ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ತೇಜಸ್ವಿ ಕಥೆಯ ಡೇರ್ ಡೆವಿಲ್ ಮುಸ್ತಫಾ ಸಿನಿಮಾಗೆ ತೆರಿಗೆ ವಿನಾಯತಿ ಘೋಷಿಸಿದ ಸಿದ್ದರಾಮಯ್ಯ

Posted by Vidyamaana on 2023-06-15 06:32:50 |

Share: | | | | |


ತೇಜಸ್ವಿ ಕಥೆಯ ಡೇರ್ ಡೆವಿಲ್ ಮುಸ್ತಫಾ ಸಿನಿಮಾಗೆ ತೆರಿಗೆ ವಿನಾಯತಿ ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು: ಪ್ರಸಿದ್ಧ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಥೆ ಆಧಾರಿತ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯತಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.ಪೂರ್ಣಚಂದ್ರ ತೇಜಸ್ವಿ ಅವರ ಕಥೆಯೊಂದನ್ನು ಆಯ್ದು ನಿರ್ದೇಶಕ ಶಶಾಂಕ್ ಸೋಗಲ್ ಅವರು ‘ಡೇರ್ ಡೆವಿಲ್ ಮುಸ್ತಫಾ’ ಚಿತ್ರವನ್ನು ಮಾಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ  ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾವು ನೋಡುಗರ ವಲಯದಲ್ಲಿ ಮೆಚ್ಚುಗೆ ಗಳಿಸಿದೆ.ಚಿತ್ರದ ತಂಡವು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ತೆರಿಗೆ ವಿನಾಯತಿಗೆ ಮನವಿ ಮಾಡಿತ್ತು. ಕೋಮುಸಾಮರಸ್ಯ ಮತ್ತು ಭಾವೈಕ್ಯತೆಯ ಸಂದೇಶ ಸಾರುವ ಸಿನಿಮಾವನ್ನು ಇನ್ನಷ್ಟು ಜನರು ಮತ್ತು ಶಾಲಾ ಮಕ್ಕಳು ನೋಡಲು ಸಹಕಾರಿಯಾಗುವಂತೆ ಮಾಡಲು ತೆರಿಗೆ ವಿನಾಯತಿ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಹಮತ ಸೂಚಿಸಿದ್ದಾರೆಚಿತ್ರದಲ್ಲಿ ಆಶಿತ್, ಪೂರ್ಣಚಂದ್ರ ತೇಜಸ್ವಿ, ಆದಿತ್ಯ ಅಶ್ರಿ ಮುಂತಾದ ನಟರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು.

ಲಿಟ್ಲ್ ಫ್ಲವರ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ಗೆ ಆಯ್ಕೆ

Posted by Vidyamaana on 2024-03-14 13:35:59 |

Share: | | | | |


ಲಿಟ್ಲ್ ಫ್ಲವರ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ಗೆ ಆಯ್ಕೆ

ಪುತ್ತೂರು: ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಲ್ಲಿ ಹುದುಗಿರುವ ವಿಜ್ಞಾನ ಪ್ರತಿಭೆ ಹೊರ ತರುವ ಉದ್ದೇಶದಿಂದ ಕೇಂದ್ರ ಸರಕಾರ ಆರಂಭಿಸಿರುವ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಯಕ್ರಮದಡಿ 7 ನೇ ತರಗತಿಯ ಭಾರವಿ ಕೆ ಭಟ್ (ಡಾ. ರವಿಪ್ರಕಾಶ್ ಮತ್ತು ಡಾ ವಿಜಯ ಸರಸ್ವತಿ ದಂಪತಿಗಳ ಸುಪುತ್ರ ) ರವರು "ಹೈ ವೋಲ್ಟೇಜ್ ಡಿಟೆಕ್ಟರ್" ಎನ್ನುವ ಪರಿಕಲ್ಪನೆಯನ್ನು ಮಂಡಿಸಿ ಹಾಗೂ 7ನೇ ತರಗತಿಯ ಗಗನ್ ( ಚಂದ್ರಶೇಖರ ಬೆದ್ರಾಳ ಹಾಗೂ ಜಯಲಕ್ಷ್ಮಿ ದಂಪತಿಗಳ ಸುಪುತ್ರ) ರವರು "ನೂಡಲ್ಸ್ ಮೇಕಿಂಗ್ ಮಷೀನ್ "ಎನ್ನುವ ಪರಿಕಲ್ಪನೆಯ ಸಲ್ಲಿಸಿ ಇನ್‌ಸ್ಪೈರ್‌ ಅವಾರ್ಡಿಗೆ ಆಯ್ಕೆಯಾಗಿದ್ದಾರೆ. ಎಂದು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನ್ ನ್ಯಾಚುರಲ್ ಸೆಕ್ಸ್ ಗೆ ಫೋರ್ಸ್ ಮಾಡಿದ ಪತಿಯ ಮ್ಯಾಟರ್ ಮೇಲೆ ದಾಳಿ ಮಾಡಿದ ಪತ್ನಿ

Posted by Vidyamaana on 2024-01-29 21:24:41 |

Share: | | | | |


ಅನ್ ನ್ಯಾಚುರಲ್ ಸೆಕ್ಸ್ ಗೆ ಫೋರ್ಸ್ ಮಾಡಿದ ಪತಿಯ ಮ್ಯಾಟರ್ ಮೇಲೆ ದಾಳಿ ಮಾಡಿದ ಪತ್ನಿ

ಲಕ್ನೋ: ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ ಪಡಿಸಿದ್ದಕ್ಕೆ ಸಿಟ್ಟಿನಲ್ಲಿ ಪತ್ನಿಯೇ ಪತಿಯ ಶಿಶ್ನವನ್ನು ಕಚ್ಚಿ ಗಾಯಗೊಳಿಸಿದ ಘಟನೆ ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆದಿದೆ.‌


ತೀವ್ರ ಗಾಯಗೊಂಡಿದ್ದ ರಾಮು ನಿಶಾದ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜ.28ರಂದು ಘಟನೆ ನಡೆದಿದ್ದು ರಾಮು ನಿಶಾದ್ ತನ್ನ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದ. ಇದಕ್ಕೆ ಪತ್ನಿ ಒಪ್ಪದೇ ಇದ್ದು ಇಬ್ಬರ ನಡುವೆ ಜಗಳ ಆಗಿತ್ತು. ಸಿಟ್ಟಿನಲ್ಲಿದ್ದ ಪತ್ನಿ ಪತಿಯ ಖಾಸಗಿ ಅಂಗವನ್ನು ಹಲ್ಲಿನಿಂದ ಕಚ್ಚಿದ್ದಾಳೆ. ಆಸ್ಪತ್ರೆಗೆ ದಾಖಲಾಗಿದ್ದಾರೆ. 


ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಪತಿ ಬೇಡಿಕೆ ಇಟ್ಟಿದ್ದಕ್ಕೆ ಬೇಸರಗೊಂಡು ಹೀಗೆ ಮಾಡಿರುವುದಾಗಿ ಪತ್ನಿ ಪೊಲೀಸರಿಗೆ ತಿಳಿಸಿದ್ದಾಳೆ. ಮಹಿಳೆ ವಿರುದ್ಧ ಸೆಕ್ಷನ್ 326 ರ ಅಡಿಯಲ್ಲಿ ಉದ್ದೇಶಪೂರ್ವಕ ತೀವ್ರ ಗಾಯವನ್ನು ಉಂಟುಮಾಡಿದ ಮತ್ತು ಸೆಕ್ಷನ್ 506 ರ ಅಡಿಯಲ್ಲಿ ಜೀವಕ್ಕೆ ಅಪಾಯ ಉಂಟು ಮಾಡಬಲ್ಲ ರೀತಿ ವರ್ತಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.

ಪಕ್ಷಕ್ಕಿಂತ ದೊಡ್ಡ ಮಿತ್ರನಿಲ್ಲ- ಪಕ್ಷ ಬಿಟ್ಟು ಹೋದವರು ಮಿತ್ರನೂ ಅಲ್ಲ- ಪಾಲುದಾರನೂ ಅಲ್ಲ

Posted by Vidyamaana on 2023-05-02 10:12:45 |

Share: | | | | |


ಪಕ್ಷಕ್ಕಿಂತ ದೊಡ್ಡ ಮಿತ್ರನಿಲ್ಲ- ಪಕ್ಷ ಬಿಟ್ಟು ಹೋದವರು ಮಿತ್ರನೂ ಅಲ್ಲ- ಪಾಲುದಾರನೂ ಅಲ್ಲ

ಪುತ್ತೂರು: ಪಕ್ಷಕ್ಕೆ ತನಗೆ ಎಲ್ಲಾ ಹುದ್ದೆಗಳನ್ನು ನೀಡಿದೆ. ಪಕ್ಷಕ್ಕೆ ತಾನು ಬದ್ಧನಾಗಿರದೇ ಇದ್ದರೆ, ತಾನು ಪ್ರಾಣಿಯಂತೆ. ಆದ್ದರಿಂದ ಪಕ್ಷದಿಂದ ಹೊರಹೋದವರು ತನ್ನ ಮಿತ್ರನೂ ಅಲ್ಲ, ಪಾಲದಾರನೂ ಅಲ್ಲ ಎಂದು ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಪುತ್ತೂರಿನ ಬಿಜೆಪಿ‌‌ ಚುನಾವಣಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಸಂದರ್ಭ, ನಿಮ್ಮ ಆಪ್ತಮಿತ್ರ ಅಶೋಕ್ ರೈ ಅವರು ಕಾಂಗ್ರೆಸಿಗೆ ಸೇರಿದ್ದಾರೆ ಎಂದಾಗ, ತಾನು ಆಪ್ತಮಿತ್ರನಲ್ಲ. ಆಪ್ತಮಿತ್ರ ವಿಷ್ಣುವರ್ಧನ್ ಎಂದಾಗ ಎಲ್ಲರೂ ನಗೆಗಡಲಲ್ಲಿ ತೆಲಿದರು.

ನಾನು ಈಗ್ಲೂ ಹೇಳ್ತೇನೆ, ಬಿಜೆಪಿಯಲ್ಲಿ ಇರುವವರಿಗೆ ನಾನು ಆಪ್ತ ಮಿತ್ರ, ಪಕ್ಷದವರಿಗೆ ನಾನು ಪಾಲುದಾರ. ಪಕ್ಷ ಬಿಟ್ಟು ಹೋದವರಿಗೆ ನಾನು ಆಪ್ತ ಮಿತ್ರನೂ ಅಲ್ಲ, ಪಾಲುದಾರನೂ ಅಲ್ಲ. ಅಶೋಕ್ ರೈಗೆ ನಾನು ಸಹಕಾರ ಮಾಡಿದ್ದೇನೆ ಎನ್ನುವುದನ್ನು ರುಜುವಾತು ಪಡಿಸಿದರೆ, ನೀವು ಹೇಳಿದಂತೆ ನಾನು ಕೇಳ್ತೆನೆ ಎಂದು ಡಿ.ವಿ ಸದಾನಂದ ಗೌಡ ಸವಾಲು ಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಸಂಜೀವ ಮಠಂದೂರು, ಅಭ್ಯರ್ಥಿ ಆಶಾ ತಿಮ್ಮಪ್ಪ, ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಿ‌.ಜಿ. ಜಗನ್ನಿವಾಸ್ ರಾವ್, ಗೋಪಾಲಕೃಷ್ಣ ಹೇರಳೆ ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ಅಂಡರ್ ಪಾಸ್ ವೇಶ್ಯಾವಾಟಿಕೆಯ ಅಡ್ಡೆ

Posted by Vidyamaana on 2023-11-02 16:40:48 |

Share: | | | | |


ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ಅಂಡರ್ ಪಾಸ್ ವೇಶ್ಯಾವಾಟಿಕೆಯ ಅಡ್ಡೆ

ಬೆಂಗಳೂರು: ಬೆಂಗಳೂರಿನ ಹೃದಯಭಾಗ ಹಾಗೂ ಅತ್ಯಂತ ಜನನಿಬಿಡ ಪ್ರದೇಶವಾದ ಮೆಜೆಸ್ಟಿಕ್‌ನ ಅಂಡರ್‌ಪಾಸ್‌ನಲ್ಲಿ ನಡೆಯುವ ವೇಶ್ಯಾವಾಟಿಕೆ ದಂಧೆಯ ಕುರಿತು ಯೂಟ್ಯೂಬರ್‌ ವಿಕಾಸ್‌ಗೌಡ ವಿಡಿಯೋ ಮಾಡಿದ್ದಾನೆ.

ವಿಡಿಯೋ ಮಾಡುವಾಗ ಸಿಕ್ಕಿಬಿದ್ದ ಆತನ ಪಾಡು ನಿವೇ ನೋಡಿ...ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ವೇಶ್ಯಾವಾಟಿಕೆ (Bengaluru Majestic Underpass) ನಡೆಯತ್ತದೆ ಎಂದು ಹಲವು ಪ್ರಯಾಣಿಕರು ಹೇಳುತ್ತಾರೆ. ಇನ್ನು ಹಳ್ಳಿಗಳಿಂದ ಬಂದು ಬೆಂಗಳೂರಿನ ಮೆಜೆಸ್ಟಿಕ್‌ ಅಂಡರ್‌ಪಾಸ್‌ ಹಾದುಹೋದ ಎಲ್ಲರ ಬಾಯಲ್ಲಿಯೂ ಇದೇ ಸುದ್ದು ಹರಿದಾಡುತ್ತದೆ.

ಕ್ಲಿಕ್ ಮಾಡಿ 👇

ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ವೇಶ್ಯಾವಾಟಿಕೆ ದಂಧೆ ದೃಶ್ಯ


ಇನ್ನು ಬೆಂಗಳೂರಿಗರು ಇದನ್ನು ನೋಡಿಯೂ ನೋಡದಂತೆ ದಿನನಿತ್ಯ ಓಡಾಡುತ್ತಿದ್ದಾರೆ. ಇದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ವರದಿ ಮಾಡಿದಾಗ ಪೊಲೀಸರು ಒಂದು ವಾರ ಸಿಬ್ಬಂದಿ ನಿಯೋಜನೆ ಮಾಡಿ ಕ್ರಮ ಕೈಗೊಳ್ಳುತ್ತಾರೆ. ನಂತರ ಅದೇ ಹಾಡು.. ಅದೇ ರಾಗ ಎನ್ನುವಂತೆ ಲೈಂಗಿಕ ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಪುರುಷರನ್ನು ಅಡ್ಡಹಾಕಿ ವೇಶ್ಯಾವಾಟಿಕೆಗೆ ಪುಸಲಾಯಿಸುವ ಘಟನೆಗಳಿ ಕಂಡುಬರುತ್ತವೆ.


ಈಗ ವಿಕಾಸ್‌ಗೌಡ ಎನ್ನುವ ಯೂಟ್ಯೂಬರ್‌ ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ವಿಡಿಯೋ ಮಾಡಿದ್ದು, ಆತನಿಗೆ ದಂಧೆ ಮಾಡುವವರು ಕೊಟ್ಟ ಕಿರುಕುಳವನ್ನು ನಿವೇ ಕಣ್ಣಾರೆ ನೋಡಬಹುದು.ಪೊಲೀಸ್‌ ಇಲಾಖೆಯಿಂದ ರಾಜ್ಯಾದ್ಯಂತ ಎಲ್ಲೇ ವೇಶ್ಯಾವಾಟಿಕೆ ದಂಧೆ ನಡೆದರೂ ಅವರನ್ನು ಮುಲಾಜಿಲ್ಲದೇ ಬಂಧಿಸಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಇನ್ನು ಲೈಂಗಿಕ ಅಲ್ಪ ಸಂಖ್ಯಾತರು ಕೂಡ ದಂಧೆ ನಡೆಸದಂತೆ ಕಠಿಣ ಕ್ರಮ ಕೈಗೊಂಡಿದ್ದಾರೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನ ಹೃದಯಭಾಗ ಮೆಜೆಸ್ಟಿಕ್‌ನ ಅಂಡರ್‌ಪಾಸ್‌ನಲ್ಲಿ (ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಅಂಡರ್‌ಪಾಸ್‌) ವೇಶ್ಯಾವಾಟಿಕೆ ದಂಧೆ ಮಾಡಲಾಗುತ್ತಿದೆ ಎಂದರೆ ನಾಚಿಕೆಗೇಡಿನ ವಿಚಾರವಾಗಿದೆ.ವಿಡಿಯೋ ಮಾಡುತ್ತಿದ್ದವನನ್ನು ತಡೆದು ಡಿಲೀಟ್‌ ಮಾಡಿಸಿದ್ರು: ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ಯೂಟ್ಯೂಬರ್‌ ವಿಕಾಸ್‌ಗೌಡ ಸೆಲ್ಫಿ ವಿಡಿಯೋ ಮಾಡುತ್ತಾ ನಡೆದುಕೊಂಡು ಹೋಗುತ್ತಾನೆ. ಆಗ ಪಕ್ಕದಲ್ಲಿಯೇ ಮಹಿಳೆಯೊಬ್ಬರು ವ್ಯಕ್ತಿಯನ್ನು ನಿಲ್ಲಿಸಿಕೊಂಡು ವ್ಯವಹಾರ ಕುದುರಿಸುತ್ತಿರುವ ವಿಡಿಯೋ ಕೂಡ ಸೆರೆಯಾಗಿದೆ. ಜೊತೆಗೆ, ಮುಂದಕ್ಕೆ ಹೋಗುತ್ತಿದ್ದಂತೆ ಐದಾರು ಜನರು ಸೇರಿಕೊಂಡು ಯ್ಯೂಟೂಬರ್‌ನನ್ನು ಪ್ರಶ್ನೆ ಮಾಡಿ ವಿಡಿಯೋ ಮಾಡದಂತೆ ಹೇಳಿದ್ದಾರೆ. ನಂತರ, ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ ಎಲ್ಲ ವಿಡಿಯೋ ಡಿಲೀಟ್‌ ಮಾಡಿಸಿದ್ದಾರೆ. ನಂತರ, ಅವರ ಎಲ್ಲ ಮಾಹಿತಿಯನ್ನು ಪಡೆದುಕೊಂಡು ಅಲ್ಲಿಂದ ಕಳಿಸಿದ್ದಾರೆ. ಕೊನೆಗೆ ಒಬ್ಬ ಮಹಿಳೆ ಯ್ಯೂಟೂಬರ್‌ನನ್ನು ದಂಧೆಗೆ ಪುಸಲಾಯಿಸಿದ ಘಟನೆ ಕೂಡ ನಡೆದಿದೆ.


ಕಾಲೇಜು ಹುಡುಗರು, ಅಂಕಲ್‌ಗಳು ಯಾರೇ ವ್ಯಕ್ತಿಗಳು ಇದ್ದರೂ ಜನಸಾಮಾನ್ಯರನ್ನು ತಮ್ಮ ವೇಶ್ಯಾವಾಟಿಕೆಗೆ ಕರೆದು ಮುಜುಗರ ಉಂಟುಮಾಡುತ್ತಿದ್ದಾರೆ. ಇದಕ್ಕೆ ಪೊಲೀಸರು ಕ್ರಮ ಕೈಗೊಳ್ಳಬೇಕು. ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆದು ನಿಂತಿರುವ ಬೆಂಗಳೂರಿನ ಹೃದಯ ಭಾಗದಲ್ಲಿಯೇ ಇಂತಹ ಘಟನೆಗಳು ನಡೆಯುತತಿರುವುದರಿಂದ ಬೆಂಗಳೂರು ಸುರಕ್ಷಿತ ತಾಣವಲ್ಲ ಎಂಬ ಭಾವನೆಯೂ ಬರುತ್ತದೆ. ಆದ್ದರಿಂದ ಮೆಜೆಸ್ಟಿಕ್‌ ಅಂಡರ್‌ಪಾಸ್‌ನಲ್ಲಿ ಪ್ರಯಾಣಿಕರಿಗೆ ಸುರಕ್ಷೆ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಯ್ಯೂಟೂಬರ್‌ ಬ್ಲಾಗರ್‌ ಮನವಿ ಮಾಡಿಕೊಂಡಿದ್ದಾನೆ

ಶಾಸಕರ ಇಂದಿನ ಕಾರ್ಯಕ್ರಮ ಜು 25

Posted by Vidyamaana on 2023-07-24 23:14:15 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 25


ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 25 ರಂದು.

ಬೆಳಿಗ್ಗೆ 10 ಗಂಟೆಗೆ ರೈ ಎಜುಕೇಶನಲ್ ಟ್ರಸ್ಟ್ ನಲ್ಲಿ ಕೆಎಸ್ಆರ್ಟಿಸಿ ಚಾಲಕ ತರಬೇತಿ ಹುದ್ದೆ ಕಾರ್ಯಾಗಾರ


11 ಗಂಟೆಗೆ ಸಾಮೆತ್ತಡ್ಕ ಸರಕಾರಿ ಶಾಲೆಯಲ್ಲಿ ಕೊಠಡಿ ಉದ್ಘಾಟನೆ


12 ಗಂಟೆಗೆ ಸರಕಾರಿ ನೌಕರರ ಸಂಘದ ಮಹಾಸಭೆ ,ಸನ್ಮಾನ


12.30 ಕ್ಕೆ ಎಂ ಆರ್ ಪಿ ಎಲ್ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ

Recent News


Leave a Comment: