Posted by vidyamaana on 2023-11-07 04:42:13 |
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Posted by Vidyamaana on 2023-04-20 03:27:37 |
ಮಂಗಳೂರು: ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ವ್ಯಕ್ತಿಯೋರ್ವ ಏಕವಚನದಲ್ಲಿ ಅವಾಚ್ಯವಾಗಿ ಬೈಯುವ ಆಡಿಯೋ ವೈರಲ್ ಆಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ನಳಿನ್ 2019ರ ಲೋಕಸಭಾ ಚುನಾವಣೆ ಯಲ್ಲಿ ಗೆದ್ದ ಸಂದರ್ಭ ಮುಸ್ಲಿಂ ಧರ್ಮಗುರು ಗಳು ತಮ್ಮ ಬೆಂಬಲಿಗರೊಂದಿಗೆ ನಳಿನ್ ಅವರಲ್ಲಿಗೆ ಆಗಮಿಸಿ ಹೂಗುತ್ಛ ನೀಡಿ ಅಭಿನಂದಿಸಿ
ಫೋಟೋ ತೆಗೆಸಿಕೊಂಡಿದ್ದರು.ಆದರೆ ಈಗ ಯಾರೋ ದುಷ್ಕರ್ಮಿ ಆ ಫೋಟೋವನ್ನು ಜಾಲತಾಣದಲ್ಲಿ ಹಾಕಿ ಅದರೊಂದಿಗೆ ನಳಿನ್ ಅವರಿಗೆ ಏಕವಚನದಲ್ಲಿ, ಅವಾಚ್ಯ ಶಬ್ದ ಗಳಿಂದ ಬೈಯುವ ಆಡಿಯೋ ವೈರಲ್ ಮಾಡಿ ದ್ದಾನೆ. ಈ ಬಗ್ಗೆ ಬಿಜೆಪಿ ಕಾನೂನು ಪ್ರಕೋಷ್ಠ ದಿಂದ ಪೊಲೀಸರಿಗೆ ದೂರು ನೀಡಲಾಗಿದೆ. ದುಷ್ಕರ್ಮಿಯನ್ನು ಪತ್ತೆ ಹಚ್ಚಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರನ್ನು ಒತ್ತಾಯಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೇಣವ ತಿಳಿಸಿದ್ದಾರೆ.
Posted by Vidyamaana on 2023-08-30 02:07:54 |
ಪುತ್ತೂರು: ಪುತ್ತೂರಿನಲ್ಲಿ ಶಾಸಕರ ಕಚೇರಿ ಲೋಕಾರ್ಪಣೆ ಆಗಿದೆ. ಇದಕ್ಕೆ ನಾವೆಲ್ಲ ಸಂತೋಷ ಪಡಬೇಕು. ಆದರೆ ಆ ಕಚೇರಿಗೆ ನಗರಸಭೆಯ ತೆರಿಗೆ ಹಣವನ್ನು ವಿನಿಯೋಗಿಸಿದ್ದು ಖಂಡನೀಯ. ಪುತ್ತೂರು ನಗರಸಭೆಯ ರೂ. 31ಲಕ್ಷ ವೆಚ್ಚ ಮಾಡಿ ಶಾಸಕರ ಐಶಾರಾಮಿ ಕಚೇರಿ ನಿರ್ಮಾಣ ಆಗಿದೆ. ಈ ಹಣವನ್ನು ನಗರಸಭೆಗೆ ಜಿಲ್ಲಾಧಿಕಾರಿಗಳು ಹಿಂದಿರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನ ಬಿಜೆಪಿ ನೇತೃತ್ವದಲ್ಲಿ ನಗರಸಭೆ ಸದಸ್ಯರೊಂದಿಗೆ ಪುತ್ತೂರು ನಗರಸಭೆಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಶಾಸಕ ಅಶೋಕ್ ರೈ ಅವರ ಕಚೇರಿ ಮಾಡಲು ಅನುದಾನ ಎಲ್ಲಿಂದ ಬಂತು ಎಂಬುದನ್ನು ಯಾರು ನೋಡಿರಿಲ್ಲ. ಪುತ್ತೂರಿನ ಇತಿಹಾಸದಲ್ಲಿ ಶಾಸಕರಾಗಿದ್ದ ಸದಾನಂದ ಗೌಡ, ಶಕುಂತಳಾ ಶೆಟ್ಟಿ, ಮಲ್ಲಿಕಾಪ್ರಸಾದ್, ನಾನು ಕೂಡಾ ಸೇರಿದಂತೆ ಯಾರು ಕೂಡಾ ಐಶಾರಾಮದ ಕಚೇರಿ ಮಾಡಿಲ್ಲ. ಜನಾಮಾನ್ಯರ ತೆರಿಗೆ ಹಣದಲ್ಲಿ ಕಚೇರಿ ಮಾಡದೆ ತಾಲೂಕು ಪಂಚಾಯತ್, ತಾಲೂಕು ಆಡಳಿತ ಸೌಧದಲ್ಲೇ ಕಚೇರಿ ಮಾಡಿದ್ದೆವು. ಜನಸಾಮಾನ್ಯರಿಗೆ ಸುಲಭವಾಗಿ ಶಾಸಕರು ಸಿಗಬೇಕೆಂಬ ನಿಟ್ಟಿನಲ್ಲಿ ಎಲ್ಲಾ ಕಡೆ ಸರಕಾರಿ ಕಚೇರಿಯಲ್ಲೇ ಮಾಡಲಾಗಿತ್ತು. ಆದರೆ ಪುತ್ತೂರು ಶಾಸಕರು ತಮ್ಮ ಕಚೇರಿಗೆ ನಗರಸಭೆಯ ರೂ. 31ಲಕ್ಷವನ್ನು ವಿನಿಯೋಗಿಸಿದ್ದಾರೆ. ಪುತ್ತೂರು ನಗರಸಭೆಯ ಜನರ ತೆರಿಗೆ ಹಣದಲ್ಲಿ ಈ ಕಚೇರಿಗೆವಿನಿಯೋಗ ಮಾಡುವ ಕೆಲಸದ ಬದಲು ಅದು ಪುತ್ತೂರಿನ ಅಭಿವೃದ್ಧಿಗೆ ವಿನಿಯೋಗ ಆಗಬೇಕಾಗಿತ್ತು. ನಗರಸಭೆಯ ಸದಸ್ಯರಿಗೆ ಅನುದಾನ ಹಂಚಿಕೆ ಮಾಡಿದಲ್ಲಿ ಅವರು ತಮ್ಮ ತಮ್ಮ ವಾರ್ಡ್ಗಳ ಅಭಿವೃದ್ಧಿಗೆ ವಿನಿಯೋಗಿಸುತ್ತಿದ್ದರು. ಆದರೆ ಇಲ್ಲಿ ಶಾಸಕರು ಸೂಚನೆ ಕೊಟ್ಟು ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ನಗರಸಭೆಯ ಜನಪ್ರತಿನಿಧಿಗಳ ಗಮನಕ್ಕೂ ತಾರದೆ ನಿರ್ಣಯ ಮಾಡಿ ಅನುದಾನವನ್ನು ಶಾಸಕರ ಕಚೇರಿಗೆ ವಿನಿಯೋಗಿಸಲು ನೀಡಿರುವುದು ಖಂಡನೀಯ. ಈ ನಡುವೆ ಪುಡಾ ಕಚೇರಿನ್ನು ಖಾಸಗಿ ಕಟ್ಟಡಕ್ಕೆ ವರ್ಗಾವಣೆ ಮಾಡುವ ಮೂಲಕ ನಗರಸಭೆಗೆ ಪುಡಾದ ಬಾಡಿಗೆಯಿಂದ ಬರುವ ಅನುದಾನವು ಕಡಿತವಾಗಿದೆ. ಇದೀಗ ಪುಡಾವು ಹೆಚ್ಚುವರಿ ರೂ. 16ಸಾವಿರ ಬಾಡಿಗೆ ಕೊಡಬೇಕಾಗಿ ಬಂದಿದೆ. ಒಂದು ಶಾಸಕರ ಕಚೇರಿಗಾಗಿ ಎಷ್ಟು ಖರ್ಚನ್ನು ಸರಕಾರದ ಖಜಾನೆಯಿಂದ ಖರ್ಚು ಮಾಡುತ್ತಾರೆ ಎಂಬುದು ಜನಸಾಮಾನ್ಯರು ಯೋಚನೆ ಮಾಡಬೇಕು. ಭ್ರಷ್ಟಾಚಾರದ ಬಗ್ಗೆ ನಾವು ಮಾತನಾಡುತ್ತೇವೆ. ಆದರೆ ಎಲ್ಲಿಂದ ಭ್ರಷ್ಟಾಚಾರ ಆಗುತ್ತಿದೆ. ಎಲ್ಲಿ ಸರಕಾರದ ಹಣ ಪೋಲಾಗುತ್ತಿದೆ. ಇದನ್ನು ಯೋಚನೆ ಮಾಡಬೇಕು. ಅದಕ್ಕಾಗಿ ಪುತ್ತೂರು ನಗರಸಭೆಯ ಜನರು ತೆರಿಗೆ ರೂಪದಲ್ಲಿ ನಗರಸಭೆಗೆ ಕಟ್ಟಿದ ಹಣವನ್ನು ಮತ್ತೆ ನಗರಭೆಗೆ ಜಿಲ್ಲಾಧಿಕಾರಿಯವರು ಕೊಡಿಸಬೇಕು. ಆ ಹಣದಿಂದ ನಗರಸಭೆಯ ಸದಸ್ಯರು ತಮ್ಮ ತಮ್ಮ ವಾರ್ಡ್ಗಳಲ್ಲಿ ಅಭಿವೃದ್ಧಿ ಮಾಡಬಹುದು. ಇಲ್ಲವಾದಲ್ಲಿ ಮುಂದಿನ ದಿನ ಬಿಜೆಪಿಯಿಂದ ನಗರಸಭೆಯ ಮುಂದೆ ಪ್ರತಿಭಟನೆ ಅನಿವಾರ್ಯವಾಗಬಹುದು ಎಂದು ಅವರುಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ನಾನು ಶಾಸಕನಾಗಿದ್ದ ಸಂದರ್ಭ ಲೋಕೋಪಯೋಗಿ ಇಲಾಖೆಯವರು ನೇರ ಸರಕಾರದಿಂದ ನೀಡಿದ ರೂ. 3ಲಕ್ಷದಲ್ಲಿ ನನ್ನ ಕಚೇರಿ ನಿರ್ಮಾಣ ಆಗಿದೆ ಎಂದರು. ಆದರೆ ಈಗಿನ ಶಾಸಕರು ಒಂದು ಕಚೇರಿಗಾಗಿ ಇಷ್ಟೊಂದು ಹೊರೆ ಭರಿಸುವುದು ಅಗತ್ಯವಿತ್ತಾ ಎಂದು ಪ್ರಶ್ನಿಸಿದರು
ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್.ಶೆಟ್ಟಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ, ಸದಸ್ಯೆ ಗೌರಿ ಬನ್ನೂರು ಉಪಸ್ಥಿತರಿದ್ದರು.
Posted by Vidyamaana on 2023-10-23 21:09:08 |
ಅಹಮದಾಬಾದ್, ಅ 23: ವಾಘ್ ಬಕ್ರಿ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅಕ್ಟೋಬರ್ 22ರಂದು ಅಹ್ಮದಾಬಾದ್ನಲ್ಲಿ ಮೃತಪಟ್ಟಿದ್ದಾರೆ.
ವಾಘ್ ಬಕ್ರೀ ಟೀ ಗ್ರೂಪ್ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅವರು ಸಾವನ್ನಪ್ಪಿದ್ದಾರೆ. ತಮ್ಮ ಮನೆ ಬಳಿ ನಿಂತಿದ್ದಾಗ ಪರಾಗ್ ದೇಸಾಯಿ ಅವರು ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದರು. ಬೀದಿ ನಾಯಿಗಳು ದಾಳಿ ಮಾಡಿದಾಗ ಪರಾಗ್ ದೇಸಾಯಿ ಅವರು ಕೆಳಗೆ ಬಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಬಳಿಕ ಬ್ರೈನ್ ಹೆಮರೇಜ್ನಿಂದ 49 ವರ್ಷದ ಪರಾಗ್ ದೇಸಾಯಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಪರಾಗ್ ದೇಸಾಯಿ ಅವರು ಕಳೆದ ಅಕ್ಟೋಬರ್ 15ರಂದು ಮನೆ ಬಳಿ ನಿಂತಿದ್ದಾಗ ಬೀದಿ ನಾಯಿಗಳು ದಾಳಿ ಮಾಡಿದ್ದವು. ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಈ ದಾಳಿಯನ್ನು ಗಮನಿಸಿ ಸೆಕ್ಯೂರಿಟಿ ಗಾರ್ಡ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪರಾಗ್ ದೇಸಾಯಿ ಅವರನ್ನು ಸ್ಥಳೀಯ ಶೆಲ್ಬಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ಬೀದಿ ನಾಯಿಯ ದಾಳಿಯಲ್ಲೂ ಹಲವು ಗಂಭೀರ ಗಾಯಗಳಾಗಿದ್ದು, ಬ್ರೇನ್ ಹೆಮರೇಜ್ಗೆ ತುತ್ತಾಗಿದ್ದರು. ಶೆಲ್ಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ದೇಸಾಯಿ ಅವರನ್ನು ಝೈಡಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಬ್ರೇನ್ ಹೆಮರೇಜ್ನಿಂದ ಉದ್ಯಮಿ ಪರಾಗ್ ದೇಸಾಯಿ ಅವರು ಗುಣಮುಖರಾಗದೆ ಸಾವನ್ನಪ್ಪಿದ್ದಾರೆ.
ಪರಾಗ್ ದೇಸಾಯಿ ಅವರು 2 ಸಾವಿರ ಕೋಟಿ ರೂಪಾಯಿ ವಹಿವಾಟಿನ ವಾಘ್ ಬಕ್ರೀ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದರು. ಗುಜರಾತ್ನಲ್ಲಿ ವಾಘ್ ಬಕ್ರೀ ಟೀ ಗ್ರೂಪ್ ಅನ್ನೋ ಬ್ರಾಂಡ್ ಹಾಗೂ ಕಂಪನಿಯನ್ನು ಕಟ್ಟಿ ಬೆಳೆಸಿದವರಲ್ಲಿ ಪರಾಗ್ ಅವರು ಪ್ರಮುಖರು. ಪರಾಗ್ ದೇಸಾಯಿ ಅವರ ಸಾವು ಎಲ್ಲರಿಗೂ ದಿಗ್ಭ್ರಮೆ ಮೂಡಿಸಿದೆ.
Posted by Vidyamaana on 2023-10-23 15:51:51 |
ಉಡುಪಿ, ಅ.23: ಮನೆಗೆ ಬರುತ್ತೇನೆಂದು ಹೇಳಿ ನಾಪತ್ತೆಯಾಗಿದ್ದ ಕಾರ್ಕಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಮೃತದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಅಸಹಜ ಸಾವೆಂದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಅಕ್ಟೋಬರ್ 19ರಂದು ಶೃತಿನ್ ಶೆಟ್ಟಿ ಕಾರ್ಕಳ ಠಾಣೆಗೆ ಕರ್ತವ್ಯಕ್ಕೆಂದು ತೆರಳಿ, ಅಲ್ಲಿ ರಜೆ ಹಾಕಿ ನಾಪತ್ತೆಯಾಗಿದ್ದರು.
ಪಡುಬಿದ್ರೆಯ ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) ಎರಡು ತಿಂಗಳ ಹಿಂದೆಯಷ್ಟೆ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ ಪಡೆದು ಕಾರ್ಕಳ ನಗರ ಠಾಣೆಗೆ ಬಂದಿದ್ದರು. 19 ರಂದು ಸಂಜೆ 7.30ಕ್ಕೆ ಪತ್ನಿಗೆ ಫೋನ್ ಮಾಡಿ, ಮನೆಗೆ ಬರುತ್ತಿದ್ದೇನೆ ಎಂದು ಶೃತಿನ್ ಹೇಳಿದ್ದರು. ಮನೆಗೂ ಬಾರದೇ ಇದ್ದುದರಿಂದ ಮತ್ತು ಪತಿಯ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಪತ್ನಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬಾವಿಯಲ್ಲಿ ಶವ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಸಾವಿನ ಹಿಂದೆ ಬೇರೆ ಕಾರಣ ಇದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2024-01-30 18:39:39 |
ಕಾಸರಗೋಡು: ಪಳ್ಳಂ ರೈಲ್ವೇ ಸೇತುವೆ ಬಳಿ ಮುಂಜಾನೆ ಸಮಯದಲ್ಲಿ ಇಬ್ಬರು ಯುವಕರಿಗೆ ರೈಲು ಢಿಕ್ಕಿಯಾಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.
ಯುವಕರಿಬ್ಬರು 20ರಿಂದ 25 ವರ್ಷದೊಳಗಿನವರಾಗಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಇಂದು ಮುಂಜಾನೆ 5:30ರ ಸುಮಾರಿಗೆ ಇಬ್ಬರು ಯುವಕರ ಮೃತದೇಹಗಳು ರೈಲು ಹಳಿಯಲ್ಲಿ ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.
ಇನ್ನು ಘಟನಾ ಸ್ಥಳಕ್ಕೆ ಸ್ಥಳೀಯರು ನೀಡಿದ ಮಾಹಿತಿಯಂತೆ ರೈಲ್ವೆ ಪೊಲೀಸರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
Posted by Vidyamaana on 2024-06-16 08:13:42 |
ಕುಂಬಳೆ : ಸರೋವರ ಕ್ಷೇತ್ರವೆಂದೇ ಖ್ಯಾತಿ ಪಡೆದ ಶ್ರೀ ಅನಂತಪುರದಲ್ಲಿ ತಿಂಗಳುಗಳ ಹಿಂದೆ ಪ್ರತ್ಯಕ್ಷಗೊಂಡ ನೂತನ ಮೊಸಳೆ ಮರಿ (ಬಬಿಯಾ – 3) ಇದೇ ಮೊದಲ ಬಾರಿಗೆ ಶುಕ್ರವಾರ ಸಂಜೆ ಕ್ಷೇತ್ರ ಪ್ರಾಂಗಣ ಏರುವ ಮೂಲಕ ತನ್ನ ಪೂರ್ಣ ದರ್ಶನ ತೋರಿದೆ.
ಸುಮಾರು 80 ವರ್ಷಗಳಿಂದ ಕ್ಷೇತ್ರದ ಕೊಳದಲ್ಲಿ ನೆಲೆಸಿದ್ದ ಮೊಸಳೆಯು 2022ರ ಅಕ್ಟೋಬರ್ 9ರಂದು ರಾತ್ರಿ ಈ ಹಿಂದೆ ಇದ್ದ ಮೊಸಳೆ (ಬಬಿಯಾ) ಮೃತಪಟ್ಟಿತ್ತು