Posted by vidyamaana on 2023-09-17 18:44:13 | Last Updated by Vidyamaana on 2023-09-17 18:44:13
ಪುತ್ತೂರು: ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಚಾಲನೆ ನೀಡಿದರು. ಬಳಿಕ ಪುತ್ತೂರು ಪೇಟೆಯ ಮುಖ್ಯರಸ್ತೆಯಿಂದಾಗಿ ಸಾಗಿದ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆ ಬೊಳುವಾರು ವಿಶ್ವಕರ್ಮ ಸಭಾಭವನದವರೆಗೆ ಸಾಗಿತು.
ಇಂದು ಮಹತ್ವಾಕಾಂಕ್ಷಿ ವಿಶ್ವಕರ್ಮ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ; ಏನಿದು ಸ್ಕೀಮ್.? ಯಾರಿಗೆ ಲಾಭ.? ಡಿಟೈಲ್ಸ್ ಇಲ್ಲಿದೆ
https://vidyamaana.com/news/prime-Minister-modi-launched-ambitious-Vishwakarma-project-today
ಮೆರವಣಿಗೆಯಲ್ಲಿ ಚೆಂಡೆ, ಕುಣಿತ ಭಜನೆ, ವಿಶ್ವಕರ್ಮ ದೇವರ ಸ್ತಬ್ದಚಿತ್ರ ಗಮನ ಸೆಳೆಯಿತು. ಇದನ್ನನುಸರಿಸಿ ವಿಶ್ವಕರ್ಮ ಸಮುದಾಯದವರು ಮೆರವಣಿಗೆಯಲ್ಲಿ ಸಾಗಿಬಂದರು.ವಿಶ್ವಕರ್ಮ ಸಮಾಜದ ವಿವಿಧ ಸಂಘಟನೆಗಳಾದ ಬೊಳುವಾರು ವಿಶ್ವಬ್ರಾಹ್ಮಣ ಸೇವಾ ಸಂಘ,
ವಿಶ್ವಕರ್ಮ ಯುವ ಸಮಾಜ, ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘ ಪುತ್ತೂರು, ಪುತ್ತೂರು ವಿಧಾನಸಭಾ ಕ್ಷೇತ್ರದ ಶ್ರೀ ಆನೆಗೊಂದಿ ಗುರು ಸೇವಾ ಪರಿಷತ್ತಿನ ಪುತ್ತೂರು ವಲಯ, ಪುತ್ತೂರು ವಿಶ್ವಕರ್ಮ ಯುವ ಮಿಲನ್, ಪಂಚಮುಖಿ ಗೆಳೆಯರ ಬಳಗ ಕೋರ್ಟ್ ರಸ್ತೆ ಪುತ್ತೂರು, ವಿಶ್ವಕರ್ಮ ಮಹಿಳಾ ಮಂಡಳಿ, ಬೀರಮಲೆ ವಿಶ್ವಕರ್ಮ ಸೇವಾ ಸಂಘ, ಬೀರಮಲೆ ಗಾಯತ್ರಿ ಮಹಿಳಾ ಮಂಡಳಿ, ಉಪ್ಪಿನಂಗಡಿ ವಿಶ್ವಕರ್ಮ ಸೇವಾ ಸಂಘ, ಬೊಳುವಾರು ಭಾವನಾ ಕಲಾ ಆರ್ಟ್ಸ್, ಬೀರಮಲೆ ವಿಶ್ವಕರ್ಮ ಯುವಕ ಸಂಘ, ಉಪ್ಪಿನಂಗಡಿ ಕಾಳಿಕಾಂಬಾ ಮಹಿಳಾ ಸಂಘ, ದ.ಕ. ಜಿಲ್ಲಾ ಕಬ್ಬಿಣ ಕೆಲಸಗಾರರ ಸಂಘ ಸಹಕರಿಸಿತು.
Posted by Vidyamaana on 2023-03-14 09:32:15 |
ಬಂಟ್ವಾಳ: ಮಹತ್ವದ ಬೆಳವಣಿಗೆಯಲ್ಲಿ ಐತಿಹಾಸಿಕ ಖ್ಯಾತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತಲಿನ ೨ ಕಿ.ಮೀ. ಪರಿಸರದಲ್ಲಿ ಯಾವುದೇ ಗಣಿಗಾರಿಕೆ ಅಥವಾ ಕ್ರಷರ್ ಗಣಿಗಾರಿಕೆಯನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶಿಸಿದೆ.
ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತಲಿನ ೨ ಕಿಲೋ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳಿಗೆ ಕಾಯ್ದಿರಿಸಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಆದ್ದರಿಂದ ಸುತ್ತಲಿನ ೨ ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆ ಮಾಡುವಂತಿಲ್ಲ ಎಂದು ಆದೆಶದಲ್ಲಿ ತಿಳಿಸಲಾಗಿದೆ.
ಕಳೆದ ಕೆಲ ವರ್ಷಗಳಿಂದ ಈ ಭಾಗದಲ್ಲಿ ಅವ್ಯಾಹತವಾಗಿ ಗಣಿಗಾರಿಕೆ ನಡೆಯುತ್ತಿತ್ತು. ಇದರಿಂದಾಗಿ ಧಾರ್ಮಿಕ ಹಾಗೂ ಐತಿಹಾಸಿಕ ಪ್ರಾಧಾನ್ಯತೆ ಹೊಂದಿರುವ ಶ್ರೀ ಕಾರಿಂಜೇಶ್ವರ ದೇವಸ್ಥಾನ ಅಪಾಯವನ್ನು ಎದುರು ನೋಡುವಂತಾಗಿತ್ತು. ಆದ್ದರಿಂದ ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ಪ್ರಬಲ ವಿರೋಧವನ್ನು ವ್ಯಕ್ತಪಡಿಸಿತ್ತು. ಹಿಂದೂ ಪರ ಸಂಘಟನೆಗಳು ಹಾಗೂ ಭಕ್ತರು ಹೋರಾಟಕ್ಕೆ ಸಾಥ್ ನೀಡಿದ್ದರು. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಸಮಸ್ಯೆಯ ಗಂಭೀರತೆ ಅರಿತು, ರಾಜ್ಯ ಸರಕಾರದಿಂದ ಆದೇಶ ಹೊರಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೀಗ ರಾಜ್ಯ ಸರ್ಕಾರದ ಆದೇಶ ಸ್ಥಳೀಯರಿಗೆ ನಿರಾಳತೆಯನ್ನು ನೀಡಿದೆ.
Posted by Vidyamaana on 2023-10-01 08:55:11 |
ಪುತ್ತೂರು: ಟ್ರ್ಯಾಕ್ಟರ್ - ಕಾರು ಮುಖಾಮುಖಿ ಢಿಕ್ಕಿಯಾದ ಘಟನೆ ನರಿಮೊಗರಿನ ಪಾಪೆತ್ತಡ್ಕ ಸಮೀಪ ಭಾನುವಾರ ಬೆಳಿಗ್ಗೆ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ನಜ್ಜುಗುಜ್ಜಾಗಿದ್ದು, ಗುರುತು ಸಿಗದ ಸ್ಥಿತಿಗೆ ತಲುಪಿದೆ. ಕಾರಿನ ಆ್ಯರ್ ಬ್ಯಾಗ್ ತೆರೆದುಕೊಂಡಿದ್ದು, ಹಾನಿಯಾಗಿದೆ.
ಟ್ರ್ಯಾಕ್ಟರ್ ಚಾಲಕ ಪವಾಡಸದೃಶ ಪಾರಾಗಿದ್ದು, ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಬೆಂಗಳೂರುನಿಂದ ಕಾಣಿಯೂರು ಮಾರ್ಗವಾಗಿ ಪುತ್ತೂರಿಗೆ ಬರುತ್ತಿದ್ದ ಕಾರಿನಲ್ಲಿದ್ದವರು, ಅಪಾಯದಿಂದ ಪಾರಾಗಿದ್ದಾರೆ.
ಈ ಪರಿಸರ ಹಲವು ಅಪಘಾತಗಳು, ಸಾವು - ನೋವುಗಳಿಗೆ ಸಾಕ್ಷಿಯಾಗಿದೆ. ಇದನ್ನು ಅಪಘಾತ ವಲಯ ಎಂದೂ ಗುರುತಿಸಲಾಗಿದೆ. ಇದೀಗ ಅಪಘಾತ ನಡೆದ ಸ್ಥಳದಲ್ಲೇ ಗ್ರಾಮ ಪಂಚಾಯತ್ ಹಾಕಿರುವ - "ಅಪಘಾತ ಸ್ಥಳ, ನಿಧಾನವಾಗಿ ಚಲಿಸಿ" ಎಂಬ ಬೋರ್ಡ್ ಇದೆ.
ಅಪಘಾತದ ಬಗೆಗಿನ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Posted by Vidyamaana on 2023-08-11 16:38:18 |
ಸುಳ್ಯ :ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಕಳಂಜದಲ್ಲಿ ಕಳೆದ ವರ್ಷ ಸಂಭವಿಸಿದ್ದ ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿದ್ದ ನಾಲ್ಕನೇ ಆರೋಪಿ ಶಿವಪ್ರಸಾದ್ ಕಳಂಜ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ.
ಹೈಕೋರ್ಟ್ ಆದೇಶದ ಮೇಲೆ ಬಿಡುಗಡೆ ಮಾಡಲಾಗಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಪೀಠವು ಆದೇಶವನ್ನು ಹೊರಡಿಸಿದೆ. ಇತ್ತೀಚೆಗೆ ಪ್ರಕರಣದ 7ನೇ ಆರೋಪಿಯಾಗಿರುವ ಜಿಮ್ ರಂಜಿತ್ ಜಾಮೀನು ಕೋರಿ ವಕೀಲರ ಮೂಲಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು ಆ.೪ ರಂದು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿತ್ತು.2022 ಜು.19ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡ ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಗಂಭೀರ ಗಾಯಗೊಂಡ ಮಸೂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು
Posted by Vidyamaana on 2023-04-27 18:02:21 |
ಪುತ್ತೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸ್ಪರ್ಧಿಸುವ ಶಿಗ್ಗಾಂವಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿರುವ ವರುಣ ಕ್ಷೇತ್ರದಲ್ಲಿ ಲಂಚ ಭ್ರಚ್ಟಾಚಾರ ವಿರುದ್ಧದ ಆಂದೋಲನದ ಭಾಗವಾಗಿ ಡಾ. ಯು.ಪಿ. ಶಿವಾನಂದ ಅವರು ಪ್ರಚಾರ ಕಾರ್ಯ ನಡೆಸಿದರು.
Posted by Vidyamaana on 2023-08-25 06:38:10 |
ಮಂಗಳೂರು: ಲೋನ್ ಆಪ್ ಮೂಲಕ ಸಾಲ ಪಡೆದ ಯುವತಿಗೆ ನಗ್ನ ಫೋಟೋ ವೈರಲ್ ಮಾಡುವ ಬೆದರಿಕೆ ಹಾಕಿದ ಹಿನ್ನೆಲೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ಯುವತಿ ಎ.15ರಂದು ಗೂಗಲ್ ಪ್ಲೇ ಸ್ಟೋರ್ನಿಂದ ಕ್ವಿಕ್ ಮನಿ ಎಂಬ ಲೋನ್ ಆಯಪ್ ಡೌನ್ಲೋಡ್ ಮಾಡಿದ್ದಳು.ಅದರಲ್ಲಿ 10,000 ರೂ. ಸಾಲಕ್ಕೆ ಅಪ್ಪೆ, ಮಾಡಿದ್ದಳು. ಆಕೆಯ ಖಾತೆಗೆ ಕೂಡಲೇ 7,500 ರೂ. ಜಮೆ ಆಗಿತ್ತು. ಕೆಲವು ದಿನಗಳ ಬಳಿಕ ಅದನ್ನು ಮರುಪಾವತಿ ಮಾಡಿದ್ದಳು. ಆ ಬಳಿಕ ಹಲವು ವಾಟ್ಸಾಪ್ ಸಂಖ್ಯೆಗಳಿಂದ ಕರೆ ಮಾಡಿದ ಅಪರಿಚಿತರು ಕಡ್ಡಾಯವಾಗಿ ಪುನಃ ಸಾಲ ಪಡೆಯಬೇಕು ಎಂದು ಒತ್ತಾಯಿಸಿದರು.
ಆಕೆಯ ಖಾತೆಗೆ 14,000 ರೂ. ಜಮೆ ಮಾಡಿದರು. ಅದನ್ನು ಕೂಡ ಯುವತಿ ಮರುಪಾವತಿಸಿದ್ದಳು. ಆದರೂ ಆಕೆಗೆ ಕರೆ ಮಾಡಿದ ಅಪರಿಚಿತರು ಹೆಚ್ಚಿನ ಹಣ ಪಾವತಿಸುವಂತೆ ಒತ್ತಾಯಿಸಿದರು. ಆಕೆಯ ಖಾತೆಯಿಂದ 51,000 ರೂ.ಗಳನ್ನು ವರ್ಗಾಯಿಸಿಕೊಂಡರು. ಆ ಬಳಿಕವೂ ಹೆಚ್ಚಿನ ಹಣ ನೀಡುವಂತೆ ಒತ್ತಾಯಿಸಿದರು. ಒಂದು ವೇಳೆ ಹಣ ನೀಡದಿದ್ದರೆ ಆಕೆಯ ಫೋಟೋವನ್ನು ಹುಡುಗನೊಂದಿಗೆ ನಗ್ನವಾಗಿ ಇರುವಂತೆ ಎಡಿಟ್ ಮಾಡಿ ಸ್ನೇಹಿತರು ಹಾಗೂಸಂಬಂಧಿಕರಿಗೆ ಕಳುಹಿಸಲಾಗುವುದು ಮತ್ತು ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ
Posted by Vidyamaana on 2024-03-19 21:42:20 |
ಮಂಗಳೂರು: ಒಂದೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಇದೀಗ ಬಿಜೆಪಿ ಭದ್ರ ಬಾಹುವಿನಲ್ಲಿ ಬಂಧಿಯಾಗಿದೆ. ಇದೀಗ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಸಮರ್ಥ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದೀಗ ಚೌಟಾ ಅವರಿಗೆ ಪ್ರತಿಸ್ಪರ್ಧಿಯಾಗಿ ಹಾಗೂ ಕಳೆದುಕೊಂಡ ಕ್ಷೇತ್ರವನ್ನು ಮರು ಸಂಪಾದಿಸಿಕೊಳ್ಳುವುದೇ ಕಾಂಗ್ರೆಸ್ ಮುಂದಿರುವ ಬಹುದೊಡ್ಡ ಸವಾಲು.
ವಿಧಾನಸಭಾ ಚುನಾವಣೆಯಂತೆ ಬಿಜೆಪಿ ಬಂಡಾಯ ಕಾಂಗ್ರೆಸಿಗೆ ವರದಾನ ಎಂಬ ಲೆಕ್ಕಾಚಾರ ಇದೀಗ ಉಲ್ಟಾ ಆಗಿದೆ. ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಗೆಲುವು ಅಷ್ಟು ಸುಲಭದ ಮಾತಲ್ಲ. ಹಾಗಾಗಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಇನ್ನು ಅಧಿಕೃತ ಮಾಹಿತಿ ಹೊರಹಾಕಿಲ್ಲ.
ಜಾತಿ ಲೆಕ್ಕಾಚಾರ:
ಬಂಟ ಸಮುದಾಯದ ಕ್ಯಾ. ಚೌಟ ಅವರಿಗೆ ಬಿಜೆಪಿ ಟಿಕೇಟ್ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಲ್ಲವ ಮುಖಂಡನಿಗೆ ಟಿಕೇಟ್ ನೀಡಲು ಯೋಜನೆ ಸಿದ್ಧಪಡಿಸಿಕೊಂಡಿದೆ ಎಂಬ ವಿಶ್ಲೇಷಣೆ ಕೇಳಿಬಂದಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಂಟ ಸಮುದಾಯದ ನಳಿನ್ ಕುಮಾರ್ ಕಟೀಲ್ ಎದುರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅದೇ ಬಂಟ ಸಮುದಾಯದ ಮಿಥುನ್ ರೈ ಕಣಕ್ಕಿಳಿದಿದ್ದರು. ಆದರೆ ಮೋದಿ ಅಲೆಯ ಮುಂದೆ ಎಲ್ಲವೂ ಕೊಚ್ಚಿಕೊಂಡುಹೋಗಿತ್ತು. ಬಂಟ ಸಮುದಾಯದ ಕಾಂಗ್ರೆಸ್ ಲೆಕ್ಕಾಚಾರ ಬುಡಮೇಲಾಗಿತ್ತು.
ಕರಾವಳಿಯಲ್ಲಿ ಬಂಟ, ಬಿಲ್ಲವ ಸಮುದಾಯದ ಸಂಖ್ಯೆ ಹೆಚ್ಚಿದೆ. ಹಾಗಾಗಿ ಬಂಟ ಸಮುದಾಯದ ಪ್ರತಿಸ್ಪರ್ಧಿಯಾಗಿ ಬಿಲ್ಲವ ಸಮುದಾಯದ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂಬುದು ಸದ್ಯದ ಮಾಹಿತಿ.
ಜನಾರ್ದನ ಪೂಜಾರಿ ಆಪ್ತ!
ಗುರು ಬೆಳದಿಂಗಳು ಕಾರ್ಯಕ್ರಮದ ಮೂಲಕ ಫೇಮಸ್ ಆಗಿರುವ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಆಪ್ತ ಪದ್ಮರಾಜ್ ರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಎನ್ನುವ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಪದ್ಮರಾಜ್ ಹೆಸರನ್ನೇ ಅಂತಿಮ ಮಾಡಿದೆ ಎಂದು ತಿಳಿದುಬಂದಿದೆ.