Posted by vidyamaana on 2024-03-23 10:38:46 |
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.
ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.
Posted by Vidyamaana on 2023-09-22 16:11:25 |
ಬೆಂಗಳೂರು ; ಧರ್ಮಸ್ಥಳದ ಬಳಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಅಂದು ಸ್ಥಳೀಯರು ರಕ್ಷಣೆ ಮಾಡಿದ್ದರು. ಆದ್ರೆ ಅದೇ ಯುವತಿ ಇದೀಗ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಈ ದುರ್ಘಟನೆ ನಡೆದಿದೆ.ಹದಿನೇಳು ವರ್ಷದ ವಿಜಯಲಕ್ಷ್ಮೀ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಖಿನ್ನತೆಗೆ ಒಳಗಾಗಿದ್ದು, ಕೆಲ ದಿನಗಳ ಹಿಂದೆ ನೇತ್ರಾವತಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ ಮಾಡಿದ್ದಳು. ಆದ್ರೆ ಅದನ್ನು ನೋಡಿದ ಸ್ಥಳೀಯರು ಆಕೆಯನ್ನು ರಕ್ಷಣೆ ಮಾಡಿದ್ದರು. ಅನಂತರ ವಿಜಯಲಕ್ಷ್ಮೀಗೆ ಬುದ್ಧಿವಾದ ಹೇಳಿದ್ದರು. ಅನಂತರ ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿ, ವಿಜಯಲಕ್ಷ್ಮೀಯನ್ನು ಬೆಂಗಳೂರಿಗೆ ಕಳುಹಿಸಿದ್ದರು.
ಧರ್ಮಸ್ಥಳದಿಂದ ಬೆಂಗಳೂರಿಗೆ ಬಂದಿದ್ದ ವಿಜಯಲಕ್ಷ್ಮೀ ಮತ್ತೆ ಅದೇ ಕೆಲಸ ಮಾಡಿದ್ದಾಳೆ. ಬ್ಯಾಟರಾಯನಪುರದ ಬ್ರೈಡ್ ಅಪಾರ್ಟ್ಮೆಂಟ್ನ ಟೆರೇಸ್ಗೆ ಹೋಗಿ ಅಲ್ಲಿಂದ ಹಾರಿ ಪ್ರಾಣ ಬಿಟ್ಟಿದ್ದಾಳೆ.
Posted by Vidyamaana on 2024-02-19 09:48:32 |
ಲಕ್ನೋ: ಪೊಲೀಸ್ ವಾಹನವನ್ನು ಬಳಸಿಕೊಂಡು ಇನ್ಸ್ಟಾಗ್ರಾಮ್ ರೀಲ್ಸ್ ಮಾಡಿದ ಯುವಕನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ರೀಲ್ಸ್ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಇಂದಿರಾಪುರಂ ಪ್ರದೇಶದಲ್ಲಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾಗ ಮೊಯಿನ್ ಖಾನ್ ಎಂಬಾತ ಖಾಲಿಯಿದ್ದ ಪೊಲೀಸ್ ವಾಹನವನ್ನು ಬಳಸಿಕೊಂಡು ಅದರಲ್ಲಿ ಕೂತು ಸ್ಟೈಲಿಸ್ಟ್ ಆಗಿ ರೀಲ್ಸ್ ಮಾಡಿದ್ದಾನೆ.
ಪೊಲೀಸ್ ವಾಹನ ಬಳಸಿ ರೀಲ್ಸ್; ವಿಡಿಯೋ ವೈರಲ್ ಬಳಿಕ ಯುವಕನ ಬಂಧನ
ಪೊಲೀಸ್ ವಾಹನದ ಸೀಟಿನಿಂದ ಕೆಳಗಿಳಿದು, ಕೋಲ್ಡ್ ಡ್ರಿಂಕ್ ಕುಡಿಯುತ್ತಾ ಬರುವ ದೃಶ್ಯಕ್ಕೆ ಮ್ಯೂಸಿಕ್ ವೊಂದನ್ನು ಹಾಕಿ ರೀಲ್ಸ್ ಮಾಡಿ ಫೆ.15 ರಂದು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ವೇಗದಲ್ಲಿ ವೈರಲ್ ಆಗಿದೆ.ಇಂದಿರಾಪುರಂನ ಕಣವಾಣಿ ಸೇತುವೆಯ ಬಳಿ ಟ್ರಾಫಿಕ್ ಜಾಮ್ ತೆರವುಗೊಳಿಸಲು ತೊಡಗಿದ್ದಾಗ, ಖಾಲಿ ಪೊಲೀಸ್ ವಾಹನವನ್ನು ಗಮನಿಸಿದ ಯುವಕ ಅದನ್ನು ಬಳಸಿ ರೀಲ್ ಮಾಡಿದ್ದಾರೆ. ವಿಡಿಯೋ ವೈರಲ್ ಆಗಿ ನಮ್ಮ ಗಮನಕ್ಕೆ ಬಂದ ಬಳಿಕ ಯುವಕನನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
Posted by Vidyamaana on 2024-01-06 15:01:18 |
ಸುಳ್ಯ : ಶ್ರೀರಾಮಚಂದ್ರನ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿದಿದ್ದು, ತಕ್ಷಣ ಬಂಧಿಸಬೇಕು ಎಂದು ಅರುಣ್ ಪುತ್ತಿಲ ಒತ್ತಾಯಿಸಿದ್ದಾರೆ.ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ , ಅಯೋಧ್ಯೆ ರಾಮಮಂದಿರ ಹಾಗೂ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ ನ ಬೆಳ್ಳಿಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಅದರಲ್ಲಿ ನಡುವಿನಲ್ಲಿದ್ದ ಶ್ರೀರಾಮ ದೇವರ ಸಹಿತ ರಾಮಮಂದಿರ ಲೋಕಾರ್ಪಣೆ ವಿಷಯವನ್ನು ಯಾರೋ ಕಿಡಿಗೇಡಿಗಳು ರಾತ್ರಿ ಹರಿದು ಹಾಕಿದ್ದಾರೆ.
ಹಿಂದೂಗಳ ಭಾವನೆ ಜೊತೆ ಆಟವಾಡುವ ಇಂತಹ ರಾಮವಿರೋಧಿಗಳನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಇಲ್ಲದಿದ್ದರೆ ಹಿಂದೂ ಸಮಾಜ ಹೋರಾಟಕ್ಕಿಳಿಯಬೇಕಾದಿತು ಎಂಬ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಅರುಣ್ ಕುಮಾರ್ ಪುತ್ತಿಲ ಆಗ್ರಹಿಸಿದ್ದಾರೆ.
Posted by Vidyamaana on 2023-09-18 09:15:17 |
ಬಜಪೆ: ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ಬಂಗ್ಲೆಗುಡ್ಡೆಯಿಂದ ಗುರುಪುರ ಪೇಟೆಗೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರಣ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ರವಿವಾರ ಮಧ್ಯಾಹ್ನ 2 ಗಂಟೆಗೆ ಸಂಭವಿಸಿದೆ.ಅರ್ಕುಳ ತುಪ್ಪೆಕಲ್ಲಿನ ಕುಟುಂಬವೊಂದು ಆಟೋ ರಿಕ್ಷಾ ಮೂಲಕ ಅದ್ಯಪಾಡಿ ದೇವಸ್ಥಾನಕ್ಕೆ ತೆರಳಿ ಹಿಂದಿರುತ್ತಿದ್ದ ವೇಳೆ ಗುರುಪುರ ಬಂಗ್ಲೆಗುಡ್ಡೆ ಇಳಿಜಾರು ರಸ್ತೆಯಾಗಿ ಅಣೆಬಳಿಯ ತಿರುವಿನಲ್ಲಿ ಆಟೋ ರಿಕ್ಷಾ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿತ್ತು. ಯುವತಿ ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಮೃತಪಟ್ಟು, ಚಾಲಕ ಸಹಿತ 5 ಮಂದಿ ಗಾಯಗೊಂಡಿದ್ದಾರೆ.ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ. ಪ್ರಸ್ತುತ ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.ವಿವಾಹ ನಿಶ್ಚಿತಾರ್ಥವಾಗಿತ್ತು
ಮೃತ ಯುವತಿ ಪ್ರಿಯಾ ಅವರಿಗೆ ವಿವಾಹ ನಿಶ್ಚಿತಾರ್ಥವಾಗಿದ್ದು, ಮುಂದಿನ ವರ್ಷ ಜ. 4ರಂದು ಮದುವೆಗೆ ದಿನ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮನೆಮಂದಿ ಮದುವೆಯ ಸಿದ್ಧತೆಗಳನ್ನು ಕೂಡ ಮಾಡಿಕೊಂಡಿದ್ದರು. ಈ ನಡುವೆ ದುರ್ಘಟನೆ ಸಂಭವಿಸಿದೆ.
Posted by Vidyamaana on 2024-06-07 16:03:32 |
ಪುತ್ತೂರು : ವಿವೇಕಾನಂದ ಕಾಲೇಜಿನ ಮಾಸ್ ಕಮ್ಯೂನಿಕೇಷನ್ ಮತ್ತು ಜರ್ನಲಿಸಂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ದಿವ್ಯಶ್ರೀ ವಿ. ರೈ ಮೊದಲ ರ್ಯಾಂಕ್ ಪಡೆದಿದ್ದಾರೆ.
ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ವಿದ್ಯಾರ್ಥಿನಿಯಾಗಿದ್ದ ದಿವ್ಯಶ್ರೀ ಕಳೆದ 2022-23ನೇ ಸಾಲಿನ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
Posted by Vidyamaana on 2023-06-08 16:48:08 |
ಬೆಂಗಳೂರು: ಜೀವನದಲ್ಲಿ ಇನ್ನುಮುಂದೆ ಜೊತೆಯಾಗಿ ಇರ್ತೀನಿ, ಕಣ್ಣಲ್ಲಿ ಕಣ್ಣಿಟ್ಟು ನೋಡ್ಕೋತೀನಿ ಎಂದು ಭರವಸೆ ನೀಡಿದ್ದ ಪ್ರೀತಿಸಿದ ಹುಡುಗನನ್ನು ನಂಬಿಕೊಂಡು ತುಮಕೂರಿನಿಂದ ಬೆಂಗಳೂರಿಗೆ ಬಂದ ಹುಡುಗಿಯ ಮೇಲೆ ಪ್ರೀತಿಸಿದ ಯುವಕ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಮಾಡಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಹೆಣ್ಣು ಮಕ್ಕಳಿಗೆ ಅಥವಾ ಮಹಿಳೆಯರಿಗೆ ಎಲ್ಲಿಗೆ ಹೋದರೂ ರಕ್ಷಣೆ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ತಂದೆ- ತಾಯಿಯನ್ನು ಬಿಟ್ಟು ಮತ್ತೊಬ್ಬ ವ್ಯಕ್ತಿಯನ್ನು ಹೆಣ್ಣು ನಂಬುವುದಾದರೆ ಅದು ಪ್ರೀತಿಸಿದ ಹುಡುಗ ಅಥವಾ ಗಂಡ ಮಾತ್ರ. ಆದರೆ, ಇಲ್ಲಿ ಜೀವನಪೂರ್ತಿ ನಿನ್ನ ಜೊತೆಗಿರ್ತೀನಿ ಎಂದು ಭರವಸೆ ನೀಡಿದ ಪ್ರೀತಿಸಿದ ಯುವಕನನ್ನು ನಂಬಿಕೊಂಡು ಬಂದ ಯುವತಿಯ ಮೇಲೆ ಅತ್ಯಾಚಾರ ನಡೆದು ಹೋಗಿದೆ. ಅದು ಕೂಡ, ಪ್ರೀತಿಸಿದ ಯುವಕ ತಾನು ಮಾತ್ರವಲ್ಲದೇ ತನ್ನ ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರ ಮಾಡಿದ್ದು, ಸಂತ್ರಸ್ತ ಯವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಗಿರಿನಗರದಲ್ಲಿ ಸ್ನೇಹಿತನ ಜೊತೆಗೂಡಿ ಅತ್ಯಾಚಾರ: ಯುವತಿಯ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ ಘಟನೆ ನಡೆದಿರುವುದು ಬೆಂಗಳೂರಿನ ಗಿರಿನಗರದ ಈರಣ್ಣಗುಡ್ಡೆಯಲ್ಲಿ. ಅತ್ಯಾಚಾರಕ್ಕೊಳಗಾದ ಯುವತಿ ತುಮಕೂರು ನಗರದವಳಾಗಿದ್ದು, ಪ್ಯಾರಾಮೆಡಿಕಲ್ ಅಭ್ಯಾಸ ಮಾಡುತ್ತಿದ್ದಳು. ಪ್ರೀತಿಸಿದ ಹುಡುಗಿಯ ಮೇಲೆ ಪ್ರಿಯಕರ ಹಾಗು ಸ್ನೇಹಿತನಿಂದ ಅತ್ಯಾಚಾರ ನಡೆದಿದೆ. ಪುರುಷೋತ್ತಮ್ ಹಾಗು ಚೇತನ್ ಬಂಧಿತ ಆರೋಪಿಗಳು. ಪುರುಷೋತ್ತಮ್ ಹಾಗು ಯುವತಿ ಒಂದು ವರ್ಷದಿಂದ ಲವ್ ಮಾಡುತ್ತಿದ್ದರು. ಮೂಲತಃ ತುಮಕೂರಿನ ನಿವಾಸಿಯಾದ ಯುವತಿ ಕಾಲೇಜಿನಲ್ಲಿ ಓದುತ್ತಿದ್ದು, ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು.