Posted by vidyamaana on 2024-07-26 08:10:52 |
ಪುತ್ತೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮವು ಜ 27 ಶನಿವಾರ ಅಪರಾಹ್ನ ಗಂಟೆ 2:00ರಿಂದ ಪುತ್ತೂರು ನೆಹರೂ ನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ನಡೆಸಲಿದ್ದಾರೆ. ರಾಮದಾಸ್ ಶೆಟ್ಟಿ ವಿಟ್ಲ ಅಧ್ಯಕ್ಷರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್(ರಿ.) ಪುತ್ತೂರು ತಾಲೂಕು ಇವರ ಅಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮದಲ್ಲಿ ಡಾ. ಆಶಾಲತಾ. ಪಿ. ಸಹಾಯಕ ಪ್ರಾಧ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಗೋವಿಂದದಾಸ ಕಾಲೇಜು ಸುರತ್ಕಲ್ ಇವರು ಉಪನ್ಯಾಸ ನೀಡಲಿದ್ದಾರೆ
ವೇದಿಕೆಯಲ್ಲಿ ಪ್ರೊ.ವಿ.ಬಿ.ಅರ್ತಿಕಜೆ ಗೌರವ ಸಲಹೆಗಾರರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಮತ್ತು ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರು ಇವರನ್ನು ಡಾ ಯು.ಪಿ. ಶಿವಾನಂದ ಆಡಳಿತ ನಿರ್ದೇಶಕರು ಸುದ್ದಿ ಸಮೂಹ ಸಂಸ್ಥೆ ಪುತ್ತೂರು ಇವರು ಸನ್ಮಾನಿಸಲಿದ್ದಾರೆ.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಜುಬಿನ್ ಮೊಹಪಾತ್ರ ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ, ತಾರನಾಥ ಗಟ್ಟಿ ಕಾಪಿಕಾಡು ಅಧ್ಯಕ್ಷರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಧ್ಯಕ್ಷರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ ಕ,ಮುರಳೀಕೃಷ್ಣ ಕೆ.ಎನ್ ಸಂಚಾಲಕರು, ವಿವೇಕಾನಂದ ಮಹಾವಿದ್ಯಾಲಯ ನೆಹರೂನಗರ ಪುತ್ತೂರು. ಶ್ಯಾಮ ಸುದರ್ಶನ್ ಭಟ್ ಹೊಸಮೂಲೆ ಮುಖ್ಯಸ್ಥರು, ಕಹಳೆ ನ್ಯೂಸ್ ಚಾನೆಲ್ ಪುತ್ತೂರು ಇವರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Posted by Vidyamaana on 2023-11-08 07:57:04 |
ಉಪ್ಪಿನಂಗಡಿ: ಹೃದಯಾಘಾತಕ್ಕೆ ಒಳಗಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಫಾನ್ (18 )ಮೃತಪಟ್ಟ ಯುವಕ. ಪುತ್ತೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಎ.ಸಿ. ಮೆಕ್ಯಾನಿಕ್ ವ್ಯಾಸಂಗ ಮಾಡುತ್ತಿದ್ದ ಇರ್ಫಾನ್ ಎಂದಿನಂತೆ ತರಗತಿ ಮುಗಿದು ಸಂಜೆ ಮನೆಗೆ ಬಂದಿದ್ದ.
ಸಾಯಂಕಾಲ 6 ಗಂಟೆಯ ವೇಳೆಗೆ ಇರ್ಫಾನ್ ದಿಢೀರ್ ಅನಾರೋಗ್ಯಕ್ಕೆ ಒಳಗಾಗಿ ಕುಸಿದು ಬಿದ್ದಾಗ ಮನೆಯವರು ತಕ್ಷಣ ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದರಾದರೂ ಆ ವೇಳೆಗಾಗಲೇ ಆತ ಮೃತಪಟ್ಟಿದ್ದ ಎಂದು ವರದಿಯಾಗಿದೆ.
ಮೃತ ಯುವಕ ತಂದೆ, ತಾಯಿ, ಮೂವರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.
Posted by Vidyamaana on 2024-04-22 17:13:52 |
ಪುತ್ತೂರು: ಏ.23ರಂದು ಕಾಂಗ್ರೆಸ್ ನ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಪರ ಪುತ್ತೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ರೋಡ್ ಶೋ ಚುನಾವಣಾ ರ್ಯಾಲಿಯನ್ನು ಸಾರ್ವಜನಿಕರ ಹಿತದೃಷ್ಠಿಯಿಂದ ರದ್ದುಗೊಳಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೋಡ್ ಶೋ ನಡೆಸುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ. ಇದರಿಂದ ವಾಹನಗಳಲ್ಲಿ ವಿವಿಧ ಕಡೆ ತೆರಳುವ ಜನರಿಗೆ ತೊಂದರೆಯಾಗಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ತೊಂದರೆಯಾಗಲಿದ್ದು, ದೈನಂದಿನ ವ್ಯವಹಾರಕ್ಕಾಗಿ ನಗರಕ್ಕೆ ಬರುವ ಜನಸಾಮಾನ್ಯರಿಗೂ ತೊಂದರೆಯಾಗಲಿದೆ ಎಂದು ಏ.23ರಂದು ನಡೆಸಲು ಉದ್ದೇಶಿಸಿದ್ದ ರೋಡ್ ಶೋ ಪ್ಯಾಲಿಯನ್ನು ರದ್ದುಗೊಳಿಸಲಾಗಿದೆ.
Posted by Vidyamaana on 2023-10-19 12:53:03 |
ಜಾಹಿರಾತು :
ಬ್ರೈಟ್ ಭಾರತ್ ಆರಂಭಿಸಿದ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆ ಇದಾಗಿದ್ದು,
ಇದರ ಪೂರ್ಣ ವಿವರ ಕೆಳಗಿದೆ.
ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್ನ ಈ ಯೋಜನೆ ನನಸು ಮಾಡಲಿದೆ.
ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?
ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 8867340630/9606590729 /8867340630
ಈ ನಂಬರ್ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.
ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ
ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು ಪಾವತಿಸಿ, ನಾಲ್ಕು ಮನೆ ಸೇರಿದಂತೆ, ಆರು ಆಕ್ವೀವಾ, ಎರಡು ಬೈಕ್, ಚಿನ್ನ, ಡೈಮಂಡ್, ನಗದು ಸೇರಿದಂತೆ, ಪ್ರತೀ ತಿಂಗಳು ಕೂಡ ಲಕ್ಷಾಂತರ ಬೆಲೆಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದೆ. ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದ ಸದಸ್ಯರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವಂತ ಬೆಲೆಯ ಪ್ರೋತ್ಸಾಹಕ ಬಹುಮಾನಗಳು ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಲಭಿಸಲಿದೆ. ಜೊತೆಗೆ ಎಲ್ಲಾ ಸರ್ಕಾರಿ ತೆರಿಗೆಗಳನ್ನು ಪಾವತಿಸಿ, ಪಾರದರ್ಶಕವಾಗಿ ನಡೆಯುವ ಬಡವರ ಕನಸಿನ ಯೋಜನೆ ಇದಾಗಿದ್ದು. ಪ್ರತಿಯೊಬ್ಬರಿಗೂ ಇದರ ಸದಸ್ಯತ್ವವನ್ನು ಪಡೆಯಬಹುದು.
ಯಾರಿಗೆಲ್ಲ ಸೇರಬಹುದು
ಬ್ರೈಟ್ ಭಾರತ್ ನಲ್ಲಿ ಪ್ರತಿಯೊಬ್ಬರಿಗೂ ಸದಸ್ಯರಾಗಲು ಮುಕ್ತ ಅವಕಾಶವಿದೆ, ಈಗಾಗಲೇ ಕರ್ನಾಟಕ ಕೇರಳದ ಜೊತೆಗೆ ಅನಿವಾಸಿ ಭಾರತೀಯರು ಕೂಡ ಸದಸ್ಯರಾಗಿದ್ದಾರೆ. ಈಗಾಗಲೇ ಸಾವಿರಾರು ಮಂದಿ ತಮ್ಮ ಹೆಸರು ನೋಂದಾಯಿಸಿ ರಿಜಿಸ್ಟರ್ ಆಗಿದ್ದು, ಈ ಕನಸಿನ ಯೋಜನೆಯಲ್ಲಿ ನಿಮಗೂ ಸದಸ್ಯರಾಗಬಹುದು.
ಸ್ವಂತ ಮನೆ ಅನ್ನುವುದು ಹಲವರಿಗೆ ಕನಸು ಮಾತ್ರವಾಗಿ ಉಳಿದಿರುವ ಈ ದಿನದಲ್ಲಿ, ಅವರ ಕನಸಿನ ಮನೆಯನ್ನು ಈ ಯೋಜನೆಯ ಮೂಲಕ ನೀಡಬೇಕು, ಅದರ ಜೊತೆಗೆ ಯಾರಿಗೂ ನಷ್ಟವಿಲ್ಲದ ರೀತಿಯಲ್ಲಿ, ಸೇರಿದ ಪ್ರತಿಯೊಬ್ಬ ಸದಸ್ಯರಿಗೂ, ಅವರು ಕಟ್ಟಿದ ಹಣಕ್ಕೆ ಸರಿಸಮಾನವಾದ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿ, ಲಾಭದ ಉದ್ದೇಶಕ್ಕಿಂತಲೂ, ಅವರ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಅನ್ನುವುದು ಬ್ರೈಟ್ ಭಾರತ್ನ ಪಾಲುದಾರರ ಮಾತು.
ಬ್ರೈಟ್ ಭಾರತ್ನ ಮೊದಲ ಡ್ರಾ ನವೆಂಬರ್ ತಿಂಗಳಲ್ಲಿ ನಡೆಯಲಿದ್ದು, ಮೊದಲ ತಿಂಗಳಲ್ಲೇ ಮೂರು ಅದೃಷ್ಟಶಾಲಿಗಳಿಗೆ ಆಕ್ಟೀವಾ ಗೆಲ್ಲುವ ಅವಕಾಶವಿದೆ. ಜೊತೆಗೆ ಪ್ರತಿ ತಿಂಗಳು ಕೂಡ ಬೈಕು, ಆಕ್ಟೀವಾ, ಚಿನ್ನ, ಡೈಮಂಡ್, ನಗದು ಬಹುಮಾನವಿದ್ದು, ಹದಿನಾರನೇ ತಿಂಗಳಿನಲ್ಲಿ ಕಾರು ಗೆಲ್ಲುವ ಅವಕಾಶವಿದೆ. ಜೊತೆಗೆ 17-18-19-20 ಈ ನಾಲ್ಕು ತಿಂಗಳಿನಲ್ಲಿ ನಾಲ್ಕು ಸುಸಜ್ಜಿತ ಮನೆ ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದ್ದು, ಅದೃಷ್ಟವಂತರು ಎರಡು ಬೆಡ್ರೂಮಿನ ಹೊಸ ಮನೆಯನ್ನು ಹೊಸ ಮನೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.
ಬ್ರೈಟ್ ಭಾರತ್ ನ ಪ್ರಧಾನ ಕಚೇರಿಯೂ ಪುತ್ತೂರಿನಲ್ಲಿ ಸಧ್ಯದಲ್ಲೇ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಶುಭಾರಂಭಗೊಳ್ಳಲಿದ್ದು, ಪ್ರತಿಯೊಬ್ಬರಿಗೂ ಬ್ರೈಟ್ ಭಾರತ್ ಸದಸ್ಯರಾಗಲು ಮುಕ್ತ ಅವಕಾಶವಿದೆ.
ಸದಸ್ಯರಾಗಲು ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ್ನ ನಂಬರನ್ನು ಸಂಪರ್ಕಿಸಬಹುದು.
8867340630 / 9606590729/8867340630
Posted by Vidyamaana on 2024-01-01 17:51:25 |
ಬೆಳ್ತಂಗಡಿ : ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಕುಡಿದ ಮತ್ತಿನಲ್ಲಿ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್ (28) ಎಂಬ ಯುವಕ ಯುವಕ ಮೂಗು ತುಂಡರಿಸಿಕೊಂಡ ಯುವಕನಾಗಿದ್ದಾನೆ.ಮೂಗು ತುಂಡರಿಸಿದ ಆರೋಪಿ ಯುವಕ ರಾಕೇಶ್ ಎಂಬಾತ ಮೂಲತಃ ಮೂಡಿಗೆರೆ ತಾಲೂಕಿನವನಾಗಿದ್ದು , ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು , ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಡಿಸೆಂಬರ್ 31 ರಂದು ರಾತ್ರಿ ಹೊಸ ವರ್ಷದ ಸಂದರ್ಭದಲ್ಲಿ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ರಾಕೇಶ್ ಎಂಬಾತ ದೀಕ್ಷಿತ್ ಎಂಬಾತನ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ.
ಘಟನೆಯಿಂದ ಗಂಭೀರ ಗಾಯಗೊಂಡ ದೀಕ್ಷಿತ್ ನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಪ್ರಕರಣ ಸಂಬಂಧ ವೇಣೂರು ಪೋಲಿಸರಿಗೆ ದೂರು ನೀಡಲಾಗಿದ್ದು , ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2024-01-18 20:24:06 |
ಬೆಳ್ತಂಗಡಿ: ಅಳದಂಗಡಿ ಸಮೀಪದ ಕುಬಲಾಜೆ ಮನೆ ನಿವಾಸಿ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಎಂಬವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಮೃತರಿಗೆ ಪತಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ