ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


26 ವರ್ಷಗಳಿಂದ ಗ್ರಾಹಕರ ಪಾದ ರಕ್ಷಣೆ ಯಲ್ಲಿ ಸಾರ್ಥಕ ವ್ಯವಹಾರಕ್ಕೆ ಹೊಸ ರೂಪ

Posted by Vidyamaana on 2024-03-06 21:40:11 |

Share: | | | | |


26 ವರ್ಷಗಳಿಂದ ಗ್ರಾಹಕರ ಪಾದ ರಕ್ಷಣೆ ಯಲ್ಲಿ ಸಾರ್ಥಕ ವ್ಯವಹಾರಕ್ಕೆ ಹೊಸ ರೂಪ

ಪುತ್ತೂರು: ನಯಾ ಚಪ್ಪಲ್ ಬಜಾರ್ನ ನವೀಕೃತ ಮಳಿಗೆಯ ಉದ್ಘಾಟನೆ ಮಾರ್ಚ್ 7ರಂದು ಬೆಳಿಗ್ಗೆ 10ಕ್ಕೆ ದರ್ಬೆ ಬುಶ್ರಾ ಟವರ್ನಲ್ಲಿ ನಡೆಯಲಿದೆ.

1998ರಲ್ಲಿ ಆಗಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಎದುರುಗಡೆ ಇದ್ದ ಎ.ಎಂ. ಕಾಂಪ್ಲೆಕ್ಸ್ನಲ್ಲಿ ನಯಾ ಚಪ್ಪಲ್ ಬಜಾರ್ ಕಾರ್ಯಾಚರಣೆ ಆರಂಭಿಸಿತು. ಬಳಿಕ ದರ್ಬೆಯ ಬುಶ್ರಾ ಟವರ್ಗೆ ಸ್ಥಳಾಂತರಗೊಂಡಿತು. ಸುಮಾರು 26 ವರ್ಷಗಳ ಸುದೀರ್ಘ ಪಯಣದಲ್ಲಿ  ಗ್ರಾಹಕರ ಮನಸೂರೆಗೊಂಡಿರುವ ರಫೀಕ್ ಎಂ.ಜಿ. ಮಾಲಕತ್ವದ ನಯಾ ಚಪ್ಪಲ್ ಬಜಾರ್ ಇದೀಗ ಆಧುನಿಕತೆಗೆ ತಕ್ಕಂತೆ ನವೀಕೃತಗೊಂಡು ಶುಭಾರಂಭಗೊಳ್ಳುತ್ತಿದೆ.


ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಬ್ಬ ಅವರು ನವೀಕೃತ ಮಳಿಗೆಯನ್ನು ಉದ್ಘಾಟಿಸುವರು. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿರುವರು. ದರ್ಬೆ ಬುಶ್ರಾ ಟವರ್ನ ಮಾಲಕ ಅಬ್ದುಲ್ ಅಜೀಜ್ ಅವರು ಪ್ರಥಮ ಗ್ರಾಹಕರಾಗಿ ಉಪಸ್ಥಿತರಿರುವರು.

ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ್ ಪೈ, ಪುತ್ತೂರು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಮೊಹಮ್ಮದ್ ಹಾಜಿ ಕೆ.ಪಿ., ಮಹಾವೀರ ಮೆಡಿಕಲ್ ಸೆಂಟರಿನ ಡಾ. ಅಶೋಕ್ ಪಡಿವಾಳ್,  ದರ್ಬೆ ಬಿಓಬಿಯ ಸೀನಿಯರ್ ಮ್ಯಾನೇಜರ್ ಸಾದೀಕ್ ಎಸ್.ಎಂ., ಲಿಯೋ ಜಿಲ್ಲಾ ಅಧ್ಯಕ್ಷೆ ಡಾ. ರಂಜಿತಾ ಎಚ್. ಶೆಟ್ಟಿ, ಕ್ರಿಸ್ಟೋಫರ್ ಕಾಂಪ್ಲೆಕ್ಸಿನ ವಲೇರಿಯನ್ ಡಯಾಸ್, ಡಾ. ಜಸ್ಪ್ರಿತ್ ಸಿಂಗ್ ದಿಲ್, ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಜಯರಾಜ್ ಭಂಡಾರಿ, ಪುತ್ತೂರು ಅಗ್ರಝೋನ್, ಸಿಝ್ಲರ್ನ ಪಿ.ಎನ್. ಪ್ರಸನ್ನ ಕುಮಾರ್ ಶೆಟ್ಟಿ, ಮದರ್ ಇಂಡಿಯಾದ ಎಂ.ಜಿ. ರಜಾಕ್ ಅತಿಥಿಗಳಾಗಿರುವರು ಎಂದು ಪ್ರಕಟಣೆ ತಿಳಿಸಿದೆ.

ಮಳೆಗಾಗಿ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ: ಶಾಸಕರು ಭಾಗಿ

Posted by Vidyamaana on 2024-04-28 20:17:10 |

Share: | | | | |


ಮಳೆಗಾಗಿ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ: ಶಾಸಕರು ಭಾಗಿ

ಪುತ್ತೂರು: ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನ‌ಸಂಕಷ್ಡ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ಶಾಸಕರ ಸೂಚನೆಯಂತೆ ಪರ್ಜನ್ಯ ಜ‌ಪ ನೆರವೇರಿತು. ಜಪ ಕಾರ್ಯಕ್ರಮದಲ್ಲಿ‌ಶಾಸಕರಾದ ಅಶೋಕ್ ರೈಭಾಗವಹಿಸಿ ಮಳೆ ಗಾಗಿ ದೇವರಲ್ಲಿ‌ಪ್ರಾರ್ಥನೆ ಮಾಡಿದರು. ಈ‌ಸಂದರ್ಭದಲ್ಲಿ ಪಂಜಿಗುಡ್ಡೆ ಈಶಗವರಭಟ್,ನ್ಯಾಯವಾದಿ ಜಗನ್ನಿವಾಸ್ ರಾವ್ , ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ,ರಂಜಿತ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

ಬಂಟ್ವಾಳ: ಯಕ್ಷಗಾನದ ವೇಷಭೂಷಣ ತೊಟ್ಟು ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಗೆ ತರಾಟೆ

Posted by Vidyamaana on 2023-10-24 08:07:11 |

Share: | | | | |


ಬಂಟ್ವಾಳ: ಯಕ್ಷಗಾನದ ವೇಷಭೂಷಣ ತೊಟ್ಟು ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಗೆ ತರಾಟೆ

ಬಂಟ್ವಾಳ:ನವರಾತ್ರಿ ಸಂದರ್ಭದಲ್ಲಿ ವಿವಿಧ ನಮೂನೆಯ ಕಾಣಸಿಕ್ಕರೆ ಇಲ್ಲೊಬ್ಬ ವೇಷಧಾರಿ ಯಕ್ಷಗಾನದ ವೇಷ ಹಾಕಿದ್ದ ಎಂಬ‌ ಕಾರಣಕ್ಕಾಗಿ ಹಿರಿಯ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ಅವರು ವೇಷಧಾರಿ ವ್ಯಕ್ತಿಯನ್ನು ತಡೆದು,ವೇಷವನ್ನು ಕಳಚಿಸಿದ ಘಟನೆಯೊಂದು ಬಿಸಿರೋಡಿನಲ್ಲಿ ನಡೆದಿದ್ದು, ಅ ಸಂದರ್ಭದಲ್ಲಿ ನಡೆದ ಮಾತಿನ ವಿಡಿಯೋ ಒಂದು ವೈರಲ್ ಆಗಿದೆ‌.ದಾವಣಗೆರೆ ಮೂಲದ ವ್ಯಕ್ತಿ ಎಂದು ಹೇಳಲಾಗಿರುವ ಈತ ಶನಿವಾರ ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣ ಮಂದಿರದ ಬಳಿ ಯಕ್ಷಗಾನದ ವೇಷ ಹಾಕಿ ಹೋಗುತ್ತಿದ್ದ ಈ ವೇಳೆ ಆಗಮಿಸಿದ ಕಲಾವಿದ ಅಶೋಕ್ ‌ಶೆಟ್ಟಿ ಸರಪಾಡಿ ಅವರು ಯಕ್ಷಗಾನದ ವೇಷ ಹಾಕುವಂತಿಲ್ಲ,ಅದನ್ನು ತೆಗೆಯುವಂತೆ ಒತ್ತಾಯ ಮಾಡುವ ಬಗ್ಗೆ ವಿಡಿಯೋದಲ್ಲಿ ಕಂಡು ಬಂದಿದೆ. ಯಕ್ಷಗಾನ ವನ್ನು ನಾವು ಇಲ್ಲಿ ಪೂಜೆ ಮಾಡುತ್ತೇವೆ ನಿನಗೆ ಗೊತ್ತುಂಟಾ? ನೀನು ವೇಷು ಹಾಕಿ ಬಿಕ್ಷೆ ಬೇಡುತ್ತಿಯಾ ಎಂದು ಪ್ರಶ್ನಿಸಿದ್ದಾರೆ.


ನಾನು ತಪ್ಪು ಮಾಡಿದ್ದರೆ ನನಗೆ ಹೊಡೆಯಿರಿ ಎಂದು ವೇಷಧಾರಿ ಹೇಳಿದಾಗ ಹೊಡೆಯುವುದು ಅಲ್ಲ ವೇಷ ತೆಗೆಯದಿದ್ದಲ್ಲಿ ಕೈ ಕಾಲು ಮುರಿದು ಹಾಕುವಂತೆ ಬೆದರಿಸಿ,ಬೈದಿರುವ ವಿಡಿಯೋ ಇದೀಗ ವೈರಲ್ ಆಗಿದೆ.ವೇಷಧಾರಿಯ ವೇಷವನ್ನು ಕಳಚಿದ ಘಟನೆಯ ಬಗ್ಗೆ ವಿಡಿಯೋ ವೈರಲ್ ಆದ ಕೂಡಲೇ ಸಾರ್ವಜನಿಕ ವಲಯದಲ್ಲಿ ಪರವಿರೋಧದ ಚರ್ಚೆಗಳು ಆರಂಭವಾಗಿದೆ. ಯಕ್ಷಗಾನದ ಕಲೆಯ ಬಗ್ಗೆ ಅಪಚಾರ ಮಾಡುವುದು ಕೂಡ ಸರಿಯಲ್ಲ‌ಅವಹೇಳನಕಾರಿಯಾಗಿ ವೇಷಧರಿಸಿ ಕಲೆಯ ಬಗ್ಗೆ ನಿಂದನೆ ಮಾಡುವ ಕೆಲಸಗಳು ನಡೆಯಬಾರದು ಎಂಬ ಕೂಗು ಒಂದೆಡೆಯಾದರೆ, ವೇಷಧಾರಿಯ ಜೊತೆ ಇವರು ನಡೆದುಕೊಂಡ ನಡವಳಿಕೆ ಸರಿಯಲ್ಲ ಎಂಬ ಮಾತುಗಳು ಕೇಳಿಬಂದಿದೆ.


ಜಿಲ್ಲಾಡಳಿತ ಯಾವ ಯಾವ ವೇಷವನ್ನು ಹಾಕಬಾರದು ಎಂಬುದನ್ನು ಸುತ್ತೋಲೆ ಹೊರಡಿಸಬೇಕು. ಅಧಿಕೃತವಾಗಿ ಯಾವುದೇ ವೇಷವನ್ನು ಹಾಕಬಾರದು ಸುತ್ತೋಲೆಗಳಿಲ್ಲದ ಕಾರಣ ಅವರನ್ನು ತಡೆಯುವ ಹಕ್ಕು ಇಲ್ಲ ಎಂಬುದು ಇಲಾಖೆಯ ಸ್ಪಷ್ಟನೆಯಾಗಿದೆ.

ಕೆಡ್ಡಸ : ಭೂಮಿತಾಯಿ ರಜಸ್ವಲೆಯಾಗುವ ಹಬ್ಬ

Posted by Vidyamaana on 2023-02-03 02:43:14 |

Share: | | | | |


ಕೆಡ್ಡಸ : ಭೂಮಿತಾಯಿ ರಜಸ್ವಲೆಯಾಗುವ ಹಬ್ಬ

             ತುಳುವರು ಮೂಲತಃ ಕೃಷಿಕರು. ಅವರ ಎಲ್ಲಾ ಹಬ್ಬಗಳು ಕೃಷಿಆಧಾರಿತ ಹಿನ್ನೆಲೆಯಲ್ಲಿ ಆಚರಿಸಲ್ಪತ್ತದೆ. ಕೆಡ್ಡಸ ಹಬ್ಬವುತುಳುವರ ಪೊನ್ನಿ ಅಥವಾ ಪುಯಿಂತೆಲ್ (ಫೆಬ್ರವರಿ) ತಿಂಗಳಿನ27 ರಿಂದ ಕುಂಭ ಸಂಕ್ರಮಣದವರೆಗೆ ಆಚರಣೆ ಇರುತ್ತದೆ.ಸಾಮಾನ್ಯವಾಗಿ ಮೂರುದಿನ ಕೆಡ್ಡಸ ಆಚರಿಸಲ್ಪಡುತ್ತದೆ. ಇದುಶುರುಕೆಡ್ಡಸ, ನಡುಕೆಡ್ಡಸ ಮತ್ತು ಕಡೆಕೆಡ್ಡಸ ವೆಂದುಆಚರಣೆಗೊಳ್ಳುತ್ತದೆ. (ಇಂದು ಕಡೆಕೆಡ್ಡಸ)

ಏನಿದು ಕೆಡ್ಡಸ ?

        ನಮ್ಮ ಪೂರ್ವಿಕರು ಭೂಮಿಯನ್ನು ಹೆಣ್ಣೆಂದು ಪರಿಗಣಿಸಿ ಆರಾಧಿಸಿಕೊಂಡು ಬರುತ್ತಿದ್ದಾರೆ. ಆದ್ದರಿಂದ ಹೆಣ್ಣಾದ ಭೂಮಿತಾಯಿಯು ವರ್ಷಕ್ಕೆ ಮೂರುದಿನ ರಜಸ್ವಲೆಯಾಗುತ್ತಾಳೆ (ಋತುಮತಿ) ಎಂದು ನಂಬಿಕೆ. ಈ ಹಿನ್ನೆಲೆಯಲ್ಲಿ ಕೆಡ್ಡಸವನ್ನು ಭೂಮಿತಾಯಿ ಮೀಯುವ ಹಬ್ಬವೆಂದು ಕರೆಯುತ್ತಾರೆ. ಋತುಮತಿ ಅಥವಾ ಪುಷ್ಪವತಿಯಾದ ಹೆಣ್ಣು ಹೆಂಗಸಾದಳು ಎಂದು ಅರ್ಥ. ಈ ಮೂಲಕ ಭೂಮಿದೇವಿಯು ಫಲವತಿಯಾಗುವ ಅರ್ಹತೆಯನ್ನು ಪಡೆಯುತ್ತಾಳೆ. ಆದ್ದರಿಂದ ಕೆಡ್ಡಸ ಹಬ್ಬವು ಫಲವಂತಿಕೆಯ ಸಂಕೇತವಾಗಿ ಆಚರಣೆಗೆ ಒಳಪಡುವ ತುಳುವರ ಪ್ರಮುಖ ಹಬ್ಬವಾಗಿದೆ.ಕೆಡ್ಡಸದ ಸಮಯದಲ್ಲಿ ಮೂಡಣ ದಿಕ್ಕಿನಿಂದ ಒಂದು ವಿಲಕ್ಷಣವಾದ ಗಾಳಿ ಬೀಸುತ್ತದೆ ಇದನ್ನು ಕೆಡ್ಡಸದ ಗಾಳಿ ಎಂದು ಕರೆಯುತ್ತಾರೆ. ಈ ಸಂದರ್ಭ ಋತುಸ್ನಾನ ಮುಗಿಸಿ ಹೆಣ್ಣು ಹೋಗಿ ಹೆಂಗಸಾಗಿರುವ ಭೂಮಿದೇವಿಯು ಈ ಗಾಳಿಯಿಂದ ಪುಳಕಗೊಂಡು ಫಲವತಿಯಾಗಲು ಸಜ್ಜಾಗುತ್ತಾಳೆಂದು ನಂಬಿಕೆ.

      ಕೆಡ್ಡಸದ ಮೂರುದಿನ ಭೂಮಿದೇವಿ ರಜಸ್ವಲೆಯಾದ ಕಾರಣ ಆಕೆ ಸೂಕ್ಷ್ಮವಾಗಿರುತ್ತಾಳೆ. ಆದ್ದರಿಂದ ಈ ದಿನಗಳಲ್ಲಿ ನೆಲ ಅಗೆಯುವುದು, ಉಳುವುದು, ಮರ ಕಡಿಯುವುದು ನಿಷಿದ್ಧ. ಈ ಸಂದರ್ಭ ಕೃಷಿಕಾರ್ಯದಲ್ಲಿ ತೊಡಗಿದರೆ ಭೂಮಿದೇವಿಯು ನೋವನ್ನನುಭವಿಸಿ ಬಂಜೆಯಾಗುತ್ತಾಳೆ ಎಂದು ನಂಬಿರುವ ತುಳುವರು ಕೃಷಿಕೆಲಸವನ್ನು ಸಂಪೂರ್ಣ ಸ್ಥಗಿತಗೊಳಿಸುತ್ತಾರೆ.

ಶುರುಕೆಡ್ಡಸ :

        ಕೆಡ್ಡಸದಂದು ಸ್ತ್ರೀಯರು ಅಂಗಳದ ಮೂಲೆಯಲ್ಲಿ ನೆಲವನ್ನು ಸಾರಿಸಿ, ಗೋಮಯದಿಂದ ಶುದ್ದೀಕರಿಸಿ ವಿಭೂತಿಯಿಂದ ಅಗಲವಾದ ವೃತ್ತವನ್ನು ರಚಿಸುತ್ತಾರೆ. ಅದರಲ್ಲಿ ಬಿಳಿಯ ಮಡಿಬಟ್ಟೆ, ಗೆಜ್ಜಕತ್ತಿ, ತೆಂಗಿನ ಸೋಗೆಯ ಹಸಿಕಡ್ಡಿ ಇಟ್ಟು ಭೂಮಿದೇವಿಯ ಸಾನಿಧ್ಯ ರಚಿಸಿ ಪೂಜಿಸುತ್ತಾರೆ.

       ಕೆಡ್ಡಸದ ಪ್ರಾರಂಭದ ದಿನ ಬೆಳಗ್ಗೆ ನವಧಾನ್ಯಗಳನ್ನು (ಇದರಲ್ಲಿ ಹುರುಳಿ ಪ್ರಮುಖವಾದುದು) ಹುರಿದು ಪುಡಿಮಾಡಿ ಬೆಲ್ಲ, ಅರಳು, ತೆಂಗಿನ ಚೂರುಗಳನ್ನು ಬೆರಸಿ ಭೂಮಿದೇವಿಯ ಸಾನಿಧ್ಯದೆದರು ತುದಿಬಾಳೆಯಲ್ಲಿ ಬಡಿಸಿ ನಮಿಸುತ್ತಾರೆ. ಇವು ಬಯಕೆಯ ಸಂಕೇತ. ನಂತರ ಇದನ್ನು ಮನೆಮಂದಿ ಹಂಚಿ ತಿನ್ನುತ್ತಾರೆ. ಇದನ್ನು ಕುಡುಅರಿ ಅಥವಾ ನನ್ನೆರಿ ಎಂದು ಕರೆಯುತ್ತಾರೆ.

ನಡುಕೆಡ್ಡಸ :

         ಅಂದು ಮೀನು-ಮಾಂಸ ತಿನ್ನುವ ಜಾತಿಯ ಗಂಡಸರು ಬೇಟೆಯಾಡಿ ಲಭಿಸಿದ ಮಾಂಸದ ಅಡುಗೆಯನ್ನು ಮನೆಮಂದಿಯೆಲ್ಲಾ ಸಂಭ್ರಮದಿಂದ ಸವಿಯುತ್ತಾರೆ. ಈ ದಿನ ಪುಂಡದ ಹಕ್ಕಿಯ ಬೇಟೆ ವಿಶೇಷ. ಕೆಡ್ಡಸದ ಸಮಯದಲ್ಲಿ ಪುಂಡದ ಹಕ್ಕಿಗೆ ಜ್ವರ ಬರುತ್ತದೆ ಎಂಬ ಪ್ರತೀತಿಯಿದೆ. ಜ್ವರದಿಂದ ಬಳಲುವ ಈ ಹಕ್ಕಿ ಕೆರೆಯ ಬದಿಯಲ್ಲಿ ಪೊದೆಗಳ ಬದಿಯಲ್ಲಿ ಸುಲಭವಾಗಿ ಸಿಗುತ್ತದೆಯಂತೆ

ಕಡೆ ಕೇಡ್ಡಸ 

        ಮೂರನೆಯ ದಿನ ಮುಂಜಾನೆ ಮುತ್ತೈದೆಯರು ಸ್ನಾನ ಮಾಡಿ ಏಳು ಲೋಳೆಸರದ ಎಲೆಗಳನ್ನು ಪಶ್ಚಿಮಕ್ಕೆ ತುದಿ ಬರುವಂತೆ ಸಾಲಾಗಿ ಇರಿಸಿ ದೀಪ, ಊದುಬತ್ತಿ ಹಚ್ಚಿ, ಮಣೆಯ ಮೇಲೆ ಎಣ್ಣೆ, ಸೀಗೆಪುಡಿ, ಅರಸಿನ ಕುಂಕುಮ, ಪಚ್ಚೆಹೆಸರು ಪುಡಿ, ವೀಳ್ಯದೆಲೆ ಇತ್ಯಾದಿಗಳನ್ನು ಭೂಮಿದೇವಿಯ ಸ್ನಾನಕ್ಕೋಸ್ಕರ ಇಡುತ್ತಾರೆ. ನಂತರ ಭೂಮಿದೇವಿಯ ಅಲಂಕಾರಕ್ಕಾಗಿ ಕನ್ನಡಿ, ಬಾಚಣಿಗೆ, ಕರಿಮಣಿಗಳನ್ನು ಇರಿಸುತ್ತಾರೆ. ಈ ಪ್ರಕಾರ ರಜಸ್ವಲೆಯಾದ ಭೂಮಿದೇವಿಯು ಮಿಂದು ಶುದ್ಧಳಾಗಿ ಫಲವತಿಯಾಗುತ್ತಾಳೆ ಎಂದು ತುಳುವರ ನಂಬಿಕೆ.

      ಪ್ರಕೃತಿ ಮಾತೆಯಾದ ಭೂಮಿದೇವಿಯನ್ನು ಪೂಜಿಸುವ ಈ ಹಬ್ಬವು ಇಂದು ಸಂಪೂರ್ಣ ನಗಣ್ಯಕ್ಕೊಳಗಾಗಿದ್ದು ಅತ್ಯಂತ ಖೇದಕರ ಸಂಗತಿ. ಇನ್ನಾದರೂ ನಮ್ಮ ಪೂರ್ವಿಕರು ಹಬ್ಬ-ಹರಿದಿನಗಳಿಗೆ ನೀಡಿದ ಮಹತ್ವ, ಹಿನ್ನೆಲೆಯನ್ನು ಅರಿತು ಅವುಗಳನ್ನು ಸಾಧ್ಯವಾಗುವ ಮಟ್ಟಿಗೆ ಆಚರಿಸಲು ಪ್ರಯತ್ನ ಪಡೋಣ. © ವಿಶ್ವನಾಥ ಪಂಜಿಮೊಗರು @

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Posted by Vidyamaana on 2024-04-04 15:56:20 |

Share: | | | | |


ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.


ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಯಲ್ಲಿ ಸಾಗಿ ಬಂದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್‌ : ರಾಜ್ಯ ಸರ್ಕಾರದಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ವಿತರಣೆ

Posted by Vidyamaana on 2024-06-03 08:28:45 |

Share: | | | | |


ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್‌ : ರಾಜ್ಯ ಸರ್ಕಾರದಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ವಿತರಣೆ

ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮನೆ ಬಾಗಿಲಿಗೆ ಆರೋಗ್ಯ ಸೇವೆ ಪೂರೈಸಲು ಮುಂದಾಗಿದೆ.

ಹೌದು, ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ಪೂರೈಸಲು ನಮ್ಮ ಸರ್ಕಾರ ಮುಂದಾಗಿದೆ.



Leave a Comment: