Posted by vidyamaana on 2023-08-18 08:29:00 |
ಬೆಳ್ತಂಗಡಿ: ರೋಗಿಯೊಬ್ಬರನ್ನು ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2023-08-18 08:29:00 |
ಬೆಳ್ತಂಗಡಿ: ರೋಗಿಯೊಬ್ಬರನ್ನು ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2024-08-05 07:21:22 |
ಬೆಂಗಳೂರು :- ಬೆಳ್ಳಂ ಬೆಳಗ್ಗೆ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿ ಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ಹಿಂದೆ ಬಂದು ಹಿಂಸೆ ನೀಡಿದ್ದಾನೆ.
Posted by Vidyamaana on 2023-11-02 18:15:15 |
ಪುತ್ತೂರು: ಕಳೆದ ಹತ್ತು ವರ್ಷಗಳ ಹಿಂದೆ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟನ್ನು ಸ್ತಾಪನೆ ಮಾಡಿದ್ದೇ ಬಡವರ ಸೇವೆಗಾಗಿ, ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಅಶೋಕ್ ರೈಯವರು ಶಾಸಕರಾಗುವ ಮೊದಲೇ ಟ್ರಸ್ಟ್ನಿಂದ ಸಮಾಜ ಸೇವೆ ನಡೆಯುತ್ತಲೇ ಇದೆ ಎಂದು ಟ್ರಸ್ಟ್ನ ಪ್ರಮುಖರಾದ ನಿಹಾಲ್ ಶೆಟ್ಟಿ ಹೇಳಿದರು.
ಅವರು ಬನ್ನೂರು ನವೋದಯ ಯುವಕ ಮಂಡಲದ ಸಭಾಂಗಣದಲ್ಲಿ ನಡೆದ ರೈ ಚಾರಿಟೇಬಲ್ ಟ್ರಸ್ಟ್ ಫಲಾನುಭವಿಗಳ ಸಭೆಯಲ್ಲಿ ಮಾತನಾಡಿದರು.
ಕಳೆದ ಹತ್ತು ವರ್ಷಗಳಿಂದ ವಿವಿಧ ಸೇವೆಗಳನ್ನು ಟ್ರಸ್ಟ್ ನೀಡುತ್ತಾ ಬಂದಿದೆ. ಬಡ ಮಹಿಳೆಯರಿಗೆ ಹೊಲಿಗೆ ತರಬೇತಿ , ಚಾಲನಾ ತರಬೇತಿ, ಮೆಡಿಕಲ್ ಕ್ಯಾಂಪ್, ಬಡವರಿಗೆ ಆರ್ಥಿಕ ನೆರವು ಸೇರಿದಂತೆ ಅನೇಕ ಬಡವರ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಟ್ರಸ್ಟ್ ಮೂಲಕ ತರಬೇತಿ ಪಡೆದ ಅನೇಕ ಮಂದಿ ಸ್ವ ಉದ್ಯೋಗದಲ್ಲಿ ತೊಡಗಿಸಿಕೊಂಡು ಸ್ವಾಭಿಮಾನಿಗಳಾಗಿದ್ದು ಅತ್ಯಂತ ಸಂತೋಷದ ವಿಚಾರವಾಗಿದೆ. ಬಡವರ ಮಕ್ಕಳ ವಿದ್ಯಾಬ್ಯಾಸಕ್ಕೆ ಟ್ರಸ್ಟ್ನಿಂದ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಬಾರಿಯ ದೀಪಾವಳಿಯಲ್ಲೂ ಬಡವರಿಗೆ ವಸ್ತ್ರ ವಿತರಣೆ ಹಾಗೂ ಸಹಭೋಜನ ಕಾರ್ಯಕ್ರಮ ನಡೆಯಲಿದ್ದು ಎಲ್ಲಾ ಗ್ರಾಮಸ್ಥರು ಇದರಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ವೇದಿಕೆಯಲ್ಲಿ ಟ್ರಸ್ಟ್ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ, ಬನ್ನೂರು ನವೋದಯ ಯುವಕಮಂಡಲದ ಅಧ್ಯಕ್ಷರಾದ ರಾಧಾಕೃಷ್ಣ ರೈ, ಕಾರ್ಯದರ್ಶಿ ರೋಹಿತ್ ರೈ, ಚಂಧ್ರಾಕ್ಷ, ದಿನೇಶ್ ಸಾಲಿಯಾನ್, ಸಾಹಿರಾ ಬಾನು ಸೇರಿದಂತೆ ಟ್ರಸ್ಟ್ನ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ತಿತರಿದ್ದರು.
Posted by Vidyamaana on 2024-06-09 19:33:00 |
ನವದೆಹಲಿ: ಹೆಸರಿನಲ್ಲಿ ಮೂರನೇ ಬಾರಿ ಪ್ರಮಾಣವಚನವನ್ನು ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು.
Posted by Vidyamaana on 2024-01-12 15:56:07 |
ಕಡಬ : ಎಡಮಂಗಲ ಗ್ರಾಮದ ಗಂಡಿತಡ್ಕ ರಾಮಚಂದ್ರ ನಾಯ್ಕರ ಮಗಳು, ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವ್ರ ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧಾನರಾದರು
ಎರಡು ದಿನಗಳಿಂದ ಅನಾರೋಗ್ಯದಿಂದಿದ್ದ ತೃಪ್ತಿಯನ್ನು ನಿನ್ನೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಆಕೆಯನ್ನು ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ನಿನ್ನೆ ರಾತ್ರಿಯೇ ಕೊನೆಯುಸಿರೆಳೆದಳು.
ಪಾರ್ಥಿವ ಶರೀರವನ್ನು ಎಡಮಂಗಲದ ಮನೆಗೆ ತಂದು ಇಂದು ಜ 12 ರಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಮೃತರು ತಂದೆ ರಾಮಚಂದ್ರ ತಾಯಿ ಆಶಾ ಮತ್ತು ಸಹೋದರಿಯನ್ನು ಅಗಲಿದ್ದಾರೆ
Posted by Vidyamaana on 2024-06-23 08:15:43 |
ಬೆಂಗಳೂರು ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಹಿ ಹಾಕಿದ್ದ ಮೊದಲ ಕಡತಕ್ಕೆ ವಿಘ್ನ ಉಂಟಾಗಿದ್ದು, ದೇದಾರಿ ಮೈನಿಂಗ್ ಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.
ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಮೊದಲಿಗೆ ಸಹಿ ಹಾಕಿದ್ದ ರಾಜ್ಯಕ್ಕೆ ಸಂಬಂಧಿಸಿದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಯ ಗಣಿಗಾರಿಕೆಗೆ ಸಂಬಂಧಿಸಿದ ಯೋಜನೆಗೆ ರಾಜ್ಯ ಸರ್ಕಾರ ತಡೆ ನೀಡಿದೆ.