Posted by vidyamaana on 2024-07-25 13:38:46 |
ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ
ಇದು ಹೇಗೆ ಕಾರ್ಯನಿರ್ವಹಿಸುತ್ತದೆ
ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ನಿಮ್ಮ ಫೋನ್ನ ಪ್ರಾಥಮಿಕ ಮೈಕ್ರೊಫೋನ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇದು ಸಾಮಾನ್ಯವಾಗಿ ಮುಂಭಾಗ ಅಥವಾ ಮೇಲ್ಭಾಗದಲ್ಲಿದೆ. ಕರೆ ಸಮಯದಲ್ಲಿ, ಮುಖ್ಯ ಮೈಕ್ರೊಫೋನ್ ನಿಮ್ಮ ಧ್ವನಿಯನ್ನು ಸೆರೆಹಿಡಿಯುತ್ತದೆ, ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಸುತ್ತಮುತ್ತಲಿನ ಶಬ್ದಗಳನ್ನು ತೆಗೆದುಕೊಳ್ಳುತ್ತದೆ.
ಮೈಕ್ರೊಫೋನ್ ಗ್ರಿಲ್ ನ ಪ್ರಾಮುಖ್ಯತೆ
ಮೈಕ್ರೊಫೋನ್ ಗ್ರಿಲ್ ಶಬ್ದವನ್ನು ತೆಗೆದುಹಾಕುವುದು ಅಥವಾ ತಿರುಚುವುದು ನಿಮ್ಮ ಕರೆಯ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಘಟಕವಿಲ್ಲದೆ, ಹಿನ್ನೆಲೆ ಶಬ್ದಗಳು ಹೆಚ್ಚು ಸ್ಪಷ್ಟವಾಗುತ್ತವೆ, ಸಂವಹನವನ್ನು ಕಷ್ಟಕರವಾಗಿಸುತ್ತದೆ.ಎಲ್ಲೆಲ್ಲೂ ಇಲ್ಲ
ಎಲ್ಲಾ ಸ್ಮಾರ್ಟ್ಫೋನ್ಗಳು ಶಬ್ದ-ರದ್ದುಗೊಳಿಸುವ ಮೈಕ್ರೊಫೋನ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ನಿಮ್ಮ ಸಾಧನವು ಈ ವೈಶಿಷ್ಟ್ಯವನ್ನು ಹೊಂದಿದೆಯೇ ಎಂದು ನಿಮಗೆ ಖಚಿತವಿಲ್ಲದಿದ್ದರೆ, ನಿಮ್ಮ ಫೋನ್ನ ಕೈಪಿಡಿಯನ್ನು ನೀವು ನೋಡಿಕೊಳ್ಳಬಹುದು.
Posted by Vidyamaana on 2023-11-06 07:11:18 |
ಸುಳ್ಯ: ಅಟೋ ರಿಕ್ಷಾಕ್ಕೆ ಓಮ್ಮಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ.
ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು
ಬಿಟ್ಟು ಹಿಂತಿರುಗುತ್ತಿದ್ದ ಜಾಲ್ಲೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂಬವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ಮಿಗೆ ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರುಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸಹ ಪ್ರಯಾಣಿಕ ಗಾಯಗೊಂಡಿದ್ದು,ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
Posted by Vidyamaana on 2023-07-06 02:40:12 |
ಪುತ್ತೂರು : ಮಣಿಪುರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ವರ್ಷವಾಗುತ್ತಲೇ ಜನಾಂಗೀಯ ಹಿಂಸಾಚಾರ ಮುಗಿಲು ಮುಟ್ಟಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ದೇಶದ ಪ್ರಧಾನಿಗಳು ಮೌನಕ್ಕೆ ಶರಣಾಗಿದ್ದಾರೆ.
ಅದರೇ ಇದೆ ವೇಳೆ ಕರ್ನಾಟಕ ಚುನಾವಣಾ ಸಂದರ್ಭ ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿದ ಪ್ರಧಾನಿಗಳು ಮಣಿಪುರಕ್ಕೆ ಬಾರಿಯೂ ಭೇಟಿ ನೀಡಿಲ್ಲ. ಈಶಾನ್ಯ ರಾಜ್ಯದಲ್ಲಿ ಮತ್ತೆ ಶಾಂತಿ ಸುವ್ಯಸ್ಥೆ ನೆಲೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ತಕ್ಷಣ ಕೈಗೊಳ್ಳಬೇಕು ಎಂದು ಪುತ್ತೂರು ಕ್ರಿಶ್ಚಿಯನ್ಸ್ ಯೂನಿಯನ್ ಅಧ್ಯಕ್ಷ ಮೌರೀಸ್ ಮಸ್ಕರೇನಿಯಸ್ ಹೇಳಿದರು.ರಾಜ್ಯದಲ್ಲಿರುವ ಕ್ರೈಸ್ತರನ್ನು ಗುರಿಯಾಗಿಸಿ ದಾಳಿಗಳನ್ನು ನಡೆಸಲಾಗುತ್ತಿದ್ದೂ ಚರ್ಚ್ ಗಳಿಗೆ ಅಗಾಧ ಪ್ರಮಾಣದಲ್ಲಿ ಹಾನಿ ಮಾಡಲಾಗಿದೆ. ಮಣಿಪುರದ ಮೈತೇಯಿ ಬಂಡುಕೋರರು ಪೊಲೀಸ್ ಠಾಣೆಗಳಿಗೆ ದಾಳಿ ನಡೆಸಿ ಶಸ್ತ್ರಗಾರದಿಂದ 3500 ಶಸ್ತ್ರಾಸ್ತ್ರಗಳನ್ನು ಕೊಂಡೊಯ್ದ ಗಂಭೀರ ಪ್ರಕರಣ ನಡೆದಿದೆ. ಆದರೆ ಅಲ್ಲಿಗೆ ಇತ್ತೀಚೆಗೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಆ ಬಂಡುಕೋರರ ಮೇಲೆ ನಿರ್ಧಾಕ್ಷಿಣ್ಯ ಕ್ರಮೈಗೊಳ್ಳುವುದು ಬಿಟ್ಟೂ ಶಸ್ತ್ರಾಸ್ತ್ರಗಳನ್ನು ವಾಪಾಸು ಮಾಡುವಂತೆ ಬಂಡುಕೋರರಲ್ಲಿ ಮನವಿ ಮಾಡಿದ್ದಾರೆ. ಇದರಿಂದಲೇ ಈ ಬಂಡುಕೋರರ ಹಿಂದೆ ಇರುವ ಶಕ್ತಿ ಯಾವುದು ತಿಳಿಯುತ್ತದೆ ಎಂದು ಬುಧವಾರ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಮಣಿಪುರದಲ್ಲಿ ಜನರು ಬೀದಿಯ ಹೆಣವಾಗುತ್ತಿದ್ದರೂ, ಮಾನವ ಹಕ್ಕು ಮತ್ತು ದೇಶದ ಕಾನೂನು ವ್ಯವಸ್ಥೆ ಮೌನವಾಗಿದೆ. ರಾಷ್ಟ್ರಪತಿಗಳು ತಕ್ಷಣ ಮಧ್ಯಪ್ರವೇಶಿಸಿ ಮಣಿಪುರದಲ್ಲಿ ಶಾಂತಿ ನೆಲೆಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು. ತಪ್ಪುತಸ್ಥರಿಗೆ ಶಿಕ್ಷೆ ವಿಧಿಸುವ ಜತೆಗೆ, ಪ್ರಾಣ ಕಳೆದುಕೊಂಡವರಿಗೆ ಹಾಗೂ ಹಾನಿಗೊಳಗಾದವರಿಗೆ ಸೂಕ್ತ ಪರಿಹಾರ
ನೀಡಬೇಕೆಂದು ಆಗ್ರಹಿಸಿದರು.ಪದಾಧಿಕಾರಿಗಳಾದ ವಲರೇಯನ್ ಡಯಾಸ್, ವಾಲ್ಟರ್ ಸೀಕ್ಟೇರ, ವಿಕ್ಟರ್ ಪೈಸ್, ಜೆರೋಮಿಯಾಸ್ ಪೈಸ್, ಕಾನ್ಯೂಟ್ ಮಸ್ಕರೇನಿಯಸ್ ಉಪಸ್ಥಿತರಿದ್ದರು
Posted by Vidyamaana on 2023-06-02 14:50:26 |
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11 ಕೆವಿ ಕ್ಯಾಂಪ್ಕೋ, ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ತ, ಮುಂಡೂರು ಮತ್ತು ಪೀಡಿರ್ನಲ್ಲಿ ದಿನಾಂಕ ಜೂನ್ 3ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 2ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
33/1142 ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಪೀಡರ್ನಿಂದ ವಿದ್ಯುತ್ ಸರಬರಾಜಾಗುವ ಮುಂಡೂರು, ಕೆಮ್ಮಿಂಜೆ ಮತ್ತು ಆರ್ಯಾಪು ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Posted by Vidyamaana on 2023-06-03 02:02:32 |
ವಿಟ್ಲ: ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಟ್ಲದಲ್ಲಿ ವಿಜಯೋತ್ಸವ, ಕೃತಜ್ಞತಾ ಸಬೆ ಆಯೋಜಿಸಿರುವುದು ಎಲ್ಲರಿಗೂ ತಿಳಿದ ವಿಚಾರ. ಕಾಂಗ್ರೆಸಿಗರು ಹರ್ಷ ವ್ಯಕ್ತಪಡಿಸಿದರು. ಅಶೋಕ್ ಕುಮಾರ್ ರೈ ಅವರ ಅಭಿಮಾನಿಗಳು ಸಂಭ್ರಮಿಸಿದರು. ಎಲ್ಲವೂ ಆಯಿತು. ಆದರೆ ಬಾಲಕರೀರ್ವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ ಬಗೆ ಯಾರಿಗೂ ತಿಳಿಯಲೇ ಇಲ್ಲ.
ಸಮಾರಂಭಕ್ಕೆ ಮೊದಲು ನಡೆದ ವಿಜಯೋತ್ಸವ ಮೆರವಣಿಗೆ ನಡೆದಿತ್ತು. ಅಶೋಕ್ ಕುಮಾರ್ ರೈ ಅವರು ಜೀಪಿನಿಂದ ಇಳಿಯುವುದನ್ನೇ ಕಾಯುತ್ತಿದ್ದರೆಂದು ಕಾಣಬೇಕು. ತೆರೆದ ಜೀಪಿನಿಂದ ಅಶೋಕ್ ರೈ ಇಳಿಯುತ್ತಿದ್ದಂತೆ ಇಬ್ಬರು ಬಾಲಕರು ನೇರವಾಗಿ ಅಶೋಕ್ ಕುಮಾರ್ ರೈ ಅವರ ಬಳಿಗೆ ಓಡೋಡಿ ಬಂದರು. ಹಾಗೆ ಬಂದವರೇ ಅಶೋಕ್ ರೈ ಅವರ ಕೈಗೆ ಚೀಟಿಯೊಂದನ್ನು ನೀಡಿದರು.
ಲಗುಬಗೆಯ ವಾತಾವರಣದಲ್ಲೂ ಅಶೋಕ್ ರೈ ಆ ಪತ್ರವನ್ನು ತದೇಕಚಿತ್ತದಿಂದ ಓದತೊಡಗಿದರು. ಗಡಿಬಿಡಿಯ ನಡುವೆಯೂ ಮುಖದಲ್ಲಿ ನಗು ಅರಳಿತು. ಮಕ್ಕಳ ಸಂತೋಷದಲ್ಲಿ ತಾವು ಪಾಲ್ಗೊಂಡರು.
ಬಾಲಕರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು. ಶಾಸಕರು ಮಕ್ಕಳ ಸಂತೋಷ ನೋಡಿ, ಮನತುಂಬಿ ಹರಸಿದರು. ಮಾತ್ರವಲ್ಲ. ತಮ್ಮ ಕಿಸೆಗೆ ಕೈ ಹಾಕಿ, ಕೈಗೆ ಸಿಕ್ಕ ನೋಟನ್ನು ಬಾಲಕರಿಗೆ ನೀಡಿದರು.
ಮಕ್ಕಳು ಬರೆದ ಪತ್ರದ ಸಾಲುಗಳು ಹೀಗಿತ್ತು…
ಕರ್ನಾಟಕ, ವಿಧಾನಸಭಾ ಚುನಾವಣೆ ಪುತ್ತೂರು ವಿಧಾನಸಭಾ ಕ್ಷೇತ್ರ
ನಮ್ಮ ಊರಿನ ನೆಚ್ಚಿನ MLA ಆಗಿರುವ ಪ್ರೀಯ ಅಶೋಕ್ ಕುಮಾರ್ ರೈ ಅವರಿಗೆ ನಮಸ್ಕಾರ.
ನೀವು ಚಂದಳಿಗೆ ಭಾರತ್ ಅಡಿಟೋರಿಯಂಗೆ ಸಂದರ್ಶಿಸಿದಾಗ ನಿಮ್ಮಲ್ಲಿ ನಾನು ನಿಮ್ಮ ಕೈ ಹಿಡಿದು ಹೇಳಿದ್ದೆ. ನೀವು ಈ ಸಲ ಗೆಲ್ಲುತ್ತೀರಿ ಎಂದಾಗ ನೀವು (ತುಳು ಭಾಷೆಯಲ್ಲಿ) ಎಡ್ಡೆ ಬಾಳೆ ಎಂದು ಹೇಳಿದ್ದೀರಿ.
ಇನ್ನು ಮುಂದಕ್ಕೂ ನೀವು ಪ್ರಧಾನ ಮಂತ್ರಿಯಾಗಬೇಕು ಎಂದೂ ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸುತ್ತೇವೆ.
- ಶಾಹುಲ್ ಹಮೀದ್ 2ನೇ ತರಗತಿ,
ಚಂದಳಿಕೆ ಶಾಲೆ
Posted by Vidyamaana on 2024-04-14 08:23:42 |
ಬೆಂಗಳೂರು: ಜಾಲಹಳ್ಳಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ತಾಯಿ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವುದು ನಡೆದಿದೆ. ಜೈಲಿಗೆ ಹೋದ ದಿನವೇ ಶೌಚಾಲಯದಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಗಂಗಾದೇವಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಮಂಗಳವಾರ ರಾತ್ರಿ ಇಬ್ಬರು ಮಕ್ಕಳನ್ನು ಸಾಯಿಸಿದ್ದ ಗಂಗಾದೇವಿ, ಬುಧವಾರ ಬೆಳಗ್ಗೆ 112 ಗೆ ಕರೆ ಮಾಡಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ತಕ್ಷಣ ಸ್ಥಳಕ್ಕೆ ಹೋಗಿ ಗಂಗಾದೇವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಗಂಗಾದೇವಿಯನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ, ಗುರುವಾರ ರಾತ್ರಿ ಜೈಲಿನಲ್ಲೇ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೆನ್ನೆ ಮರಣೋತ್ತರ ಪರೀಕ್ಷೆ ಮಾಡಿ ಸಂಬಂಧಿಕರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದ್ದು, ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2023-10-28 19:18:01 |
ಪುತ್ತೂರು: ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ಬಂಧಿಸಲಾಗಿದೆ.
ಮಂಗಳೂರಿನಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಬಸ್ಸಿನಲ್ಲಿ ಘಟನೆ ನಡೆದಿದೆ.
ಬಸ್ ಕಲ್ಲಡ್ಕ ಸಮೀಪಿಸುತ್ತಿದ್ದಂತೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿ ಕಿರುಚಿಕೊಂಡಿದ್ದು, ಸಹ ಪ್ರಯಾಣಿಕರು ಬಂಟ್ವಾಳ ತಾಲೂಕಿನ ಎಡಪವು ಮೂಲದ ಉದಯನನ್ನು ಹಿಡಿದಿದ್ದಾರೆ. ಬಳಿಕ ಪುತ್ತೂರು ನಗರ ಪೊಲೀಸರಿಗೆ ಒಪ್ಪಿಸಲಾಯಿತು. ಪ್ರಕರಣ ದಾಖಲುಗೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.