಪಿಯುಸಿ ವಿದ್ಯಾರ್ಥಿ ಕೌಶಿಕ್ ಆತ್ಮಹತ್ಯೆ

Posted by Vidyamaana on 2023-07-19 10:21:59 |

Share: | | | | |


ಕಾರ್ಕಳ:ಪ್ರಥಮ ಪಿಯುಸಿ ವಿದ್ಯಾರ್ಥಿ ಕೌಶಿಕ್ ಆತ್ಮಹತ್ಯೆ

ಕಾರ್ಕಳ:ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.ಮಾಳ ಮುಳ್ಳೂರು ನಿವಾಸಿ ಕೌಶಿಕ್(17) ಮೃತ ದುರ್ದೈವಿ.


ಕೌಶಿಕ್ ಬಜಗೋಳಿಯಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಈತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಕೌಶಿಕ್ ತಂದೆ,ತಾಯಿ, ಇಬ್ಬರು ಸಹೋದರಿಯರು ಹಾಗೂ ಓರ್ವ ಸಹೋದರನನ್ನು ಅಗಲಿದ್ದಾನೆ

ಹಲವು ದಾಖಲೆ ವೈಶಿಷ್ಟ್ಯಗಳೊಂದಿಗೆ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಂಪನ್ನ

Posted by Vidyamaana on 2024-01-30 19:04:19 |

Share: | | | | |


ಹಲವು ದಾಖಲೆ  ವೈಶಿಷ್ಟ್ಯಗಳೊಂದಿಗೆ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಂಪನ್ನ

ಪುತ್ತೂರು: ಜ.೨೭ ರಂದು ಬೆಳಿಗ್ಗೆ ಆರಂಭಗೊಂಡಿದ್ದ ೩೧ನೇ ವರ್ಷದ ಪುತ್ತೂರಿನ ಐತಿಹಾಸಿಕ ಕೋಟಿ ಚೆನ್ನಯ ಜೋಡು ಕರೆ ಕಂಬಳ ಜ.೨೯ರಂದು ಬೆಳಗಿನ ಜಾವ ಸಂಪನ್ನಗೊಂಡಿದೆ. ಎರಡು ಹಗಲು ಎರಡು ರಾತ್ರಿ ಕಂಬಳ ನಡೆಯುವ ಮೂಲಕ ಇತಿಹಾಸ ನಿರ್ಮಿಸಿದೆ. ಒಟ್ಟು ೬ ವಿಭಾಗಗಳ ೧೮೭ ಜೊತೆ ಕೋಣಗಳು  ಭಾಗವಹಿಸಿದ್ದು ಜ.೨೯ರಂದು ಬೆಳಿಗ್ಗೆ ೫ ಗಂಟೆಯ ಸುಮಾರಿಗೆ ಅಂತಿಮ ಸ್ಪರ್ಧೆಯು ನಡೆಯಿತು. ಬಳಿಕ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವರ್ಷಂಪ್ರತಿಯಂತೆ ಈ ಬಾರಿಯೂ ೩೧ನೇ ವರ್ಷದ ಕೋಟಿ ಚೆನ್ನಯ ಜೋಡು ಕರೆ ಕಂಬಳವು ಬಹಳ ಅದ್ದೂರಿಯಾಗಿ ವಿಜ್ರಂಭಣೆಯಿಂದ ನಡೆದು ಹೊಸ ಇತಿಹಾಸ ನಿರ್ಮಿಸಿದೆ. ಕಂಬಳವು ಯಶಸ್ವಿಯಾಗಿ ನೆರವೇರಲು ಹಲವಾರು ದಿನಗಳಿಂದ ಹಗಲು ರಾತ್ರಿ ದುಡಿದ ಕಂಬಳ ಸಮಿತಿಯ ವಿವಿಧ ಪದಾಧಿಕಾರಿಗಳಿಗೆ, ಸದಸ್ಯರಿಗೆ ಎಲ್ಲಾ ಸ್ವಯಂಸೇವಕರಿಗೆ ಕಂಬಳ ಅಭಿಮಾನಿಗಳಿಗೆ ಹಾಗೂ ಇದಕ್ಕಾಗಿ ತನು, ಮನ ,ಧನಗಳಿಂದ ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿ ಮುಂದೆಯೂ ಕಂಬಳವು ಇದೇ ರೀತಿಯಾಗಿ ಯಶಸ್ವಿಯಾಗಿ ಮುಂದುವರಿಯಲು ತಮ್ಮೆಲ್ಲರ ಸಹಕಾರ ಅಗತ್ಯ ಎಂದರು.

ಇದಕ್ಕೂ ಮೊದಲು ನಡೆದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಮಲ್ಲಿಕಾ ಪಕ್ಕಳ ,ಚನಿಲ ತಿಮ್ಮಪ್ಪ ಶೆಟ್ಟಿ ,ರಾಧಾಕೃಷ್ಣ ಆಳ್ವ, ಲಕ್ಷ್ಮೀನಾರಾಯಣ ಶೆಟ್ಟಿ, ಆರಿಯಡ್ಕ ಜೈರಾಜ್ ಭಂಡಾರಿ, ಸಿದ್ದನಾಥ ಎಸ್.ಕೆ. ಮೂಕಾಂಬಿಕ ಗ್ಯಾಸ್ ಏಜೆನ್ಸಿನ ಮಾಲಕ ಸಂಜೀವ ಆಳ್ವ, ಪ್ರಶಾಂತ್ ಶೆಣೈ, ನಗರಸಭಾ ಸದಸ್ಯರಾದ ರಮೇಶ್ ರೈ ನೆಲ್ಲಿಕಟ್ಟೆ , ಮುಹಮ್ಮದ್ ರಿಯಾಜ್, ಯೂಸುಫ್ ಡ್ರೀಮ್, ಶೈಲಾ ಪೈ, ಬಾಲಚಂದ್ರ, ಕೋಡಿಂಬಾಡಿ  ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಪೂಜಾರಿ ಸೂರ್ಯನಾಥ ಆಳ್ವ, ದಯಾನಂದ ರೈ ಕೋರ್ಮಂಡ, ಸಂತೋಷ್ ಕುಮಾರ್ ರೈ ಕೈಕಾರ, ಬೆಳ್ಳಿಪ್ಪಾಡಿ ಕೈಪ ಕೇಶವ ಭಂಡಾರಿ, ಬಿ ಕೆ  ಶಿವಕುಮಾರ್, ನಗರಸಭಾ ನಿಕಟಪೂರ್ವಾಧ್ಯಕ್ಷ ಜೀವಂಧರ್ ಜೈನ್, ಅರಿಯಡ್ಕ ಚಿಕ್ಕಪ್ಪ ನಾಕ್, ಡಾ. ದೀಪಕ್ ರೈ, ಕೇಶವ ಯಂ, ನರಸಿಂಹ ಕಾಮತ್, ಕಿಶೋರ್ ಕುಮಾರ್  ಬೊಟ್ಯಾಡಿ, ಬವಿನ್ ಸವಜಾನಿ, ಶರತ್ ಕುಮಾರ್ ರೈ, ಬೆಟ್ಟ ಈಶ್ವರ ಭಟ್, ಭಾಸ್ಕರ ಗೌಡ ಕೋಡಿಂಬಾಳ, ಅರಿಯಡ್ಕ ಉದಯ ಶಂಕರ ಶೆಟ್ಟಿ,ಸಂತೋಷ್ ಶೆಟ್ಟಿ ಪ್ರಸಾದ್ ಪಾಣಾಜೆ, ದಯಾನಂದ ರೈ ಮನವಳಿಕೆ, ಬೂಡಿಯಾರ್ ಪುರುಷೋತ್ತಮ ರೈ ,ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಜಿಲ್ಲಾ ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷ  ರಂಜಿತ್ ಬಂಗೇರ, ಪ್ರವೀಣ್ ಶೆಟ್ಟ ತಿಂಗಳಾಡಿ, ರೂಪ ರೇಖಾ ಆಳ್ವ, ಎಂ ಕುಶಲ ಪೆರಾಜೆ ,ಪ್ರವೀಣ್ ಕುಮಾರ್,  ನಿಹಾಲ್ ಪಿ. ಶೆಟ್ಟಿ, ಶಿವಪ್ರಸಾದ್ ಶೆಟ್ಟಿ ,ಜಗನ್ನಾಥ ರೈ ಜಿ, ಉಮಾನಾಥ್ ಶೆಟ್ಟಿ ಪೆರ್ನೆ,ತಿಂಗಳಾಡಿ ಬಾಲಯ ಲೋಹಿತ್ ಬಂಗೇರ,ದಯಾನಂದ ರೈ, ರಾಮನಾಥ್ ವಿಟ್ಲ ,ರೂಪೇಶ್ ರೈ ಆಲಿಮಾರ ,ದಿನಕರ ರೈ, ಸುಧೀರ್ ಶೆಟ್ಟಿ, ಗಂಗಾಧರ ಶೆಟ್ಟಿ ಕೈಕಾರ, ರಾಮಣ್ಣ ಪೂಜಾರಿ, ಅಬ್ದುಲ್ ರಜಾಕ್ ಬಿ ಎಚ್, ಹರಿಪ್ರಸಾದ್ ರೈ, ಬಾಲಕೃಷ್ಣ ಆಳ್ವ ಕೊಡಾಜೆ ,ಸತೀಶ್ ರೈ ಕಟಾವು ಶಿವರಾಮ ಭಟ್ ಬಿಕರ್ನ ಕಟ್ಟೆ,  ಆಕಾಶ್ ಐತಾಳ್, ಕೃಷ್ಣ ಪ್ರಸಾದ್ ಭಂಡಾರಿ, ರವಿ ಪ್ರೊವಿಜನ್ ಸ್ಟೋರ್ , ನವೀನ್ ಶೆಟ್ಟಿ, ಶಾಪಿ ಸುಳ್ಯ, ಮೋಹನ್ ನಾಯಕ್, ಚಂದ್ರಹಾಸ ಶೆಟ್ಟಿ, ಶೀನಪ್ಪ ಪೂಜಾರಿ ಎಂ .ಜಿ. ಅಬೂಬಕ್ಕರ್ ಉಪ್ಪಿನಂಗಡಿ, ಉಮೇಶ ನಾಯಕ್, ಗಿರಿಧರ ಹೆಗ್ಡೆ, ಹರ್ಷಕುಮಾರ್ ರೈ ಮಾಡಾವು, ಕೃಷ್ಣಪ್ಪ ಸಂಪ್ಯ, ಕೃಷ್ಣಲ್ ಸ್ಟೀಲ್ ಇಂಡಸ್ಟ್ರೀಸ್‌ನ ಮಾಲಕ ಕಿರಣ್ ಡಿಸೋಜಾ, ನಿರೀಕ್ಷಿತ್  ರೈ, ಮಂಜುನಾಥ ಗೌಡ, ಯೂಸುಫ್ ಗೌಸಿಯ, ಹಾಜಿ ಯೂಸುಫ್ ಕೈಕಾರ ನ್ಯಾಯವಾದಿ ರಾಕೇಶ್  ಮಸ್ಕರೇನಸ್, ಎಂ ಪಿ ಉಮ್ಮರ್ ,ಶರೂನ್  ಸಿಕ್ವೇರಾ, ಲೋಕೇಶ್ ಪಡ್ಡಾಯೂರು, ಹರೀಶ್  ವಾಲ್ತಾಜೆ ,ಆಯ್ಕೆ ಸಪ್ಲಾಯಿಸ್ ಮಾಲಕ ಇಮ್ರಾನ್ ಖಾನ್ ಮೊದಲಾದವರು ಅತಿಥಿಗಳಾಗಿ ಆಗಮಿಸಿದ್ದರು.

ಕಂಬಳದ ಸಮಾರೋಪ ಸಮಾರಂಭದ ಆರಂಭದಲ್ಲಿ ತೀರ್ಪುಗಾರರಿಗೆ ಆರೋಗ್ಯ ಇಲಾಖೆಯವರಿಗೆ, ಶಾಮಿಯಾನ ಬ್ಯಾಂಡ್ ಸಹಿತ ವಿವಿಧ ರೀತಿಯಲ್ಲಿ ಸಹಕರಿಸಿದವರನ್ನು ಗೌರವಿಸಲಾಯಿತು. ವಿಜಯಕುಮಾರ್ ಜೈನ್ ಕಂಚಿನ ಮನೆ ,ಅಪ್ಪು ಯಾನೆ ವಲೇರಿಯನ್ ಡೇಸಾ, ಅಲ್ಲಿಪಾದೆ , ರಾಜೀವ ಶೆಟ್ಟಿ ಹೆಡ್ತೂರು , ಸುದರ್ಶನ್ ನಾಯಕ್ ಕಂಪ, ರಾಜೇಶ್ ನಾಯಕ್ ನೆಲ್ಲಿಕಟ್ಟೆ, ನವೀನ್ ನಾಯಕ್ ಬೆದ್ರಾಳ, ಸದಾಶಿವ ಸಾಮಾನಿ ಸಂಪಿಗೆದಡಿ, ಸಚಿನ್ ಸರೋಳಿ, ಗೋಪಾಲ ಶೆಟ್ಟಿ, ಸುಮಿತ್ ಶೆಟ್ಟಿ, ಸುಜಿತ್ ಶೆಟ್ಟಿ, ರತ್ನಾಕರ ನಾಯಕ್, ಗಂಗಾಧರ, ಆಲಿಕುಂಞ, ಪ್ರವೀಣ್ ಸಚಿನ್ ಸರೋಳಿ ಉಮಾಶಂಕರ್ ನಾಯಕ್ ಪಾಂಗಳಾಯಿ ಮೊದಲಾದವರನ್ನು ಸನ್ಮಾನಿಸಲಾಯಿತು

 ಸಮಿತಿಯ ವಿವಿಧ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ .ಖಜಾಂಜಿ ಪಂಜಿಗುಡ್ಡೆ ಈಶ್ವರ ಭಟ್, ಸಂಚಾಲಕ ವಸಂತಕುಮಾರ್  ರೈ ದುಗ್ಗಲ, ಉಪಾಧ್ಯಕ್ಷರಾದ ಶಿವರಾಮ ಆಳ್ವ ಬಳ್ಳಮಜಲು, ಜಿನ್ನಪ್ಪ ಪೂಜಾರಿ ಮುರ, ರೋಶನ್ ರೈ ಬನ್ನೂರು, ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಗೋಪಾಲ ಕಡಂಬು ಮೂಡಬಿದ್ರೆ, ಹಸೈನಾರ್ ಬನಾರಿ, ಖಾದರ್ ಪೊಳ್ಯ ,ಪ್ರಕಾಶ ನೆಕ್ಕಿಲಾಡಿ , ಶಶಿಕಿರಣ್ ರೈ ನೂಜಿ ಬೈಲು ಪೂರ್ಣೇಶ್ ಭಂಡಾರಿ, ಶಶಿ ನೆಲ್ಲಿಕಟ್ಟೆ, ಸುರೇಶ್ ಚಿಕ್ಕ ಪುತ್ತೂರು, ಮೊದಲಾದವರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು. ಸಂಚಾಲಕ ವಸಂತಕುಮಾರ್ ರೈ ದುಗ್ಗಳ ಸಹಕರಿಸಿದರು.


 ಕನಹಲಗೆ: ೦೬ ಜೊತೆ  ಅಡ್ಡಹಲಗೆ: ೦೪ ಜೊತೆ

 ಹಗ್ಗ ಹಿರಿಯ: ೧೫ ಜೊತೆ  ನೇಗಿಲು ಹಿರಿಯ: ೪೦ ಜೊತೆ

 ಹಗ್ಗ ಕಿರಿಯ: ೨೫ ಜೊತೆ  ನೇಗಿಲು ಕಿರಿಯ: ೯೭ ಜೊತೆ

ಒಟ್ಟು ಕೋಣಗಳ ಸಂಖ್ಯೆ: ೧೮೭ ಜೊತೆ

ಕನಹಲಗೆ:( ೬.೫ ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )

ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮೆಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ಅಡ್ಡ ಹಲಗೆ: ಪ್ರಥಮ: ನಾರಾವಿ ಯುವರಾಜ್ ಜೈನ್

ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮೆಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ ಎ

ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ದ್ವಿತೀಯ: ನೂಜಿಪ್ಪಾಡಿ ಡಾ.ಪ್ರವೀಣ್ ಹೊಳ್ಳ ಬಿ

ಓಡಿಸಿದವರು: ಬಾರಾಡಿ ಸತೀಶ್

ಹಗ್ಗ ಕಿರಿಯ:

ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗಿಶ್ ಪೂಜಾರಿ ಬಿ

ಓಡಿಸಿದವರು: ಭಟ್ಕಳ ಶಂಕರ್

ದ್ವಿತೀಯ: ನೂಜಿಪ್ಪಾಡಿ ಚಂದ್ರಶೇಖರ ಹೊಳ್ಳ ಬಿ

ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ನೇಗಿಲು ಹಿರಿಯ:

ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ ಎ

ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ

ಓಡಿಸಿದವರು: ಮಾಳ ಆಧೀಶ್ ಪೂಜಾರಿ

ನೇಗಿಲು ಕಿರಿಯ: ( ಸಮಾನ ಬಹುಮಾನ )

ಮುನಿಯಾಲ್ ಉದಯ ಕುಮಾರ್ ಶೆಟ್ಟಿ

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ಉಡುಪಿ ಬ್ರಹ್ಮಗಿರಿ ಪ್ರಥಮ ಗಣನಾಥ ಹೆಗ್ಡೆ ಬಿ

ಓಡಿಸಿದವರು: ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ

ಮಾಜಿ ಸಿಎಂ ಯಡಿಯೂರಪ್ಪ ಕಾಲಿಗೆ ಗಾಯ

Posted by Vidyamaana on 2023-10-15 22:13:34 |

Share: | | | | |


ಮಾಜಿ ಸಿಎಂ ಯಡಿಯೂರಪ್ಪ ಕಾಲಿಗೆ ಗಾಯ

ರಾಯಚೂರು (ಅ.15): ರಾಜ್ಯದ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರದಿಂದ ರಾಯಚೂರು ನಗರಕ್ಕೆ ಹೆಲಿಕಾಪ್ಟರ್‌ನಲ್ಲಿ ಹೋಗುವಾಗ ಕಾಲು ಉಳುಕಿದೆ. ಹೆಲಿಕಾಪ್ಟರ್‌ ಹತ್ತುವಾಗ ಕಾಲು ಉಳುಕಿದ್ದು, ನಂತರ ಹೆಲಿಕಾಪ್ಟರ್‌ ಇಳಿಯಲಾಗದೇ ಪರದಾಡಿದ ಪ್ರಸಂಗ ನಡೆದಿದೆ.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಯಸ್ಸಾಗಿರುವ ಹಿನ್ನೆಲೆಯಲ್ಲಿ ಹೆಚ್ಚಾಗಿ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ದೂರದ ಪ್ರಯಾಣವನ್ನೂ ಮಾಡುವುದಿಲ್ಲ. ವಯೋಸಹಜವಾಗಿ ಸ್ನಾಯು ಹಾಗೂ ಕೀಲು- ಮೂಳೆಗಳಲ್ಲಿ ಶಕ್ತಿ ಕುಂದಿದ್ದು ಮೊದಲಿನಂತೆ ಸಕ್ರಿಯವಾಗಿ ರಾಜಕೀಯದಲ್ಲಿ ಭಾಗವಹಿಸುತ್ತಿಲ್ಲ. ಆದರೆ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಲವೆಡೆ ರಾಜ್ಯ ಸಂಚಾರ ಮಾಡಿ ಪಕ್ಷದ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.ಅದೇ ರೀತಿ ಇಂದು ಮಧ್ಯಾಹ್ನ ಭದ್ರತಾ ಸಿಬ್ಬಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರದಿಂದ ಹೆಲಿಕಾಪ್ಟರ್‌ನಲ್ಲಿ ರಾಯಚೂರು ಜಿಲ್ಲೆಯ ಲಿಂಗಸಗೂರಿಗೆ ತೆರಳುವಾಗ ಘಟನೆ ನಡೆದಿದೆ. ಶಿಕಾರಿಪುರದಲ್ಲಿ ಹೆಲಿಕಾಪ್ಟರ್‌ ಹತ್ತುವಾಗ ಯಡಿಯೂರಪ್ಪ ಅವರ ಕಾಲು ಉಳುಕಿದೆ. ಇದಾದ ನಂತರ ಹೆಲಿಕಾಪ್ಟರ್‌ನಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ವಿಶ್ರಾಂತಿ ಪಡೆದಿದ್ದಾರೆ. ನಂತರ ಲಿಂಗಸಗೂರಿನಲ್ಲಿ ಇಳಿಯುವಾಗ ಕಾಲಿಗೆ ಪೆಟ್ಟು ಆಗಿದೆ ಎಂದು ತಿಳಿಸಿದ್ದಾರೆ. ಆಗ ಸಹಾಯಕರೊಂದಿಗೆ ಇಳಿಯಲು ಪ್ರಯತ್ನಿಸಿದರೂ ತೀವ್ರ ನೋವಿನಿಂದ ಕಾಲೂರಲೂ ಸಾಧ್ಯವಾಗದೇ ಪರದಾಡಿದ್ದಾರೆ.

ಪುತ್ತೂರು ನಗರ ಠಾಣಾ ಪೊಲೀಸರ ಭರ್ಜರಿ ಬೇಟೆ

Posted by Vidyamaana on 2024-03-23 19:42:29 |

Share: | | | | |


ಪುತ್ತೂರು ನಗರ ಠಾಣಾ ಪೊಲೀಸರ ಭರ್ಜರಿ ಬೇಟೆ

ಪುತ್ತೂರು :ನಗರ ಠಾಣಾ ಪೊಲೀಸರು ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳಿಯನ್ನು ಬಂಧಿಸಿದ್ದು, ಅಕೆಯಿಂದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ.


ಪೆ. 12ರಂದು ಪುತ್ತೂರು ನಗರದ KSRTC ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಈ ಪ್ರಕರಣವನ್ನು ಪುತ್ತೂರು ನಗರ ಠಾಣಾ ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸಿದ್ದು, ಪ್ರಕರಣದ ಆರೋಪಿ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿ ಈಸ್ಟರಿ (45) ಎಂಬಾಕೆಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಆಕೆಯ ಬಳಿಯಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ.


ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕ ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ ಜೆ, ರವರ ಸಾರಥ್ಯದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ನಂದಕುಮಾರ್ ಎಮ್ ಎಮ್ ಹಾಗೂ ಸುಬ್ರಹ್ಮಣ್ಯ ಹೆಚ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಸ್ಕರಿಯ ಎಮ್ ಎ. ಹೆಚ್ ಸಿ ಕೆ ಬಸವರಾಜ, ಹೆಚ್ ಸಿ ಜಗದೀಶ್, ಹೆಚ್ ಸಿ ಸುಬ್ರಹ್ಮಣ್ಯ, ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಮಪಿಸಿ ರೇವತಿ ಹಾಗೂ ದ.ಕ ಜಿಲ್ಲಾ ಗಣಕ ಯಂತ್ರ ವಿಭಾಗದ ಎಹೆಚ್ ಸಿ ಸಂಪತ್ ಮತ್ತು ಸಿಪಿಸಿ ದಿವಾಕರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಜೂ 12 ರಂದು ನಡೆಯಬೇಕಿದ್ದ ಪುತ್ತೂರು-ವಿಟ್ಲ ಪಾದಯಾತ್ರೆ ಮುಂದೂಡಿಕೆ-ಅರುಣ್ ಕುಮಾರ್

Posted by Vidyamaana on 2023-06-11 08:11:41 |

Share: | | | | |


ಜೂ 12 ರಂದು ನಡೆಯಬೇಕಿದ್ದ ಪುತ್ತೂರು-ವಿಟ್ಲ ಪಾದಯಾತ್ರೆ ಮುಂದೂಡಿಕೆ-ಅರುಣ್ ಕುಮಾರ್

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದವರೆಗೆ ಜೂ12 ರಂದು ನಡೆಯಬೇಕಿದ್ದ ಪಾದಯಾತ್ರೆಯನ್ನು ಕಾರಣಾಂತರಗಳಿಂದ ಮುಂದೂಡಿರುವುದಾಗಿ ಪುತ್ತಿಲ ಪರಿವಾರದ ನಾಯಕ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಪಾದಯಾತ್ರೆಯ ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ.



Leave a Comment: