Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58
ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ.
ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ
ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.
Posted by Vidyamaana on 2023-12-03 19:41:12 |
ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆ ಮಾಡಿಕೊಂಡವರು.
ಬಂಗ್ಲೆಗುಡ್ಡೆ ಮನೆಯ ಶಂಕರ ಅವರು ಸುಮಾರು 5 ವರ್ಷಗಳ ಹಿಂದೆ ದೋಳಂತೋಡಿ ಎಂಬಲ್ಲಿ ಜಾಗ ಖರೀದಿ ಮಾಡಿ ಸೊಸೈಟಿ ಮತ್ತು ಇತರ ಸಂಘಗಳಲ್ಲಿ ಸಾಲ ಮಾಡಿದ್ದರು. ಇತ್ತೀಚೆಗೆ ಸಾಲದ ಬಗ್ಗೆ ಹಾಗೂ ಅದನ್ನು ಕಟ್ಟುವ ಬಗ್ಗೆ ಯೋಚನೆ ಮಾಡುತ್ತಿದ್ದು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು ಎನ್ನಲಾಗಿದೆ. ಡಿ.3ರಂದು ಮನೆಯವರು ಮಲಗಿದ್ದಾಗ ಮನೆಯ ಒಳಗಡೆಯೇ ಬೈರಸನ್ನೇ ನೇಣಾಗಿ ಬಳಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮರುದಿನ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಕ್ಷಮಿಸು ವನಿತಾ:
ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ, ನನ್ನ ಸಾವಿಗೆ ನಾನೇ ಕಾರಣ. ಕ್ಷಮಿಸು ವನಿತಾ. ಮಕ್ಕಳನ್ನು ನೋಡಿಕೋ ಎಂಬುದಾಗಿ ಬರೆದಿದ್ದರು. ಮೃತರ ಪತ್ನಿ ವನಿತಾ ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2024-04-01 16:31:44 |
ಪುತ್ತೂರು: ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.
ಅಬ್ಬಾಸ್ ಫೈಝಿ ಪುತ್ತಿಗೆ ಪ್ರಾರ್ಥನೆ ನೆರವೇರಿಸಿ, ಪದ್ಮರಾಜ್ ಗೆಲುವಿಗೆ ಶುಭಹಾರೈಸಿದರು.
ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ನಮ್ಮ ಅಭ್ಯರ್ಥಿ ಪೇಟೆಯಲ್ಲಿ ಬೆಳೆದವರಲ್ಲ. ಹಳ್ಳಿಯ ಜೀವನ ಕಂಡವರು. ಕಷ್ಟ, ಬಡತನದಲ್ಲೇ ಬೆಳೆದು ಬಂದಿದ್ದಾರೆ. ಆದ್ದರಿಂದ ಜನರ ಸಮಸ್ಯೆಗಳಿಗೆ ಸರಿಯಾದ ಸ್ಪಂದನೆ ಮಾಡುವವರು. ಆದ್ದರಿಂದ ಅವರನ್ನು ಗೆಲ್ಲಿಸಿಕೊಡಬೇಕು. ಇದಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ. ನೀವೆಲ್ಲಾ ಜನರ ಮನೆಗೆ ಹೋಗಿ, ಮತ ಕೇಳಿದ ಕಾರಣ ನಾನು ಶಾಸಕನಾಗುವಂತಾಯಿತು. ಅದೇ ರೀತಿ ಪದ್ಮರಾಜ್ ಅವರನ್ನು ಅತ್ಯಧಿಕ ಮತದಿಂದ ಗೆಲ್ಲಿಸಿಕೊಡಬೇಕು ಎಂದರು.
ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ಚುನಾವಣೆ ಎಂದ ಮಾತ್ರಕ್ಕಷ್ಟೇ ಎಲ್ಲಾ ಪ್ರಾರ್ಥನಾಲಯಗಳಿಗೆ ತೆರಳುತ್ತಿಲ್ಲ.
Posted by Vidyamaana on 2023-10-25 14:56:33 |
ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾದರು. ಇದಾದ ಬಳಿಕ ಎಲ್ಲೆಲ್ಲೂ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ತಮ್ಮ ವಿರುದ್ಧ ಆರೋಪ ಕೇಳಿ ಬಂದ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರು ಈ ಆರೋಪವನ್ನು ನಿರಾಕರಿಸಿದ್ದು, ಅದು ಅಸಲಿ ಹುಲಿ ಉಗುರಲ್ಲ, ನಕಲಿ ಉಗುರು ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಅವರು, “ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ” ಎಂದಿದ್ದಾರೆ.
“ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ
Posted by Vidyamaana on 2024-04-15 13:37:24 |
ವಿಟ್ಲ: ಪುಣಚ ಗ್ರಾಮದ ಬರೆಂಜ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತು ಕುಸಿತವಾಗಿ 7ಮಂದಿಗೆ ಗಾಯವಾಗಿದೆ.
ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಗ್ರಿಂಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿದ ಹಿನ್ನಲೆಯಲ್ಲಿ ಮೇಲ್ಭಾಗದ ಸಂಪೂರ್ಣ ಕಾಂಗ್ರೀಟ್ ವ್ಯವಸ್ಥೆ ಕುಸಿತವಾಗಿದೆ.
Posted by Vidyamaana on 2023-05-01 05:37:43 |
ಪುತ್ತೂರು: ಕಳೆದ 5 ವರ್ಷಗಳಲ್ಲಿ ಬಿಜೆಪಿ ಮಾಡಿದ ಅಭಿವೃದ್ದಿ ಕೆಲಸವನ್ನು ಜನತೆಗೆ ತಿಳಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಸವಾಲು ಹಾಕಿದರು. ಅಲ್ಲೊ ಇಲ್ಲೋ ಕೆಲವು ಕಡೆ ರಸ್ತೆಗೆ ಡಾಮಾರು,ಸಿಮೆಂಟ್ ಹಾಕಿದ್ದನ್ನು ಬಿಟ್ಟರೆ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆಯೇ . ಅಕ್ರಮ ಸಕ್ರಮ ಕಡತಗಳನ್ನು ಹಣ ಕೊಡದೆ ವಿಲೇವಾರಿ ಮಾಡಿದ್ದಾರ? ಬಡವರ ಕಣ್ಣೀರೊರೆಸುವ ಕೆಲಸವನ್ನು ಬಿಜೆಪಿ ಮಾಡಿಯೇ ಇಲ್ಲ. 40% ಕಮಿಷನ್ ಹೊಡೆಯುವ ಉದ್ದೇಶದಿಂದ ಹೆಚ್ಚು ಅನುದಾನವನ್ನು ರಸ್ತೆಗೆ ಬಳಕೆ ಮಾಡಲಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಮನೆ ಮಂಜೂರು ಮಾಡಿಸಿಲ್ಲ. ಸಾವಿರಾರು ಕುಟುಂಬಗಳು ಸರಕಾರದ ವಸತಿ ಯೋಜನೆಯಲ್ಲಿ ಮನೆ ನಿವೇಶನಕ್ಕೆ ಅರ್ಜಿ ಹಾಕಿದರೂ ಬಿಜೆಪಿ ಸರಕಾರ ಮನೆ ನೀಡಿಲ್ಲ ಇದು ಬಡವರಿಗೆ ಮಾಡಿದ ಮಹಾದ್ರೋಹವಾಗಿದೆ ಎಂದು ಹೇಳಿದರು. ಸಭೆಯಲ್ಲಿ ಕೆಪಿಸಿ ಲಸ ಸದಸ್ಯಎಂ ಎಸ್ ಮಹಮ್ಮದ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷ ಪ್ರವೀಣ್ಚಂದ್ರ ಆಳ್ವ, ಪೆರುವಾಯಿ ಗ್ರಾಪಂ ಮಾಜಿ ಅಧ್ಯಕ್ಷೆ ಪುಷ್ಪಾ, ಬ್ಲಾಕ್ ಅಧ್ಯಕ್ಷರಾದ ಡಾ.ರಾಜರಾಂ ಕೆ ಬಿ, ವೇದನಾಥ ಸುವರ್ಣ,ಅಳಿಕೆ ಗ್ರಾಪಂ ಉಪಾಧ್ಯಕ್ಷ ಜಗದೀಶ್ ಶೆಟ್ಟಿ, ಅಳಿಕೆ ಗ್ರಾಪಂ ಮಾಜಿ ಅಧ್ಯಕ್ಷ ಪದ್ಮನಾಭ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
Posted by Vidyamaana on 2024-05-29 22:29:32 |
ದಾವಣಗೆರೆ:- ಚನ್ನಗಿರಿ ಲಾಕಪ್ ಡೆತ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಆದಿಲ್ ಸಾವಿನ ರಹಸ್ಯ ಬಯಲಾಗಿದೆ.ಠಾಣೆಗೆ ಕರೆತಂದು 7 ನಿಮಿಷದೊಳಗೆ ಆರೋಗ್ಯದಲ್ಲಿ ಏರುಪೇರು ಆಗಿ ಆದಿಲ್ ಮೃತಪಟ್ಟಿದ್ದಾನೆ.