ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಕುಂಬ್ರ ಬದ್ರಿಯಾ ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Posted by Vidyamaana on 2023-08-15 14:44:58 |

Share: | | | | |


ಕುಂಬ್ರ ಬದ್ರಿಯಾ ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು; ಕುಂಬ್ರ ಬದ್ರಿಯಾ ನಗರ ಬದ್ರಿಯಾ ಜುಮಾ ಮಸ್ಜಿದ್ ಹಾಗೂ ಮದ್ರಸ ವಠಾರದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಜಮಾತ್ ಅಧ್ಯಕ್ಷ ಉಸ್ಮಾನ್ ಮುಸ್ಲಿಯಾರ್ ದ್ವಜಾರೀಹಣಗೈದರು.‌ಖತೀಬರಾದ‌ ಇಸ್ಮಾಯಿಲ್ ಸ ಅದಿ ದುವಾ ನೆರವೇರಿಸಿದರು.‌ಜಮಾತ್ ಕಾರ್ಯದರ್ಶಿ ಅದ್ರಾಮ ಕೊಯಿಲ, ಕೋಶಾಧಿಕಾರಿ ಇಸ್ಮಾಯಿಲ್ ಬದ್ರಿಯಾನಗರ, ಜಮಾತ್ ಮಾಜಿ ಕಾರ್ಯದರ್ಶಿ ಇಸ್ಮಾಯಿಲ್ ಕೋಳಿಗದ್ದೆ, ಫಾರೂಕ್ ಮಗಿರೆ, ಆದು ಕೊಯಿಲ, ಸಿಎಂ‌ಅಬ್ದುಲ್ ರಹಿಮಾನ್, ರಝಾಕ್ ಆಟೋ ಸಾಂತಿಯಡಿ,ಸಿರಾಜ್ ಬದ್ರಿಯಾನಗರ ,ಸಾದಿಕ್ ಮಗಿರೆ ಮತ್ತಿತರರು ಉಪಸ್ಥಿತರಿದ್ದರು. ಉಸ್ತಾದ್ ಖಲೀಲ್ ಸ ಅದಿ ಸ್ವಾಗತಿಸಿ, ಮುಅಲ್ಲಿಂ ವಂದಿಸಿದರು.

ಮತ್ತೆ ಯಾರ ಕೈಗೂ ಸಿಗದೆ ಮನೆ ಸೇರಿದ ಅನಂತಕುಮಾರ್ ಹೆಗಡೆ

Posted by Vidyamaana on 2024-03-24 13:14:15 |

Share: | | | | |


ಮತ್ತೆ ಯಾರ ಕೈಗೂ ಸಿಗದೆ ಮನೆ ಸೇರಿದ ಅನಂತಕುಮಾರ್ ಹೆಗಡೆ

ಕಾರವಾರ: ಬರೋಬ್ಬರಿ ನಾಲ್ಕೂವರೆ ವರ್ಷಗಳ ಕಾಲ ಯಾರ ಸಂಪರ್ಕಕ್ಕೂ ಬಾರದೆ ಸೈಲೆಂಟ್ ಆಗಿದ್ದ ಉತ್ತರ ಕನ್ನಡ (Uttara Kann

non

a) ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde), ಲೋಕಸಭೆ ಚುನಾವಣೆಗೆ (Lok Sabha Election) ಕೆಲವೇ ತಿಂಗಳು ಬಾಕಿ ಇರುವಂತೆ ಮತ್ತೆ ಆಕ್ಟಿವ್ ಆಗಿದ್ದರು. ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದು ಆರಂಭಿಸಿದ್ದ ಅನಂತಕುಮಾರ್ ಹೆಗಡೆ ಇದೀಗ ಮತ್ತೆ ಯಾರ ಸಂಪರ್ಕಕ್ಕೂ ಸಿಗದೆ ಮನೆ ಸೇರಿದ್ದಾರೆ.ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಅನಂತಕುಮಾರ್ ಹೆಗಡೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಕಾರ್ಯಕರ್ತರನ್ನು ಸೆಳೆಯುವ ಪ್ರಯತ್ನಕ್ಕೆ ಕೈ ಹಾಕಿದ್ದರು. ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕರ್ನಾಟಕದಿಂದ ಯಾರ ಹೆಸರು ಕೂಡ ಘೋಷಣೆ ಆಗಿರಲಿಲ್ಲ. ಯಾವಾಗ ಬಿಜೆಪಿ 2ನೇ ಪಟ್ಟಿ ಬಿಡುಗಡೆಯಾಯ್ತೋ ಅಂದಿನಿಂದ ಅನಂತಕುಮಾರ್ ಹೆಗಡೆ ಸೈಲೆಂಟ್ ಆಗಿದ್ದಾರೆ.ಈ ಬಾರಿ ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಲಿದೆ ಎಂದು ಹೇಳಲಾಗುತ್ತಿದೆ. ಹೀಗಿದ್ದರೂ ನಾಲ್ಕೂವರೆ ವರ್ಷಗಳ ನಂತರ ಸಾರ್ವಜನಿಕ ರಂಗಕ್ಕೆ ಎಂಟ್ರಿಕೊಟ್ಟ ಹೆಗಡೆ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದರು. ಇದೇ ವಿಶ್ವಾಸದಲ್ಲಿ ಕಾರ್ಯಕರ್ತರ ಸಭೆಗಳನ್ನು ನಿರಂತರವಾಗಿ ನಡೆಸುತ್ತಾ ಬಂದಿದ್ದರು. ಆದರೆ, ಎರಡನೇ ಪಟ್ಟಿಯಲ್ಲಿ ತನ್ನ ಹೆಸರು ಘೋಷಣೆ ಆಗದಿರುವುದನ್ನು ಕಂಡ ಹೆಗಡೆ, ಟಿಕೆಟ್ ಕೈ ತಪ್ಪುವ ಸಾಧ್ಯತೆ ಹಿನ್ನೆಲೆ ಮತ್ತೆ ಯಾರ ಕೈಗೂ ಸಿಗದೆ ಶಿರಸಿ ಪಟ್ಟಣದಲ್ಲಿರುವ ತನ್ನ ನಿವಾಸದಲ್ಲಿದಲ್ಲೇ ಕುಳಿತುಕೊಂಡಿದ್ದಾರೆ.ಶಿರಸಿಯಲ್ಲಿದ್ದರೂ ಯಾವೊಬ್ಬ ಕಾರ್ಯಕರ್ತನನ್ನೂ ಹೆಗಡೆ ಭೇಟಿ ಆಗುತ್ತಿಲ್ಲ. ಮತ್ತೊಮ್ಮೆ ಮೋದಿ ಘೋಷಣೆಯಡಿ ಪ್ರಚಾರ ಆರಂಭಿಸಿದ್ದ ಹೆಗಡೆ, 2ನೇ ಪಟ್ಟಿ ಬಿಡುಗಡೆ ಬಳಿಕ ಒಂದೇ ಒಂದು ಸಭೆಯನ್ನೂ ಮಾಡಿಲ್ಲ.ಯಾರೇ ನಿಂತ್ರೂ ಎಲ್ರೂ ಒಗ್ಗಟ್ಟಾಗಿ ಮತ್ತೆ ಮೋದಿಯನ್ನ ಪ್ರಧಾನಿ ಮಾಡಬೇಕು. ಈಗ ನಾವು ಯಾವುದೇ ಕಾರಣಕ್ಕೂ ವಿರಮಿಸಬಾರದೆಂದು ಕಾರ್ಯಕರ್ತರಿಗೆ ಹೇಳಿದ್ದ ಅನಂತಕುಮಾರ್ ಹೆಗಡೆಯೇ ಇದೀಗ ಕಾರ್ಯಕರ್ತರ ಸಂಪರ್ಕಕ್ಕೆ ಸಿಗದೆ ಮನೆಯಲ್ಲೇ ವಿರಮಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬೇಕಿದ್ರೆ ಹೀಗೆ ಮಾಡಿ!?? ವೈರಲ್ ಮೆಸೇಜ್

Posted by Vidyamaana on 2024-06-05 16:31:52 |

Share: | | | | |


ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬೇಕಿದ್ರೆ ಹೀಗೆ ಮಾಡಿ!?? ವೈರಲ್ ಮೆಸೇಜ್

ಬೆಂಗಳೂರು :- ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬೇಕಾ? ಡಿಎಂ ಮಾಡಿ. ಡಿಎಂ ಮಾಡುವುದರ ಜೊತೆಗೆ ಪೇಜ್ ಲೈಕ್ ಮಾಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಲೈಕ್​ಗಳಿಗಾಗಿ ಕಿಡಿಗೇಡಿಗಳು ದಂಧೆಗಿಳಿದಿದ್ದಾರೆ.

ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲವು ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಇಡೀ ಹಾಸನದೆಲ್ಲೆಡೆ ಹರಿದಾಡಿತ್ತು. ಕಿಡಿಗೇಡಿಗಳು ಪ್ರಜ್ವಲ್ ರೇವಣ್ಣ ಹೆಸರು ಹಾಳು ಮಾಡುವ ಉದ್ದೇಶದಿಂದ ಹಾಸನದ ಬಸ್ ನಿಲ್ದಾಣ ಸೇರಿದಂತೆ ಎಲ್ಲಾ ಕಡೆ ಪೆನ್ ಡ್ರೈವ್​ಗಳನ್ನು ಇಟ್ಟಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ವಿಡಿಯೋ ಹರಿಬಿಟ್ಟಿದ್ದರು. ಮಹಿಳೆಯ ಮುಖ ಕೂಡ ಬ್ಲರ್ ಮಾಡಿರಲಿಲ್ಲ. ವಿಡಿಯೋ ವೈರಲ್ ಆದ ಬಳಿಕ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಅದೆಷ್ಟೋ ಮಹಿಳೆಯರು ಸಾಯಲು ಯತ್ನಿಸಿದ್ದಾರೆ. ಕುಟುಂಬದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಮಾನನಷ್ಟ ಅನುಭವಿಸಿದ್ದಾರೆ. ಇದೆಲ್ಲ ಒಂದು ಕಡೆ ಆದ್ರೆ ಮತ್ತೊಂದೆಡೆ ಕೆಲ ಕಿಡಿಗೇಡಿಗಳು ಇದೇ ವಿಡಿಯೋಗಳನ್ನು ಇಟ್ಟುಕೊಂಡು ದಂಧೆಗೆ ಇಳಿದಿದ್ದಾರೆ.

ಈಶ್ವರಮಂಗಲ: ಮೇನಾಲ ದರ್ಗಾಗೆ ಶಾಸಕರ ಭೇಟಿ

Posted by Vidyamaana on 2024-01-18 07:21:45 |

Share: | | | | |


ಈಶ್ವರಮಂಗಲ: ಮೇನಾಲ ದರ್ಗಾಗೆ ಶಾಸಕರ ಭೇಟಿ

ಪುತ್ತೂರು: ಈಶ್ವರಮಂಗಲ ಮೇನಾ ಮಖಾಂ ದರ್ಗಾ ಶರೀಫ್‌ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದರ್ಗಾದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆದಿತ್ತು.  ಈ ಸಂದರ್ಬದಲ್ಲಿ ಮಸೀದಿಯ ಧರ್ಮಗುರುಗಳಾದ ಜಮಾಲುದ್ದೀನ್ ತಂಙಳ್ ದುಗ್ಗಲಡ್ಕ, ನೆಟ್ಟಣಿಗೆ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೂಸಾನ್, ನೆಟ್ಟನಿಗೆ ಮುಡ್ನೂರು ಗ್ರಾಪಂ ಸದಸ್ಯರಾದ ಶ್ರೀರಾಂ ಪಕ್ಕಳ, ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ನೆಟ್ಟಣಿಗೆ ಮುಡ್ನೂರು ಗ್ರಾಪಂ ಉಪಾಧ್ಯಕ್ಷರಾದ ರಾಮ ಕೆ ಮೇನಾಲ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಉದ್ಯಮಿಗಳಾದ ರಿತೇಶ್ ಶೆಟ್ಟಿ ಮಂಗಳೂರು, ಪುತ್ತೂರು ಡ್ಯಾಶ್ ಮಾರ್ಕೆಂಟಿಂಗ್ ವ್ಯವಸ್ಥಾಪಕರಾದ ನಿಹಾಲ್ ಶೆಟ್ಟಿ ಕಲ್ಲಾರೆ, ದೀಕ್ಷಿತ್ ರೈ ಕುತ್ಯಾಳ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ರಹಿಮಾನ್ ಮೇನಾಲ, ಕರ್ನೂರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಅಬ್ದುಲ್ಲ , ವಿಕ್ರಂ ರೈ ಸಾಂತ್ಯ, ಸುರೇಶ್ ಮೇನಾಲ, ಅಬೂ ಮೇನಾಲ, ಎಂ ಪಿ ಅಬ್ದುಲ್ ಕುಂಞಿ ಪಳ್ಳತ್ತೂರು, ಗಿರೀಶ್ ರೈ ಮರ್ಕಡ,ಅಬ್ದುಲ್ ಕುಂಞಿ ಮೇನಾಲ, ಇಬ್ರಾಹಿಂ ಪಳ್ಳತ್ತೂರು ಮೊದಲಾದವರು ಉಪಸ್ತಿತರಿದ್ದರು.


ಇದೇ ಸಂದರ್ಭದಲ್ಲಿ ನೂತನ ದರ್ಗಾ ಕಟ್ಟ ಕಾಮಗಾರಿಗೆ ರೂ. ೫೦ ಸಾವಿರ ಅನುದಾನವನ್ನು ನೀಡುವುದಾಗಿ ಶಾಸಕರು ಭರವಸೆ ನೀಡಿದರು.ಜಮಾತ್ ಕಮಿತಿ ವತಿಯಿಂದ ಶಾಸಕರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ಮುಂದಿನ ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಜು.18,19 ರಂದು ರೆಡ್‌ ಅಲರ್ಟ್‌ ಘೋಷಣೆ

Posted by Vidyamaana on 2024-07-17 17:54:29 |

Share: | | | | |


ಮುಂದಿನ ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಜು.18,19 ರಂದು ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು: ಮುಂದಿನ ಎರಡು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್‌ ಅಲರ್ಟ್‌ ಘೋಷಿಸಿದೆ.

ಬೆಳ್ತಂಗಡಿ : ಸವಣಾಲು ಎರಡು ಬೈಕ್ ಗಳ ನಡುವೆ ಅಪಘಾತ ಹೆನ್ರಿ ಡಿಸೋಜಾ ಸ್ಥಳದಲ್ಲಿಯೇ ಮೃತ್ಯು, ಇನ್ನೊಬ್ಬರಿಗೆ ಗಂಭೀರ ಗಾಯ

Posted by Vidyamaana on 2023-03-30 08:41:43 |

Share: | | | | |


ಬೆಳ್ತಂಗಡಿ : ಸವಣಾಲು ಎರಡು  ಬೈಕ್ ಗಳ ನಡುವೆ ಅಪಘಾತ  ಹೆನ್ರಿ ಡಿಸೋಜಾ ಸ್ಥಳದಲ್ಲಿಯೇ ಮೃತ್ಯು, ಇನ್ನೊಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ : ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ, ಇನ್ನೋರ್ವ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಸವಣಾಲಿನಲ್ಲಿ  ಮಾ 30 ರಂದು ನಡೆದಿದೆ .

ಬೆಳ್ತಂಗಡಿ ತಾಲೂಕಿನ ಸವಣಾಲು ಮಸೀದಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಅಳದಂಗಡಿಯ ಕುರ್ದಲಬೆಟ್ಟು ನಿವಾಸಿ ಹೆನ್ರಿ ಡಿಸೋಜಾ(62) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ಕರುಣಾಕರ ಹೆಗ್ಡೆ (60) ಗಂಭೀರ ಗಾಯಗೊಂಡಿದ್ದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇಸ್ಪೆಕ್ಟರ್  ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Recent News


Leave a Comment: