Posted by vidyamaana on 2024-07-25 06:35:41 |
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.
ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.
ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್ಐ ಹೇಳಿದ್ದಾರೆ.
Posted by Vidyamaana on 2023-03-09 04:54:22 |
ನವದೆಹಲಿ: ಮೆಟಾ ಒಡೆತನದ ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಆಗಿ ಸಾವಿರಾರು ಬಳಕೆದಾರರಿಗೆ ತೊಂದರೆಯುಂಟಾಗಿದೆ ಎಂದು ವರದಿಯಾಗಿದೆ.
ಸರ್ವರ್ ಸ್ಥಗಿತ ಟ್ರ್ಯಾಕಿಂಗ್ ವೆಬ್ಸೈಟ್ ಡೌನ್ ಡಿಟೆಕ್ಟರ್ ವರದಿ ಮಾಡಿರುವ ಪ್ರಕಾರ 46 ಸಾವಿರಕ್ಕೂ ಅಧಿಕ ಬಳಕೆದಾರರಿಗೆ ಇನ್ಸ್ಟಾಗ್ರಾಮ್ ಬಳಕೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಇದರಲ್ಲಿ 2000 ಕ್ಕೂ ಅಧಿಕ ಮಂದಿ ಅಮೆರಿಕಾದ ಬಳಕೆದಾರರು, 1000 ಕ್ಕೂ ಹೆಚ್ಚಿನ ಆಸ್ಟ್ರೇಲಿಯಾ, ಭಾರತದ ಬಳಕೆದಾರರಿಗೆ ಸರ್ವರ್ ಕನೆಕ್ಷನ್ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವರದಿ ಹೇಳಿದೆ
ಬೆಳಿಗ್ಗೆ 7 ಗಂಟೆಗೆ ಡೌನ್ ಡಿಟೆಕ್ಟರ್ ಔಟ್ಟೇಜ್ ಗ್ರಾಫ್ನಲ್ಲಿ ಸಮಸ್ಯೆ ಬಗ್ಗೆ ವರದಿಯಾಗಿದ್ದು ಬಳಿಕ ಏರಿಕೆ ಕಂಡಿತು
ಶೇ.50 ಮಂದಿಗೆ ಸರ್ವರ್ ಕನೆಕ್ಷನ್ ಸಮಸ್ಯೆ ಕಾಣಿಸಿಕೊಂಡಿದ್ದು, ಶೇ.20 ಮಂದಿಗೆ ಲಾಗಿನ್ ಮಾಡುವಾಗ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವರದಿ ತಿಳಿಸಿದೆ.
Posted by Vidyamaana on 2024-04-16 14:44:07 |
ಬೆಂಗಳೂರು; ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ 28 ಕ್ಕೆ 28 ಸೀಟೂ ಗೆಲ್ಲಬೇಕೆಂಬ ಪಣ ತೊಟ್ಟಿದೆ.. ಇತ್ತ ಕಾಂಗ್ರೆಸ್ ನಾವು ಕನಿಷ್ಟ 20 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದೆ.. ಆದ್ರೆ ಚುನಾವಣಾ ಪೂರ್ವ ಸಮೀಕ್ಷೆಗಳು ಮಾತ್ರ ದಿನಕ್ಕೊಂದು ಭವಿಷ್ಯ ಹೇಳುತ್ತಿವೆ..
ಒಂದು ಸಮೀಕ್ಷೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತೆ ಅಂತ ಹೇಳಿದ್ರೆ, ಇನ್ನೊಂದು ಸಮೀಕ್ಷೆ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುತ್ತೆ ಎಂದು ಹೇಳುತ್ತಿವೆ.
ಹಿಂದೆಂದೂ ಇಲ್ಲದ ರೀತಿ ಸಮೀಕ್ಷೆ;
ಯಾವುದೇ ಸಮೀಕ್ಷೆ ಆದರೂ ಒಂದೆರಡು ಸೀಟು ವ್ಯತ್ಯಾಸ ಇರುತ್ತದೆ.. ಫಲಿತಾಂಶವೇ ಉಲ್ಟಾ ಆಗುವ ರೀತಿಯಲ್ಲಿ ಯಾರೂ ಸಮೀಕ್ಷೆ ಮಾಡೋದಿಲ್ಲ.. ಆದ್ರೆ ಕರ್ನಾಟಕದಲ್ಲಿ ಈ ಬಾರಿ ಅಂತಹ ಸಮೀಕ್ಷಾ ವರದಿಗಳು ಹೊರಬರುತ್ತಿವೆ.. ಕೆಲ ಸಮೀಕ್ಷೆಗಳು ಬಿಜೆಪಿ ಹಾಗೂ ಜೆಡಿಎಸ್ 20-24 ಸ್ಥಾನಗಳವರೆಗೆ ಗೆಲ್ಲುತ್ತೆ ಎಂದು ಹೇಳುತ್ತಿವೆ.. ಆದ್ರೆ ಕೆಲವು ಸಂಸ್ಥೆಗಳು ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್ ಅತಿಹೆಚ್ಚು ಸ್ಥಾನ ಗಳಿಸುತ್ತೆ ಎಂದು ಹೇಳುತ್ತಿವೆ.. ಹೀಗಾಗಿ, ಜನಕ್ಕೆ ಹಾಗೂ ರಾಜಕೀಯ ಪಕ್ಷಗಳಿಗೆ ಇದು ಸಾಕಷ್ಟು ಕನ್ಪ್ಯೂಸ್ ಮಾಡುತ್ತಿದೆ.
Posted by Vidyamaana on 2023-11-29 11:38:52 |
ಕುಂದಾಪುರ: ಇಲ್ಲಿನ ಶೇಡಿಮನೆ ಗ್ರಾಮದ ಪಾಟ್ಲಮಕ್ಕಿಯಲ್ಲಿನ ನಾರಾಯಣ ಪೂಜಾರಿ (70) ಅವರು ಮೃತಪಟ್ಟ ಸುದ್ದಿ ಕೇಳಿ
ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬೈಕಿನಲ್ಲಿ ಆಗಮಿಸುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಹಾಗೂ ಇಂದಿರಾ ಅವರ ಏಕೈಕ ಪುತ್ರ ನಿತೀಶ್ ಪೂಜಾರಿ (20) ಮೃತ ಯುವಕ.
ಚಾಮರಾಜನಗರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ 2ನೆ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು ತಾಯಿ ಮನೆಯಲ್ಲಿ ಅಜ್ಜ ಮೃತಪಟ್ಟ ಸುದ್ದಿ ಕೇಳಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಗಮಿಸುವುದಾಗಿ ಹೇಳಿದ್ದ. ಅವಸರದಲ್ಲಿ ಊರಿಗೆ ಬರುವುದು ಬೇಡ ಎಂದು ಮನೆಯವರು ಹೇಳಿದ್ದರೂ ಎತ್ತಿ ಆಡಿಸಿದ ಅಜ್ಜನ ಮೇಲಿನ ಮೋಹದಿಂದ ತನ್ನ ಬೈಕಿನಲ್ಲಿ ಕುಂದಾಪುರಕ್ಕೆ ಹೊರಟಿದ್ದರು.
ರಸ್ತೆಗೆ ಬಿದ್ದು ಸಾವು
ಈ ಸಂದರ್ಭ ಚಾಮರಾಜನಗರ ತಾಲೂಕಿನ ಪಣ್ಯದಹಂಡಿ ಬಳಿ ರಸ್ತೆ ಮಧ್ಯದ ಹಂಪ್ ಅನ್ನು ಗಮನಿಸದೇ ಅಕಸ್ಮಾತ್ತಾಗಿ ರಸ್ತೆಗೆ ಬಿದ್ದು ಮೃತಪಟ್ಟಿದ್ದರು.
ಚಾಮರಾಜನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳಿಕ ಯುವಕನ ಮೃತದೇಹವನ್ನು ತಂದು ಶೇಡಿ ಮನೆಯಲ್ಲಿ (ತಾಯಿಯ ತಂದೆ ಮನೆ)ಅಜ್ಜ ಮೊಮ್ಮಗನ ಶವಸಂಸ್ಕಾರವನ್ನು ಜತೆಯಾಗಿ ನಡೆಸಲಾಯಿತು.
Posted by Vidyamaana on 2024-05-20 14:47:58 |
ಇರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಅವರ ನಿಧನಕ್ಕೆ ಐದು ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಇರಾನ್ನ ಸರ್ವೋಚ್ಚ ನಾಯಕ ಅಲಿ ಖಮೇನಿ ಘೋಷಿಸಿದ್ದಾರೆ. ಮೊದಲ ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ದೇಶದ ಕಾರ್ಯನಿರ್ವಾಹಕ ಶಾಖೆಯ ಮಧ್ಯಂತರ ಮುಖ್ಯಸ್ಥರಾಗಿ ನೇಮಕ ಮಾಡಿರುವುದನ್ನು ದೃಢಪಡಿಸಿದ್ದಾರೆ.ರೈಸಿ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಅಧ್ಯಕ್ಷೀಯ ಚುನಾವಣೆ ನಡೆಸಲು ಇರಾನ್ ಈಗ ಗರಿಷ್ಠ 50 ದಿನಗಳ ಅವಧಿಯನ್ನು ಹೊಂದಿದೆ.
Posted by Vidyamaana on 2023-09-18 21:07:30 |
ಪುತ್ತೂರು : 2023-24ನೇ ಸಾಲಿನ ಕಂಬಳ ವೇಳಾಪಟ್ಟಿಯಂತೆ ಇದೇ ನ.11ರಂದು ಗುರುಪುರ ಕಂಬಳದೊಂದಿಗೆ ಜೋಡುಕರೆ ಕಂಬಳ ಋತು ಆರಂಭಗೊಳ್ಳಲಿದೆ. 22 ಕಂಬಳಗಳು ವೇಳಾಪಟ್ಟಿಯಂತೆ ನಡೆಯಲಿದೆ. ಕೋಟಿ ಚೆನ್ನಯ ಜೋಡುಕರೆ ಕಂಬಳ 2024ರ ಜ .27ರಂದು ನಡೆಯಲಿದೆ. ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಮಾ.23ರಂದು ನಡೆಯಲಿದೆ.
Posted by Vidyamaana on 2024-06-06 12:38:36 |
ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿದರು.
ಬೆಂಗಳೂರಿನಲ್ಲಿ ಇಂದು ವಿಜಯೇಂದ್ರ ಭೇಟಿ ಮಾಡಿದ