ಪರೀಕ್ಷೆಯಲ್ಲಿ ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ಸುದ್ದಿಗಳು News

Posted by vidyamaana on 2024-07-08 08:41:02 |

Share: | | | | |


ಪರೀಕ್ಷೆಯಲ್ಲಿ ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನಿಟ್ಟುಕೊಂಡು ಸಾಮೂಹಿಕ ನಕಲು ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೇವಲ ಮಕ್ಕಳಲ್ಲ ಶಿಕ್ಷಕರೂ ಅವರಿಗೆ ನೆರವಾಗುತ್ತಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಇಟ್ಟುಕೊಂಡು ಸಾಮೂಹಿಕ ನಕಲು(Mass Cheating) ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಘಟನೆ ಸಿಸಿಟಿವಿಯಲ್ಲಿ ಬಯಲಾಗಿದೆ. ಜುಲೈ 5 ರಂದು ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಎಸ್ ಡಿಎಂ ವಿಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಅವರು ತನಿಖೆಗಾಗಿ ಸ್ಥಳಕ್ಕೆ ಬಂದರು ಆದರೆ ಅಲ್ಲಿ ಎಲ್ಲವೂ ಸಾಮಾನ್ಯವಾಗಿತ್ತು. ಇದಾದ ಬಳಿಕ ವಿಡಿಯೋವೊಂದು ಹೊರಬಿದ್ದಿದ್ದು, ನಂತರ ವಿಷಯ ಬೆಳಕಿಗೆ ಬಂದಿದೆ.

ಪರೀಕ್ಷಾ ಪತ್ರಿಕೆಗಳಲ್ಲಿನ ಅಕ್ರಮಗಳು ಮತ್ತು ಸೋರಿಕೆಗಳ ಬಗ್ಗೆ ದೇಶದಲ್ಲಿ ಕೋಲಾಹಲವಿದೆ, ಈ ನಡುವೆ ಈ ಘಟನೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ತರಗತಿ ಕೊಠಡಿಯಲ್ಲಿ ಪರೀಕ್ಷೆ ನಡೆಯುವಾಗ ಹಲವು ಮಕ್ಕಳು ಗುಂಪು ಕಟ್ಟಿಕೊಂಡು ಬಹಿರಂಗವಾಗಿ ನಕಲು ಮಾಡುತ್ತಿದ್ದರು. ಅಲ್ಲಿ ಶಿಕ್ಷಕರೂ ಇದ್ದರು. ಆದರೆ ನಕಲು ನಿಲ್ಲಿಸುವ ಬದಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಬಿಎ ಮತ್ತು ಬಿಎಸ್ಸಿ ಪರೀಕ್ಷೆಗಳು ಅಲ್ಲಿ ನಡೆಯುತ್ತಿತ್ತು, ಈ ಪರೀಕ್ಷೆಗಳ ಕೇಂದ್ರವನ್ನು ದಾಮೋಹ್ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳು ಅದೇ ಶಾಲೆಯ ತರಗತಿ ಕೊಠಡಿಯಲ್ಲಿದೆ ಎಂದು ಹೇಳಲಾಗಿದೆ.

ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನು ತೆರೆದು ನಕಲು ಮಾಡುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಎಸ್‌ಡಿಎಂ ಭಿಂಡ್ ಕಲೆಕ್ಟರ್ ಸಂದೀಪ್ ಶ್ರೀವಾಸ್ತವ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರದ ಅಧ್ಯಕ್ಷರು ಹಾಗೂ ಪ್ರಾಂಶುಪಾಲರ ಶಾಮೀಲಾಗಿರುವುದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆಯೂ ಮಾತನಾಡಿದರು. ಇದೀಗ ಆಲಂಪುರದ ಹೈಯರ್ ಸೆಕೆಂಡರಿ ಶಾಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಮಾಡಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ದುರ್ಗಾಪ್ರಸಾದ್ ಸರಾಫ್, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸ್ವಯಂ ಪ್ರಭಾ ಕಾಲೇಜಿನ ವಿದ್ಯಾರ್ಥಿಗಳೂ ದಾಮೋಹ್ ಕೇಂದ್ರದಲ್ಲಿ ನಕಲು ಮಾಡುತ್ತಿದ್ದು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.

 Share: | | | | |


ಮಾ 10 ಡಿವೈಎಸ್ಪಿ ನೇತೃತ್ವದಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ ಜಾಥಾ

Posted by Vidyamaana on 2024-03-07 21:26:06 |

Share: | | | | |


ಮಾ 10  ಡಿವೈಎಸ್ಪಿ ನೇತೃತ್ವದಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ ಜಾಥಾ

ಪುತ್ತೂರು: ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ಪೊಲೀಸ್ ರನ್ 2024 ಮಾರ್ಚ್ 10ರಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ.

ಸೇ ಯಸ್ ಟು ಲೈಫ್, ನೋ ಟು ಡ್ರಗ್ಸ್ ಎಂಬ ಹೆಸರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಜಾಗೃತಿ ಜಾಥಾ ಹಮ್ಮಿಕೊಂಡಿದೆ.

ದರ್ಬೆ ಫಾ. ಪತ್ರಾವೋ ವೃತ್ತದಿಂದ ಆರಂಭಗೊಳ್ಳುವ ಕರ್ನಾಟಕ ಪೊಲೀಸ್ ರನ್ 2024 ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಸಮಾಪನಗೊಳ್ಳಲಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಅವರು ನೇತೃತ್ವ ವಹಿಸಲಿದ್ದು, ಅಡಿಷನಲ್ ಎಸ್ ಪಿ, ಹಾಗೂ ,ಡಿವೈಎಸ್ಪಿ ಅರುಣ್ ನಾಗೇಗೌಡ  ಉಪಸ್ಥಿತರಿರುವರು. ಪುತ್ತೂರು ನಗರ ಪೊಲೀಸ್ ಠಾಣೆ, ಟ್ರಾಫಿಕ್ ಠಾಣೆ, ಮಹಿಳಾ ಪೊಲೀಸ್ ಠಾಣೆಯ ಪೊಲೀಸರ ಜೊತೆಗೆ ವಿವೇಕಾನಂದ ಕಾಲೇಜು, ಸಂತ ಫಿಲೋಮಿನಾ, ಉಪ್ಪಿನಂಗಡಿ ಕಾಲೇಜು, ಸಂಪ್ಯ ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳು ಪೊಲೀಸ್ ರನ್ನಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸೆ 24 ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞದ ಮಹಾಜಪ ಶತರುದ್ರಾಭಿಷೇಕ ಧಾರ್ಮಿಕ ಕಾರ್ಯಕ್ರಮ

Posted by Vidyamaana on 2023-09-23 14:33:09 |

Share: | | | | |


ಸೆ 24 ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞದ ಮಹಾಜಪ ಶತರುದ್ರಾಭಿಷೇಕ ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಸೆ.9ರಿಂದ ಸೀಮೆ, ಪರವೂರಿನಾದ್ಯ೦ತ ಮನೆ ಮನೆಯಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞದ ಮಹಾಜಪ ಯಜ್ಞ ಮತ್ತು ಶತರುದ್ರಾಭಿಷೇಕ ಹಾಗು ಧಾರ್ಮಿಕ ಕಾರ್ಯಕ್ರಮ ಸೆ.24ರಂದು ಬೆಳಿಗ್ಗೆ ಗಂಟೆ 9ರಿಂದ ಶ್ರೀ ಮಹಾಲಿಂಗೇಶ್ವರ


ದೇವಸ್ಥಾನದಲ್ಲಿ ಜರುಗಲಿದೆ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್‌ ಮುಳಿಯ ತಿಳಿಸಿದ್ದಾರೆ.


ಅಂದು ಬೆಳಿಗ್ಗೆ ಮಹಾಜಪ ಮತ್ತು ಸಂಖ್ಯೆ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.ದೇವಳದಲ್ಲಿ ಪ್ರತ್ಯೇಕವಾಗಿ ತೆರೆಯಲಾದ 1 ಸೇವಾ ಕೌಂಟರ್‌ನಲ್ಲಿ ಜಪಯಜ್ಞದಲ್ಲಿ ಸ್ವಯಂ ಭಾಗಿಗಳಾದ ಭಕ್ತರು ಮತ್ತು ತಂಡಗಳು ಕಾರ್ಡ್‌ಗಳನ್ನು ದಾಖಲಿಸಿ ಜಪಯಜ್ಞಕ್ಕೆ ಬಳಸಿದ ನಾಣ್ಯಗಳ ಮೊತ್ತವನ್ನು ತಿಳಿಸಿ ಸೇವಾ ರಶೀದಿ ಪಡೆಯಬೇಕು.ದೇವಳದ ರಾಜಗೋಪುರದಲ್ಲಿ ಜಪಯಜ್ಞ ಧಾರ್ಮಿಕ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಅಲ್ಲಿ ವೈದಿಕರುಗಳಿಗೆ ಅಭಿಮುಖವಾಗಿ ಭಕ್ತರು ಕುಳಿತು 108 ಗುಣಕಗಳಲ್ಲಿ ಜಪಮಾಡುವುದು. ಕನಿಷ್ಟ 108 ಜಪಯಜ್ಞ ಪೂರ್ಣಗೊಳಿಸಿದ ಭಕ್ತರು ಸರತಿ ಸಾಲಿನಲ್ಲಿ ದೇವಳಕ್ಕೆ ಪ್ರವೇಶಿಸಿ ಪ್ರದಕ್ಷಿಣೆ ಬ0ದು ಒಳಾಂಗಣದಲ್ಲಿ ಸೂಚಿಸಿದ ಸಮರ್ಪಣೆ ಮಂಟಪದಲ್ಲಿ ಜಪಯಜ್ಞ ನಾಣ್ಯಗಳನ್ನು ಸಮರ್ಪಣೆ ಮಾಡಿ ಶ್ರೀ ದೇವರ ದರ್ಶನ ಪಡೆಯಬೇಕೆಂದು ಅವರು ಹೇಳಿದರು.


ಜಪಯಜ್ಞ ಪ್ರಸಾದ ವಿತರಣೆ: ಜಪಯಜ್ಞದ ಪ್ರಸಾದ ಕೌಂಟರ್ ಅನ್ನು ದೇವಳದ ಒಳಾಂಗಣದ ಗೋಪುರದಲ್ಲಿ ವ್ಯವಸ್ಥೆ ಮಡಲಾಗಿದ್ದು, ಪ್ರಸಾದ ಸ್ವೀಕರಿಸಿದವರು ದೇವಳದ ಎದುರು ಗದ್ದೆಯಲ್ಲಿರುವ ಸಾರ್ವಜನಿಕ ಗಣೇಶೋತ್ಸವ ಪೆಂಡಾಲ್‌ನಲ್ಲಿ ಭಕ್ತರಿಗೆ ಅನ್ನಪ್ರಸಾದ ವಿತರಣೆ ನಡೆಯಲಿದೆ ಎಂದು ಕೇಶವಪ್ರಸಾದ್‌ ಮುಳಿಯ ತಿಳಿಸಿದ್ದಾರೆ.

ರಣರೋಚಕ ಪಂದ್ಯದಲ್ಲಿ ಗೆದ್ದುಬೀಗಿದ ಆಸೀಸ್‌! ಗೆಲುವಿನ ಹೊಸ್ತಿಲಲ್ಲಿ ಎಡವಿದ ಕಿವೀಸ್‌

Posted by Vidyamaana on 2023-10-29 11:01:02 |

Share: | | | | |


ರಣರೋಚಕ ಪಂದ್ಯದಲ್ಲಿ ಗೆದ್ದುಬೀಗಿದ ಆಸೀಸ್‌! ಗೆಲುವಿನ ಹೊಸ್ತಿಲಲ್ಲಿ ಎಡವಿದ ಕಿವೀಸ್‌

ಧರ್ಮಶಾಲಾ :ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್‌ (AUS vs NZ) ನಡುವಿನ ವಿಶ್ವಕಪ್‌ 2023ರ 27ನೇ ಪಂದ್ಯದಲ್ಲಿ ಕಿವೀಸ್‌ ವಿರುದ್ಧ ಆಸೀಸ್‌ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಆಸೀಸ್‌ ವಿಶ್ವಕಪ್‌ ಸೆಮಿ ಫೈನಲ್‌ ಹಾದಿ ಸುಲಭವಾಗಿದೆ. ಇನ್ನು, ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 49.2 ಓವರ್ ಗಳಲ್ಲಿ 388 ರನ್ ಗಳಿಗೆ ಆಲೌಟಾಯಿತು.ಈ ಟಾರ್ಗೆಟ್‌ ಬೆನ್ನಟ್ಟಿದ ನ್ಯೂಜಿಲ್ಯಾಂಡ್‌ ತಂಡ ಉತ್ತಮವಾಗಿ ಬ್ಯಾಟಿಂಗ್‌ ಮಾಡಿದರೂ ಸಹ ಅಂತಿಮ ಹಂತದಲ್ಲಿ ಎಡವಿದ ಕಾರಣ ಗೆಲ್ಲುವ ಅವಕಾಶವನ್ನು ಕಳೆದುಕೊಂಡರು.

ವಿಡಿಯೋ ನೋಡಲು ಕ್ಲಿಕ್ ಮಾಡಿ....ರಣರೋಚಕ ಪಂದ್ಯದಲ್ಲಿ ಗೆದ್ದುಬೀಗಿದ ಆಸೀಸ್‌! ಗೆಲುವಿನ ಹೊಸ್ತಿಲಲ್ಲಿ ಎಡವಿದ ಕಿವೀಸ್‌

ಅಲ್ಲದೇ ಕರ್ನಾಟಕ ಮೂಲದ ಕಿವೀಸ್‌ ಆಟಗಾರ ರಚಿನ್‌ ರವೀಂದ್ರ ಶತಕದ ಆಟವೂ ತಂಡದ ಗೆಲುವಿಗೆ ಸಹಾಕವಾಗಲಿಲ್ಲ. ಅಂತಿಮವಾಗಿ ನ್ಯೂಜಿಲ್ಯಾಂಡ್‌ ತಂಡವು 50 ಓವರ್‌ಗೆ 9 ವಿಕೆಟ್ ನಷ್ಟಕ್ಕೆ 383 ರನ್‌ ಗಳಿಸಿತು. ಈ ಮೂಲಕ 5 ರನ್‌ಗಳಿಂದ ಸೋಲನ್ನಪ್ಪಿತು.


ಭರ್ಜರಿ ಶತಕ ಸಿಡಿಸಿದ್ದ ರಚಿನ್‌ ರವೀಂದ್ರ:


ನ್ಯೂಜಿಲೆಂಡ್ ಪರ 6 ತಿಂಗಳ ಹಿಂದೆಯಷ್ಟೇ ಪದಾರ್ಪಣೆ ಮಾಡಿದ ಆಟಗಾರ ಭರ್ಜರಿ ಶತಕ ಸಿಡಿಸಿ ಮಿಂಚಿದರು. ಕಾಂಗರೂ ತಂಡದ ವಿರುದ್ಧ ಪಂದ್ಯದ ಮೂಲಕ ವಿಶ್ವಕಪ್‌ನಲ್ಲಿ ಎರಡನೇ ಶತಕ ಸಿಡಿಸಿದ ರಚಿನ್ ರವೀಂದ್ರ ಮತ್ತೊಮ್ಮೆ ಅಬ್ಬರಿಸಿದರು. ರಚಿನ್ ರವೀಂದ್ರ ಆಸ್ಟ್ರೇಲಿಯದ ಮೇಲೆ ಪ್ರಾಬಲ್ಯ ಮೆರೆದ ಏಕೈಕ ಬ್ಯಾಟ್ಸ್‌ಮನ್. ಇದರ ಹೊರತಾಗಿ ಡೆರಿಲ್ ಮಿಚೆಲ್ ಅರ್ಧಶತಕ ಇನಿಂಗ್ಸ್ ಆಡಿದರು.ರವೀಂದ್ರ ಅಂಗದ ಹಾಗೆ ಇನ್ನೊಂದು ತುದಿಯಲ್ಲಿ ಹೆಪ್ಪುಗಟ್ಟಿದ. ಅವರು ಕೇವಲ 89 ಎಸೆತಗಳಲ್ಲಿ 9 ಬೌಂಡರಿ ಮತ್ತು 5 ಗಗನಚುಂಬಿ ಸಿಕ್ಸರ್‌ಗಳ ಸಹಾಯದಿಂದ 116 ರನ್ ಗಳಿಸಿದರು. ಆದರೆ ಅವರ ವಿಕೆಟ್ ನಂತರ ನ್ಯೂಜಿಲೆಂಡ್ ತಂಡ ಸಂಕಷ್ಟಕ್ಕೆ ಸಿಲುಕಿತು. ಇದಲ್ಲದೆ ಡೇರಿಲ್ ಮಿಚೆಲ್ ಮತ್ತು ಜೇಮ್ಸ್ ನೀಶಮ್ ತಮ್ಮ ಬಿರುಸಿನ ಅರ್ಧಶತಕಗಳ ಮೂಲಕ ಕಾಂಗರೂ ತಂಡಕ್ಕೆ ಕೊನೆ ಕ್ಷಣದವರೆಗೂ ಕಾಡಿದರು. ಈ ವೇಳೆ ಜೇಮ್ಸ್ ನೀಶಮ್ 39 ಎಸೆತದಲ್ಲಿ 3 ಸಿಕ್ಸ್‌ ಮತ್ತು 3 ಫೋರ್‌ ಮೂಲಕ 58 ರನ್‌ ಸಿಡಿಸುವ ಮೂಲಕ ಕಿವೀಸ್‌ ಪರ ಗೆಲುವಿನ ಆಸೆ ಚಿಗುರಿಸಿದ್ದರು. ಆದರೆ ಇವರ ವಿಕೆಟ್ ಕಳೆದುಕೊಳ್ಳುತ್ತಿದ್ದಂತೆ ಗೆಲುವೂ ಸಹ ಕೈಜಾರಿತು. ಈ ಮೂಲಕ ತಂಡ 383 ರನ್‌ಗಳಿಗೆ ತನ್ನ ಇನ್ನಿಂಗ್ಸ್ ಕೊನೆಗೊಳಿಸಿತು.


ಭರ್ಜರಿ ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ:


ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆಸೀಸ್‌ ಭರ್ಜರಿ ಬ್ಯಾಟಿಂಗ್‌ ಮೂಲಕ ಬೃಹತ್‌ ಸ್ಕೋರ್‌ ಕಲೆಹಾಕುವಲ್ಲಿ ಯಶಸ್ವಿಯಾದರು. ಆಸೀಸ್‌ ಪರ ಟ್ರಾವಿಸ್ ಹೆಡ್ (67 ಎಸೆತಗಳಲ್ಲಿ 109; 10 ಬೌಂಡರಿ, 7 ಸಿಕ್ಸರ್), ಡೇವಿಡ್ ವಾರ್ನರ್ (65 ಎಸೆತಗಳಲ್ಲಿ 81; 5 ಬೌಂಡರಿ, 6 ಸಿಕ್ಸರ್) ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ (24 ಎಸೆತಗಳಲ್ಲಿ 41; 5 ಬೌಂಡರಿ, 2 ಸಿಕ್ಸರ್) ಮಿಂಚಿದರು.ಬ್ಯಾಟ್ಸ್‌ಮನ್‌ಗಳು. ಕೊನೆಯಲ್ಲಿ ಜೋಸ್ ಇಂಗ್ಲಿಸ್ (28 ಎಸೆತಗಳಲ್ಲಿ 38 ರನ್) ಮತ್ತು ಪ್ಯಾಟ್ ಕಮಿನ್ಸ್ (14 ಎಸೆತಗಳಲ್ಲಿ 37 ರನ್) ಮಿಂಚಿದರು. ಮ್ಯಾಕ್ಸಿ 24 ಎಸೆತಗಳಲ್ಲಿ 41 ರನ್ ಗಳಿಸಿದರು. ಅಂತಿಮವಾಗಿ ಪ್ಯಾಟ್ ಕಮಿನ್ಸ್ ಮತ್ತು ಜೋಸ್ ಇಂಗ್ಲಿಸ್ ಕೂಡ ಮಿಂಚಿದ್ದರಿಂದ ಆಸ್ಟ್ರೇಲಿಯಾ ಬೃಹತ್ ಸ್ಕೋರ್ ದಾಖಲಿಸಿತು.

ಮಾವನಿಗೆ ಸೊಸೆಯಿಂದಲೇ ಹಲ್ಲೆ ; ಕೊಲೆಯತ್ನ ಕೇಸು ದಾಖಲು, ಆರೋಪಿತ ಕೆಇಬಿ ಅಧಿಕಾರಿ ಉಮಾಶಂಕರಿ ಪೊಲೀಸ್ ವಶಕ್ಕೆ

Posted by Vidyamaana on 2024-03-11 23:19:42 |

Share: | | | | |


ಮಾವನಿಗೆ ಸೊಸೆಯಿಂದಲೇ ಹಲ್ಲೆ ; ಕೊಲೆಯತ್ನ ಕೇಸು ದಾಖಲು, ಆರೋಪಿತ ಕೆಇಬಿ ಅಧಿಕಾರಿ ಉಮಾಶಂಕರಿ ಪೊಲೀಸ್ ವಶಕ್ಕೆ

ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆಯೇ ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ಬೆಳಕಿಗೆ ಬಂದಿದ್ದು, ಕಂಕನಾಡಿ ನಗರ ಠಾಣೆ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.


ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ(76) ಹಲ್ಲೆಗೀಡಾದವರು. ಇವರ ಮಗ ಪ್ರೀತಂ ಸುವರ್ಣ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆಯ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್ ಮಾಡಿಕೊಂಡಿದ್ದರು. ಎರಡು ದಿನಗಳ ಹಿಂದೆ ತನ್ನ ವೃದ್ಧ ತಂದೆಗೆ ಪತ್ನಿ ಉಮಾಶಂಕರಿ ವಾಕಿಂಗ್ ಸ್ಟಿಕ್ ನಲ್ಲಿ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಮಗನ ಗಮನಕ್ಕೆ ಬಂದಿತ್ತು. ಅದರಂತೆ, ಪ್ರೀತಂ ಸುವರ್ಣ ತನ್ನ ತಂಗಿ ಮೂಡುಬಿದ್ರೆಯಲ್ಲಿ ಗಂಡನ ಮನೆಯಲ್ಲಿ ನೆಲೆಸಿರುವ ಪ್ರಿಯಾಗೆ ವಿಷಯ ತಿಳಿಸಿದ್ದರು.ಅಲ್ಲದೆ, ಸಿಸಿಟಿವಿ ದೃಶ್ಯ ಮುಂದಿಟ್ಟು ಪೊಲೀಸ್ ದೂರು ಕೊಡುವಂತೆ ಸೂಚಿಸಿದ್ದರು. ಮಗಳು ಪ್ರಿಯಾ ಸುವರ್ಣ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಲ್ಲದೆ, ಹಲ್ಲೆಗೀಡಾದ ತಂದೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರೋಪಿತ ಮಹಿಳೆ ಉಮಾಶಂಕರಿ ಅತ್ತಾವರ ಕೆಇಬಿ ವಿಭಾಗದಲ್ಲಿ ಅಧಿಕಾರಿ ಹುದ್ದೆಯಲ್ಲಿದ್ದಾರೆ. ಸರಕಾರಿ ಅಧಿಕಾರಿ ಎನ್ನುವ ದರ್ಪದಿಂದಲೋ ಏನೋ ವೃದ್ಧ ವ್ಯಕ್ತಿಯನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಪೊಲೀಸರು ಕೊಲೆಯತ್ನ ಕೇಸು ದಾಖಲಿಸಿದ್ದು, ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.

ಮನೆಯೊಂದರಲ್ಲಿ ಮಹಿಳೆಯೊಂದಿಗೆ ಪೊಲೀಸ್​ ಕಾನ್ಸ್​ಟೇಬಲ್​ ನೇಣಿಗೆ ಶರಣು

Posted by Vidyamaana on 2024-05-21 21:20:10 |

Share: | | | | |


ಮನೆಯೊಂದರಲ್ಲಿ ಮಹಿಳೆಯೊಂದಿಗೆ ಪೊಲೀಸ್​ ಕಾನ್ಸ್​ಟೇಬಲ್​ ನೇಣಿಗೆ ಶರಣು

ಹುಬ್ಬಳ್ಳಿ; ಪೊಲೀಸ್ ಪೇದೆಯೊಬ್ಬರು ಮನೆಯೊಂದರಲ್ಲಿ ಮಹಿಳೆಯೊಬ್ಬರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾತೆ.. ಹುಬ್ಬಳ್ಳಿಯ ನವನಗರದ ಗಾಮನಗಟ್ಟಿ ಎಂಬಲ್ಲಿ ಈ ಘಟನೆ ನಡೆದಿದೆ..ಧಾರವಾಡ ಸಂಚಾರಿ ಠಾಣೆ ಪೇದೆ ಮಹೇಶ್ ಹೆಸರೂರು ಹಾಗೂ ವಿಜಯಲಕ್ಷ್ಮಿ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರು..

ಪ್ರೀತಿಸಿದ ಹುಡುಗಿ ಏಕಾಏಕಿ ಕೊಟ್ಲು ಕೈ, ನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

Posted by Vidyamaana on 2023-12-08 04:20:03 |

Share: | | | | |


ಪ್ರೀತಿಸಿದ ಹುಡುಗಿ ಏಕಾಏಕಿ ಕೊಟ್ಲು ಕೈ, ನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

ಬೆಂಗಳೂರು: ಪ್ರೀತಿಸಿದ ಹುಡುಗಿ ಏಕಾಏಕಿ ಪ್ರೀತಿಯನ್ನು ನಿರಾಕರಿಸಿ ಬಿಟ್ಟು ಹೋಗಿದ್ದಕ್ಕೆ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ.


ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ರಾಕೇಶ್ ಮೃತ ದುರ್ದೈವಿ. ರಾಕೇಶ್‌ ಐದಾರು ವರ್ಷದಿಂದ‌ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇಬ್ಬರು ಪಾರ್ಕ್‌, ಸಿನಿಮಾ ಎಂದು ಊರು ಊರು ತಿರುಗಿದ್ದರು. ಆದರೆ ಇತ್ತೀಚೆಗೆ ರಾಕೇಶ್‌ನನ್ನು ಯುವತಿ ಅವಾಯ್ಡ್‌ ಮಾಡಲು ಶುರು ಮಾಡಿದ್ದಳು.


ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದವಳು ಏಕಾಏಕಿ ದೂರಾಗಿದ್ದಳು. ಮಸೇಜ್‌, ಫೋನ್‌ ಕಾಲ್‌ಗೂ ರೆಸ್ಪಾನ್ಸ್‌ ಮಾಡುತ್ತಿರಲಿಲ್ಲ. ಈ ನಡುವೆ ಬೇರೆ ಯುವಕನ ಜತೆ ಮದುವೆಗೆ ಸಿದ್ಧತೆಯನ್ನು ನಡೆಸಿದ್ದಳು. ಈ ವಿಷಯ ತಿಳಿದು ನಿನ್ನೆ ಬುಧವಾರ ರಾಕೇಶ್ ನೇರ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ವೇಳೆ ರಾಕೇಶ್ ಹಾಗೂ ಯುವತಿ ನಡುವೆ ಗಲಾಟೆ ಆಗಿತ್ತು.


ಪ್ರೀತಿಸಿದವಳು ಮೋಸ ಮಾಡಿಬಿಟ್ಟಳೆಂದು ಮನನೊಂದಿದ್ದ ರಾಕೇಶ್‌, ಮನೆಗೆ ಬಂದವನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ಗಾಯಾಳು ರಾಕೇಶ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಬೆಂಕಿ ತೀವ್ರತೆಗೆ ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ಬುಧವಾರ ರಾತ್ರಿಯೇ ಮೃತಪಟ್ಟಿದ್ದಾನೆ. ರಾಕೇಶ್ ಕುಟುಂಬಸ್ಥರು ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ



Leave a Comment: